Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Hubli: ನೇಹಾ ಕೊಲೆ ಖಂಡಿಸಿ ಎನ್‌ಎಸ್‌ಯುಐ ವತಿಯಿಂದ ಪ್ರತಿಭಟನೆ

Team Udayavani, Apr 24, 2024, 1:09 PM IST

2-hubli

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣದ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಫಯಾಜ್‌ನನ್ನು ಬುಧವಾರ ತಮ್ಮ ವಶಕ್ಕೆ ಪಡೆದಿದ್ದಾರೆ.

ಮಂಗಳವಾರದಿಂದ ತನಿಖೆ ಆರಂಭಿಸಿರುವ ಎಸ್ಪಿ ವೆಂಕಟೇಶ್ ನೇತೃತ್ವದ ತಂಡ, ಹೆಚ್ಚಿನ ಮಾಹಿತಿ ಸಂಗ್ರಹಕ್ಕೆ ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಇಲ್ಲಿನ ಒಂದನೇ ಜೆಎಂಎಫ್‌ಸಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಅರ್ಜಿ‌ ಪುರಸ್ಕರಿಸಿದ ನ್ಯಾಯಾಲಯ ಆರು ದಿನ ಆರೋಪಿಯನ್ನು ಸಿಐಡಿಗೆ ಒಪ್ಪಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಧಾರವಾಡ: ರಾಜ್ಯಾದ್ಯಂತ ತೀವ್ರ ಸಂಚಲನ ಉಂಟು ಮಾಡಿದ್ದ ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆಗೈದ ಆರೋಪಿ ಫಯಾಜ್‌ನನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಕೊಲೆಯಾದ ನಂತರ 14 ದಿನಗಳ ಕಾಲ ನ್ಯಾಯಂಗ ಬಂಧನಕ್ಕೆ ಒಳಗಾಗಿದ್ದ ಫಯಾಜ್‌ನನ್ನು ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು. ಬುಧವಾರ ಬೆಳಗ್ಗೆಯೇ ಕಾರಾಗೃಹಕ್ಕೆ ಬಂದ ಸಿಐಡಿ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದುಕೊಂಡರು. ನಂತರ ಕೇಂದ್ರ ಕಾರಾಗೃಹಕ್ಕೆ ವೈದ್ಯರನ್ನು ಕರೆಸಿಕೊಂಡು ಆತನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದರು. ನಂತರ ಐದು ವಾಹನಗಳಲ್ಲಿ ಸೂಕ್ತ ಬಂದೋಬಸ್ತ್ ಮಧ್ಯೆ ಆರೋಪಿನ್ನು ಸಿಐಡಿ ಅಧಿಕಾರಿಗಳು ವಿಚಾರಣೆಗೆ ಕರೆದುಕೊಂಡು ತೆರಳಿದರು. ಆದರೆ ಎಲ್ಲಿಗೆ ತೆರಳಿದರು ಎಂಬ ಕುರಿತು ಅಧಿಕಾರಿಗಳು ಸದ್ಯಕ್ಕೆ ಯಾವುದೇ ಮಾಹಿತಿ ನೀಡಿಲ್ಲ.

ಫಯಾಜ್‌ಗೆ ಸರಿಯಾದ ಶಿಕ್ಷೆ ಆಗದೇ ಹೋದಲ್ಲಿ ನಾವೇ ಶಿಕ್ಷೆ ಕೊಡುತ್ತೇವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ನೀಡಿದ್ದ ಹೇಳಿಕೆ ತೀವ್ರ ಸಂಚಲನ ಸೃಷ್ಠಿಸಿತ್ತು. ಇದರಿಂದಾಗಿ ಪೊಲೀಸರು ಆರೋಪಿ ಫಯಾಜ್‌ಗೆ ಬಿಗಿ ಭದ್ರತೆ ಒದಗಿಸಿದ್ದು ಕಂಡು ಬಂದಿತು.

Hubli: ನೇಹಾ ಕೊಲೆ ಖಂಡಿಸಿ ಎನ್‌ಎಸ್‌ಯುಐ ವತಿಯಿಂದ ಪ್ರತಿಭಟನೆ

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ)ದ ವತಿಯಿಂದ ವಿದ್ಯಾರ್ಥಿಗಳು ಬುಧವಾರ ನಗರದ ಬಿವಿಬಿ ಕಾಲೇಜು ಎದುರು ಪ್ರತಿಭಟನೆ ನಡೆಸಿ, ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿದರು.

ಎಚ್‌ಡಿಬಿಆರ್‌ಟಿಎಸ್ ಕಾರಿಡಾರಿನಲ್ಲಿ ಚಿಗರಿ ಬಸ್‌ಗಳ ಸಂಚಾರ ಹಾಗೂ ಹುಬ್ಬಳ್ಳಿ-ಧಾರವಾಡ ನಡುವಿನ ಸಾರ್ವಜನಿಕ ವಾಹನಗಳ‌ ಸಂಚಾರವನ್ನು ಸುಮಾರು ಒಂದುತಾಸು ಸ್ಥಗಿತಗೊಳಿಸಿ ಆಕ್ರೋಶ ವ್ಯಕ್ತಪಡಿಸಿದರು.

ಹಂತಕನಿಗೆ ಗಲ್ಲು ಶಿಕ್ಷೆ, ಜೀವಾವಧಿ ಶಿಕ್ಷೆ ಇಲ್ಲವೇ ಎನ್ ಕೌಂಟರ್‌ನಂತಹ ಶಿಕ್ಷೆ ನೀಡಬೇಕು ಮತ್ತು ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದರು.

ಹತ್ಯೆಯಾದ ನೇಹಾಳಿಗೆ ಬೇಗನೇ ನ್ಯಾಯ ದೊರೆಯದಿದ್ದರೆ, ಸಂಘಟನೆಯಿಂದ ಹೋರಾಟ ಮುಂದುವರೆಸಲಾಗುವುದು ಎಂದು ಆಗ್ರಹಿಸಿ ಬಿವಿಬಿ ಕಾಲೇಜ್‌ನ ಮುಖ್ಯದ್ವಾರದ ಗೇಟ್ ಮುರಿದು ಒಳನುಗ್ಗಲು ಪ್ರಯತ್ನಿಸಿದರು. ಬಲಭಾಗದ ಗೇಟ್  ತೆರವು ಮಾಡಿ ಒಳನುಸುಳಲು ಪ್ರಯತ್ನಿಸಿದಾಗ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿ, ಪರಿಸ್ಥಿತಿ ತಿಳಿಗೊಳಿಸಿದರು.

ಎನ್‌ಎಸ್‌ಯುಐ ಬಾವುಟ ಹಾಗೂ ನೇಹಾ ಸಾವಿಗೆ ನ್ಯಾಯ ಬೇಕು ಎನ್ನುವ ಫಲಕ ಪ್ರದರ್ಶಿಸಿ, ಘೋಷಣೆ ಕೂಗಿದರು. ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲೇಬೇಕು ಎಂದು ಒತ್ತಾಯಿಸಿದರು.

ಡಿಸಿಪಿ ರಾಜೀವ್ ಎಂ. ಅವರಿಗೆ ಮನವಿ ಪತ್ರ ಸಲ್ಲಿಸಿ, ಆದಷ್ಟು ಬೇಗ ತನಿಖೆ ಪೂರ್ಣಗೊಳಿಸಿ, ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ರೋಹಿತ ಘೋಡಕೆ, ರಫೀಕ್ ಅಲಿ, ರೋಹನ ಹಿಪ್ಪರಗಿ, ವಿನಯ ಪಟ್ಟಣಶೆಟ್ಟಿ, ರಾಹುಲ ಬೆಳದಡಿ, ಬಸನಗೌಡ ಪಾಟೀಲ, ವಿಶಾಲ ಮಾನೆ, ಕಿರಣ ಗಾಂಧಾಳ, ಕಲ್ಮೇಶ ಉಳ್ಳಾಗಡ್ಡಿ, ನಿಖಿಲ ಹಿರೇಮಠ, ಕಿಶೋರ ಶಿರಸಂಗಿ ಸೇರಿದಂತೆ ನೂರಾರು ವಿದ್ಯಾರ್ಥಿ, ವಿದ್ತಾರ್ಥಿನಿಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.