ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
ಮೇಲಾಧಿಕಾರಿಗಳು ತಾವಿರುವ ಸ್ಥಳದಲ್ಲಿಯೇ ವೀಕ್ಷಿಸಬಹುದು
Team Udayavani, Apr 24, 2024, 4:53 PM IST
ಉದಯವಾಣಿ ಸಮಾಚಾರ
ಗಂಗಾವತಿ: ಕೇಂದ್ರ ಹಾಗೂ ರಾಜ್ಯ ಸರಕಾರ ವಿವಿಧ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ವೆಬ್ ಕಾಸ್ಟಿಂಗ್ ಪದ್ಧತಿ ಜಾರಿಗೆ ತರುವ ಮೂಲಕ ನೇಮಕಾತಿಯನ್ನು ಪಾರದರ್ಶಕವಾಗಿಸುವಂತೆ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಜಿಲ್ಲಾಧ್ಯಕ್ಷ ಬಸವರಾಜ ಮ್ಯಾಗಳಮನಿ ಮಾತನಾಡಿ, ಕೆಪಿಎಸ್ಸಿ, ಯುಪಿಎಸ್ಸಿ, ರೈಲ್ವೇ, ಬ್ಯಾಂಕಿಂಗ್ ಸೇರಿ ಕೇಂದ್ರ ಹಾಗೂ ರಾಜ್ಯ
ಸರಕಾರದ ನೇಮಕಾತಿ ಮಾಡುವ ಸಂದರ್ಭದಲ್ಲಿ ನಡೆದ ಪರೀಕ್ಷೆಯಲ್ಲಿ ಅಕ್ರಮ ನಿರಂತರವಾಗಿ ನಡೆದಿದ್ದು, ಸರಕಾರ ವೆಬ್ ಕಾಸ್ಟಿಂಗ್ ಮೂಲಕ ಪರೀಕ್ಷೆ ನಡೆದರೆ ಪಾರದರ್ಶಕ ಸಾಧ್ಯವಾಗುತ್ತದೆ.
ಈ ವರ್ಷ ನಡೆದ ಹತ್ತನೇ ತರಗತಿ ಪರೀಕ್ಷೆ ವೆಬ್ ಕಾಸ್ಟಿಂಗ್ ಪದ್ಧತಿ ಜಾರಿಗೆ ತರಲಾಗಿದೆ. ರಾಜ್ಯದ ಯಾವುದೇ ಪರೀಕ್ಷಾ ಕೇಂದ್ರದ ಮಾಹಿತಿಯನ್ನು ಮೇಲಾಧಿಕಾರಿಗಳು ತಾವಿರುವ ಸ್ಥಳದಲ್ಲಿಯೇ ವೀಕ್ಷಿಸಬಹುದು. ಇಂತಹ ಪದ್ಧತಿಯನ್ನು ನೇಮಕಾತಿಗಳ ಪರೀಕ್ಷೆಗಳಲ್ಲಿ ಅಳವಡಿಸಿದರೆ ಅಕ್ರಮ ತಡೆಯಲಾಗುತ್ತದೆ. ಪ್ರಭಾವಿಗಳು ಅನ್ಯ ಮಾರ್ಗದಿಂದ ಉದ್ಯೋಗ ಪಡೆಯುವುದನ್ನು
ತಪ್ಪಿಸಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಬಡ ವಿದ್ಯಾರ್ಥಿಗಳಿಗೆ ನೇಮಕಾತಿಯಲ್ಲಿ ನ್ಯಾಯ ದೊರಕಿಸಿ ಕೊಟ್ಟಂತಾಗುತ್ತದೆ. ಆದ್ದರಿಂದ ಈ ಪದ್ಧತಿಯನ್ನು ಮುಂಬರುವ ಪರೀಕ್ಷೆಗಳಲ್ಲಿ ಅಳವಡಿಸುವುದರ ಮೂಲಕ ಈ ಪದ್ಧತಿ ಜಾರಿಗೆ ತರಬೇಕೆಂದು ಮ್ಯಾಗಳಮನಿ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಜಡಿಯಪ್ಪ ಹಂಚಿನಾಳ, ಕೃಷ್ಣ ಮೆಟ್ರಿ ಚಂದ್ರು ನಿಸರ್ಗ, ಪಂಪಾಪತಿ ಕುರಿ, ಮಂಜು ಗುಡಿ ಗೌಡ್ರ, ಮುತ್ತು ಹೊಸಳ್ಳಿ, ಹುಲಗಪ್ಪ ಕೊಜ್ಜಿ, ಪರಮೇಶ್ ಗಾಂಧಿ ನಗರ, ನರಸಪ್ಪ ಭಟ್, ಬಸವರಾಜ ಗಾಂಧಿ ನಗರ, ಚಿದಾನಂದ, ರಾಘು ಕಡೆಬಾಗಿಲು, ರಾಮಣ್ಣ ರುದ್ರಾಕ್ಷಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ajekar Case: ಆರೋಪಿ ದಿಲೀಪ್ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್
ಯಶಸ್ವಿ ವ್ಯವಸಾಯ- ವಲಸಿಗನ ಬದುಕು ಸಿಹಿಯಾಗಿಸಿದ ಕಬ್ಬು
Chikkamagaluru: ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ
ಗಜೇಂದ್ರಗಡ: ವೀರಾಪುರದಲ್ಲಿ ಅಭಿವೃದ್ಧಿ ಮರೀಚಿಕೆ
Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.