Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್
Team Udayavani, Apr 25, 2024, 1:46 AM IST
ಮಂಗಳೂರು: ಚುನಾವಣೆಯ ಹಿನ್ನೆಲೆಯಲ್ಲಿ ಸರಕಾರಿ ಬಸ್ ಸೇವೆಯಲ್ಲಿ ಎ. 25 ಮತ್ತು 26ರಂದು ವ್ಯತ್ಯಯ ಉಂಟಾಗ ಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ 60ಕ್ಕೂ ಹೆಚ್ಚಿನ ಕೆಎಸ್ಸಾರ್ಟಿಸಿ ಬಸ್ಗಳು ಚುನಾವಣೆ ಕಾರ್ಯಕ್ಕೆ ತೆರಳಲಿವೆ.
ಕಳೆದ ವರ್ಷ ದ.ಕ. ಜಿಲ್ಲೆಯಿಂದ 400ಕ್ಕೂ ಅಧಿಕ ಬಸ್ಗಳು ಚುನಾವಣೆ ಕೆಲಸಕ್ಕೆ ತೆರಳಿದ್ದವು. ಆದರೆ ಈ ಬಾರಿ ಹೆಚ್ಚಿನ ಶಾಲಾ-ಕಾಲೇಜು ಬಸ್ಗಳನ್ನು ಚುನಾವಣೆ ಕಾರ್ಯಕ್ಕೆ ನಿಯೋಜಿಸಲಾಗಿದೆ. ಇದರಿಂದಾಗಿ ಕೆಎಸ್ಸಾರ್ಟಿಸಿ ಬಸ್ಗಳ ಬಳಕೆ ಕಡಿಮೆ. ಹಾಗಾಗಿ ಪ್ರಯಾಣಿಕರಿಗೆ ಹೆಚ್ಚಿನ ತೊಂದರೆ ಉಂಟಾಗದು ಎನ್ನುತ್ತಾರೆ ಅಧಿಕಾರಿಗಳು.
ಈ ಬಾರಿ ಮಂಗಳೂರಿನ ಯಾವುದೇ ಸಿಟಿ ಬಸ್ಸನ್ನು ಬಳಸಿಕೊಂಡಿಲ್ಲ. ಮತದಾನದ ದಿನ ಎಲ್ಲ ಸಿಟಿ ಬಸ್ಗಳು ಎಂದಿನಂತೆ ಕಾರ್ಯಾಚರಿಸಲಿವೆ.
ಹೆಚ್ಚುವರಿ ಬಸ್
ದೂರದ ಊರುಗಳಿಂದ ಮತದಾನಕ್ಕೆಂದು ತಮ್ಮ ಊರುಗಳಿಗೆ ಬಂದ ಮಂದಿಗೆ ಸರಣಿ ರಜೆ ಸಿಗುತ್ತದೆ. ಕೆಲವರು ಮತ್ತೆರಡು ದಿನ ರಜಾ ಹಾಕಿ ಮೇ 1ರ ಕಾರ್ಮಿಕ ದಿನದ ರಜೆ ಕಳೆದು ತಮ್ಮ ಕೆಲಸಕ್ಕೆ ಮರಳಲು ಈಗಾಗಲೇ ಯೋಜನೆ ರೂಪಿಸಿದ್ದಾರೆ. ಇದೇ ಕಾರಣಕ್ಕೆ ಎ. 25ರಂದು ಬೆಂಗಳೂರಿನಿಂದ ಮಂಗಳೂರಿಗೆ ಹೆಚ್ಚುವರಿ ಸುಮಾರು 40 ಕೆಎಸ್ಸಾರ್ಟಿಸಿ ಬಸ್ಗಳು ಮತ್ತು ಎ. 28ರಂದು ಮಂಗಳೂರಿನಿಂದ ಬೆಂಗಳೂರಿಗೂ ಸುಮಾರು 40 ಹೆಚ್ಚುವರಿ ಬಸ್ಗಳು ತೆರಳಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ
Mangaluru: ಹುಲಿ ವೇಷ ಬಣ್ಣಗಾರಿಕೆ ಹಿಂದಿದೆ ಶ್ರದ್ಧೆ, ಭಕ್ತಿ, ವಿಜ್ಞಾನ!
Court: ವಾಹನ ಅಪಘಾತ: ಮೃತ ವ್ಯಕ್ತಿಯ ಆಶ್ರಿತರಿಗೆ 1.35 ಕೋ.ರೂ. ಪರಿಹಾರ: ನ್ಯಾಯಾಲಯ ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.