Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

ಕಾಂಗ್ರೆಸ್‌ನಲ್ಲಿದ್ದಾಗ ಭ್ರಷ್ಟಾಚಾರಿಗಳು, ಬಿಜೆಪಿಗೆ ಹೋದಾಗ ಅವರು ಸಭ್ಯರು ಆಗುವುದು ಹೇಗೆ?

Team Udayavani, Apr 24, 2024, 2:40 PM IST

1-wqeqwewq

ಮಂಗಳೂರು: ಬಡವರಿಗೆ ಆರೋಗ್ಯ ವಿಮೆ, ಮಹಿಳೆಯರಿಗೆ ವಾರ್ಷಿಕವಾಗಿ 1 ಲಕ್ಷ ರೂ. ಸಹಿತ ದೇಶದ ಅಭಿವೃದ್ಧಿ, ಉದ್ಯೋಗ ಸಹಿತ ಜನರ ಬದುಕು ರೂಪಿಸುವ ಕಾರ್ಯಕ್ರಮಗಳನ್ನು ಕಾಂಗ್ರೆಸ್‌ ಮಾಡುತ್ತಿದ್ದರೆ, ಹಿಜಾಬ್‌, ಹಲಾಲ್‌, ಮಸೀದಿ, ಮಂದಿರ ಎಂಬ ವಿಷಯದೊಂದಿಗೆ ಭಾವನಾತ್ಮಕವಾಗಿ ಜನರನ್ನು ಕೆರಳಿಸುವ ಕಾರ್ಯವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಈ ಬಾರಿಯ ಚುನಾವಣೆ ಬದುಕು ಹಾಗೂ ಭಾವನೆಗಳ ನಡುವೆ ನಡೆ ಯುವ ಚುನಾವಣೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್‌ನ ಸದಸ್ಯ ಡಾ|ಮಂಜುನಾಥ ಭಂಡಾರಿ ತಿಳಿಸಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 24 ಸ್ಥಾನದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸುವುದು ಶತಃಸಿದ್ಧ ಎಂದರು.

2014ರ ಚುನಾವಣೆಯ ವೇಳೆ 60 ತಿಂಗಳ ಅಧಿಕಾರ ನೀಡಿದರೆ ಕಾಂಗ್ರೆಸ್‌ ಪಕ್ಷದ 2ಜಿ ಕಲ್ಲಿದ್ದಲು ಪ್ರಕರಣ, ವಿದೇಶದಲ್ಲಿ ಕಪ್ಪು ಹಣ ಎಂದು ಜನರನ್ನು ಮರುಳು ಮಾಡಿ ಬಿಜೆಪಿ ಅಧಿಕಾರ ಪಡೆದರು. ಆದರೆ 10 ವರ್ಷ ಆದರೂ ಆ ಹಗರಣವನ್ನು ಸಾಬೀತು ಪಡಿಸಲು ಆಗಿಲ್ಲ. ಕಪ್ಪು ಹಣ ವಾಪಸು ತಂದಿಲ್ಲ. ಮತ್ತೆ 2019ರಲ್ಲಿ ಪುಲ್ವಾಮಾ ದಾಳಿಯಾಯಿತು. ಬಳಿಕ ರಾಮ ಮಂದಿರವನ್ನು ಮುನ್ನೆಲೆಗೆ ತಂದರು. ಆದರೆ ಈ ಬಾರಿ ವಿದೇಶಿ ಕೈವಾಡಗಳಿಂದ ನನಗೆ ಕುತ್ತು ಬಂದಿದೆ. ಕರಿಮಣಿ ಸರಕ್ಕೆ ಕುತ್ತು ಬಂದಿದೆ. ಸಂಪತ್ತು ಹಂಚಿಕೆ ಆಗಲಿದೆ ಎಂದು ಹೇಳುವ ಮೂಲಕ ಹತಾಶೆ ವ್ಯಕ್ತಪಡಿಸಿದ್ದಾರೆ. ಸ್ವಾತಂತ್ರ್ಯ ಬಳಿಕದ ಭಾರತದಲ್ಲಿ ಯಾವೊಬ್ಬ ಪ್ರಧಾನಿಯೂ ಇಂತಹ ಹತಾಶೆಯ ಮಾತುಗಳನ್ನಾಡಿಲ್ಲ ಎಂದರು.

ಚುನಾವಣೆ ಬಾಂಡ್‌ ತಂದಿರುವ ಬಗ್ಗೆ ಸುಪ್ರೀಂ ಕೋರ್ಟ್‌ ಛೀಮಾರಿ ಹಾಕಿದ್ದರೂ ಅದನ್ನು ಸಮರ್ಥಿಸಿ ಕೊಳ್ಳುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷವನ್ನು ಭ್ರಷ್ಟರ ಪಕ್ಷ ಎನ್ನುತ್ತಿದ್ದವರು. ಅಶೋಕ್‌ ಚವ್ಹಾಣ್‌, ಪ್ರಫ‌ುಲ್‌ ಪಟೇಲ್‌ ಮೊದ ಲಾದವರನ್ನು ಭ್ರಷ್ಟರು ಎಂದು ಹೇಳಿ ಇದೀಗ ಅವರನ್ನು ಬಿಜೆಪಿಯ ವಾಶಿಂಗ್‌ ಮೆಶಿನ್‌ಗೆ ಹಾಕಿ ಕ್ಲೀನ್‌ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಹಿಂದುತ್ವದ ಪಾಠ ಬಿಜೆಪಿಯಿಂದ ಕಾಂಗ್ರೆಸ್‌ ಕಲಿಯಬೇಕಾಗಿಲ್ಲ. ಬಿಜೆಪಿ ಹುಟ್ಟುವ ಮೊದಲೇ ಪ್ರತೀ ಹಳ್ಳಿ ಹಳ್ಳಿಯಲ್ಲಿ ಇಲ್ಲಿ ರಾಮ ಮಂದಿರ ಗಳಿದ್ದವು. ಸರ್ವರ ಜತೆಗೆ ಸಮಾನಾಗಿ ಬಾಳುವ ಹಿಂದುತ್ವವನ್ನು ನಮ್ಮ ತಂದೆ ತಾಯಿ ನಮಗೆ ತಿಳಿಸಿದ್ದಾರೆ. ರಾಮ ಮಂದಿರವನ್ನು ಮತ ಗಳಿಕೆಯ ಉದ್ದೇಶದಿಂದ ಬಿಜೆಪಿಯು ಚುನಾ ವಣ ಮಂದಿರವಾಗಿ ರೂಪಿಸಿದೆ ಎಂದು ಮಂಜುನಾಥ ಭಂಡಾರಿ ದೂರಿದರು.

ದ.ಕ. ಜಿಲ್ಲೆಯಲ್ಲಿ 15 ವರ್ಷ ಬಿಜೆಪಿ ಸಂಸದರಾಗಿದ್ದವರು ಮಾಡಿದ ಅಭಿವೃದ್ಧಿಯನ್ನೇ ಮುಂದಿಟ್ಟುಕೊಂಡು ಮತ ಕೇಳಬಹುದಿತ್ತಲ್ಲವೇ? ಅದರ ಬದಲು ಮೋದಿಯನ್ನೇ ಕರೆಸಿ ಇಲ್ಲಿ ಮತ ಕೇಳಿದ್ದು ಯಾಕೆ? ಹಾಗಾದರೆ ಅಭಿವೃದ್ಧಿ ಆಗಿಲ್ಲ ಎಂಬುದು ನಿಜವೆಂದು ಬಿಜೆಪಿ ಒಪ್ಪಿದಂತಲ್ಲವೇ? ಎಂದರು. ಶಾಹುಲ್‌ ಹಮೀದ್‌, ಮಹಾಬಲ ಮಾರ್ಲ, ಪ್ರವೀಣ್‌ ಚಂದ್ರ ಆಳ್ವ, ಶುಭೋದಯ ಆಳ್ವ, ಅಶ್ವಿ‌ನ್‌ ಕುಮಾರ್‌ ರೈ, ಲಾರೆನ್ಸ್‌ ಡಿ’ಸೋಜಾ, ಆರಿಫ್, ಸಂತೋಷ್‌ ಕುಮಾರ್‌, ಸುಹಾನ್‌ ಆಳ್ವ, ನೀರಜ್‌ ಪಾಲ್‌ ಪತ್ರಿಕಾಗೋಷ್ಠಿಯಲ್ಲಿದ್ದರು.

ಮಂಜುನಾಥ ಭಂಡಾರಿ ಪ್ರಶ್ನೆಗಳು
ಕಾಂಗ್ರೆಸ್‌ ಅವಧಿ 2014ರವರೆಗೆ ದೇಶದ ಸಾಲ 55 ಲಕ್ಷ ಕೋಟಿ ಇದ್ದರೆ, ಬಿಜೆಪಿ ಬಂದ 10 ವರ್ಷಗಳಲ್ಲೇ ದೇಶದ ಸಾಲ 150 ಲಕ್ಷ ಕೋ.ರೂ.ಗಳಾಗಿದ್ದು ಹೇಗೆ?

ಕಪ್ಪು ಹಣ ತರಲು 60 ದಿನ ಕೊಡಿ ಎಂದವರಿಗೆ 10 ವರ್ಷವಾದರೂ ಯಾಕೆ ತರಲು ಸಾಧ್ಯವಾಗಿಲ್ಲ?

ಚುನಾವಣೆ ದಿನಾಂಕ ಹತ್ತಿರವಾದಂತೆ ಕೇಂದ್ರ ಚುನಾವಣಾ ಆಯುಕ್ತರು ರಾಜೀನಾಮೆ ನೀಡಿದ್ದು ಯಾಕೆ?

ಅಭಿವೃದ್ಧಿಯ ಬಗ್ಗೆ ಮಾತನಾಡಬೇಕಾದ ಮೋದಿ ಅವರು ಮಾಂಗಲ್ಯಸರ ಸಹಿತ ಭಾವನಾತ್ಮಕ ವಿಷಯವಾಗಿ ಹತಾಶರಾಗಿದ್ದು ಸೋಲಿನ ಭಯವೇ?

ಅಬಕಾರಿ ನೀತಿ ಸರಿಯಿಲ್ಲವೆಂಬ ಕಾರಣಕ್ಕೆ ಅರವಿಂದ ಕೇಜ್ರಿವಾಲ್‌ ಬಂಧನವಾದರೆ, ಚುನಾವಣೆ ಬಾಂಡ್‌ ಸರಿಯಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿರುವುದರಿಂದ ಯಾರ ಬಂಧನವಾಗಬೇಕಿತ್ತು?

ಜನರ ಅಭಿವೃದ್ಧಿ ವಿಷಯದಲ್ಲಿ ನಡೆಯಬೇಕಾದ ಚುನಾವಣೆಯನ್ನು ಮಂದಿರ, ಮಸೀದಿ ವಿಷಯವನ್ನು ಮುನ್ನೆಲೆಗೆ ತರುವುದು ಸಮ್ಮತವೇ?
ಕಾಂಗ್ರೆಸ್‌ನಲ್ಲಿದ್ದಾಗ ಭ್ರಷ್ಟಾಚಾರಿಗಳು, ಬಿಜೆಪಿಗೆ ಹೋದಾಗ ಅವರು ಸಭ್ಯರು ಆಗುವುದು ಹೇಗೆ?

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-bantwala-1

Bantwala: ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಮೃತ್ಯು, ಪತಿ ಗಂಭೀರ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.