Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

ಮುಗಿಲು ಮುಟ್ಟಿದ ಸಾವಿರಾರು ಭಕ್ತರ ಹರ್ಷೋದ್ಘಾರ

Team Udayavani, Apr 24, 2024, 11:48 AM IST

1-y-a

ಶಿಕಾರಿಪುರ: ತಾಲೂಕಿನ ಐತಿಹಾಸಿಕ ಹಿನ್ನೆಲೆ ಹೊಂದಿರುವ ಹುಚ್ಚರಾಯಸ್ವಾಮಿ (ಆಂಜನೇಯ) ದೇವರ ಬ್ರಹ್ಮ ರಥೋತ್ಸವವು ಮಂಗಳವಾರ ಪಟ್ಟಣದಲ್ಲಿ ಸಾವಿರಾರು ಭಕ್ತ ಸಮೂಹದ ಮಧ್ಯೆ ವಿಜೃಂಭಣೆಯಿಂದ
ನೆರವೇರಿತು.

ರಾಜ್ಯದಲ್ಲಿ ಪ್ರಖ್ಯಾತಿ ಪಡೆದಿರುವ ಆಂಜನೇಯ ದೇವಸ್ಥಾನ ಇದಾಗಿದೆ. ಹುಚ್ಚರಾಯಸ್ವಾಮಿ ದೇವರ ಬ್ರಹ್ಮ ರಥೋತ್ಸವಕ್ಕೆ ಮಂಗಳವಾರ ಬೆಳಗ್ಗೆ 9.40ರಿಂದ9.50ರವರೆಗಿನ ಮಿಥುನ ಲಗ್ನದ ಶುಭ ಸಂದರ್ಭದಲ್ಲಿ ಚಾಲನೆ ದೊರೆಯಿತು.

ದೇವಸ್ಥಾನ ಅವರಣದಿಂದ ಹೊರಟ ಬ್ರಹ್ಮ ರಥೋತ್ಸವಕ್ಕೆ ಸಾಗರ ಉಪವಿಭಾಗಾಧಿಕಾರಿ ಆರ್‌. ಯತೀಶ್‌ ಹಾಗೂ ತಹಶೀಲ್ದಾರ್‌ ಮಲ್ಲೇಶಪ್ಪ ಬಿ. ಪೂಜಾರ್‌ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಭಕ್ತರು ಪಲ್ಲಕ್ಕಿಯಲ್ಲಿ ಹೊತ್ತು ತಂದ ಹುಚ್ಚರಾಯಸ್ವಾಮಿ (ಆಂಜನೇಯ) ದೇವರ ಉತ್ಸವ ಮೂರ್ತಿಯನ್ನು ಬ್ರಹ್ಮರಥೋತ್ಸವ ಸುತ್ತಲೂ ಪ್ರದಕ್ಷಿಣೆ ಹಾಕಿಸಿ ನಂತರ ಬ್ರಹ್ಮರಥೋತ್ಸವದಲ್ಲಿ ಪ್ರತಿಷ್ಠಾಪಿಸಿದರು.

ನಂತರ ಸಂಪ್ರದಾಯದಂತೆ ಹುಚ್ಚರಾಯಸ್ವಾಮಿ ದೇವಸ್ಥಾನ ಅವರಣದಿಂದ ನಾದಸ್ವರ (ಮಂಗಳ ವಾದ್ಯ),ಬ್ಯಾಂಡ್‌ಸೆಟ್‌ ವಾದ್ಯದ ಮೆರವಣಿಗೆಯೊಂದಿಗೆ ಸಾವಿರಾರು ಭಕ್ತರು ತೇರುಬೀದಿಯಲ್ಲಿರುವ ಮಾರಿಕಾಂಬಾ
ಗದ್ದುಗೆವರೆಗೂ ಬ್ರಹ್ಮರಥವನ್ನು ಎಳೆದು ತಂದು ನಿಲ್ಲಿಸಿದರು. ಬ್ರಹ್ಮ ರಥ ಎಳೆಯುವ ಸಂದರ್ಭದಲ್ಲಿ ಯುವಕರು ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದರು.

ಬ್ರಹ್ಮರಥೋತ್ಸವ ಪ್ರಯುಕ್ತ ಹುಚ್ಚರಾಯಸ್ವಾಮಿ ದೇವರ ಮೂರ್ತಿ, ದೇವಸ್ಥಾನ ಹಾಗೂ ಬ್ರಹ್ಮರಥವನ್ನು ವಿವಿಧ
ಪುಷ್ಪಗಳಿಂದ ಸಿಂಗರಿಸಲಾಗಿತ್ತು. ಮುಜರಾಯಿ ಇಲಾಖೆ ಭಕ್ತರಿಗೆ ಅನ್ನಸಂತರ್ಪಣೆ ಆಯೋಜಿಸಿತ್ತು. ವಿವಿಧ ಸಂಘಟನೆ ಪದಾಧಿಕಾರಿಗಳು ಭಕ್ತರಿಗೆ ಪಾನಕ ವಿತರಿಸಿದರು.

ಬ್ರಹ್ಮರಥೋತ್ಸವದಲ್ಲಿ ಹಾವೇರಿ, ದಾವಣಗೆರೆ, ಹುಬ್ಬಳ್ಳಿ,ಧಾರಾವಾಡ,ಬೆಂಗಳೂರು ನಗರ ಸೇರಿದಂತೆ ಜಿಲ್ಲೆಯ ಸಾಗರ,ಸೊರಬ ಸೇರಿದಂತೆ ವಿವಿಧ ತಾಲೂಕಿನಿಂದ ಸಾವಿರಾರು ಭಕ್ತರು ಆಗಮಿಸಿ ಹುಚ್ಚರಾಯಸ್ವಾಮಿ ದೇವರ
ದರ್ಶನ ಪಡೆದು ಬ್ರಹ್ಮ ರಥಕ್ಕೆ ಪೂಜೆ ಸಲ್ಲಿಸಿದರು. ರಥೋತ್ಸವ ಅಂಗವಾಗಿ ಹುಚ್ಚರಾಯಸ್ವಾಮಿ ದೇವರ ಮೂರ್ತಿ ಹಾಗೂ ದೇವಸ್ಥಾನವನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಲಾಗಿತ್ತು.

ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ

ಬ್ರಹ್ಮರಥೋತ್ಸವ ಪ್ರಯಕ್ತ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕುಟುಂಬ ಸಮೇತ ಹುಚ್ಚರಾಯಸ್ವಾಮಿ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಾತ್ರೆಗೆ ಆಗಮಿಸುವ ಭಕ್ತರಿಗೆ ಸ್ವಾಗತ
ಕೋರುವ ರಾಜಕೀಯ ಪಕ್ಷಗಳ ಮುಖಂಡರ ಫ್ಲೆಕ್ಸ್‌ಗಳನ್ನು ಅಳವಡಿಸಿರಲಿಲ್ಲ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.