Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ


Team Udayavani, Apr 25, 2024, 1:51 AM IST

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ: ಮತದಾನಕ್ಕೆ ಜಿಲ್ಲೆಯಾದ್ಯಂತ ಸಕಲ ಸಿದ್ಧತೆಗಳು ನಡೆದಿವೆ. ಮಸ್ಟರಿಂಗ್‌ ಕೇಂದ್ರಗಳಾದ ಉಡುಪಿಯ ಸೈಂಟ್‌ ಸಿಸಿಲಿ, ಕಾಪುವಿನ ದಂಡತೀರ್ಥ, ಕುಂದಾಪುರದ ಭಂಡಾರ್‌ಕಾರ್ ಹಾಗೂ ಕಾರ್ಕಳದ ಎಂಪಿಎಂ ಪ.ಪೂ. ಕಾಲೇಜಿನಲ್ಲಿ ಬುಧವಾರವೇ ಎಲ್ಲ ತಯಾರಿಗಳನ್ನು ಮಾಡಲಾಗಿದ್ದು, ಸಿಬಂದಿ ಹಾಗೂ ಅಧಿಕಾರಿಗಳು ಮತಯಂತ್ರದೊಂದಿಗೆ ಎ. 25ರಂದು ಮತಗಟ್ಟೆಗಳಿಗೆ ತೆರಳಲಿದ್ದಾರೆ.

ಮತಯಂತ್ರ ಗಳನ್ನು ಕಟ್ಟಡದ ಒಳಗೆ ಭದ್ರವಾಗಿ ಇರಿಸಲಾಗಿದ್ದು, ಗುರುವಾರ ಆಯಾ ಮತಗಟ್ಟೆಗಳಿಗೆ ತಲುಪಲಿದೆ. ಈಗಾಗಲೇ ವಾಹನಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಸಾಮಾನ್ಯ ವಾಹನದ ಜತೆಗೆ ಸೆಕ್ಟರ್‌ ಅಧಿಕಾರಿಗಳ ವಾಹನ ಇರಲಿದೆ.

ಬಾಗಿಲಿಗೆ ಹಲಗೆ
ಮತಯಂತ್ರಗಳನ್ನು ಇರಿಸುವ ಶಾಲಾ ಕೊಠಡಿಗಳಿಗೆ ಮರದ ಹಲಗೆ ಹಾಕಿ ಭದ್ರಪಡಿಸಲಾಗಿದೆ. ಒಳಭಾಗದಲ್ಲಿಯೂ ಸೂಕ್ತ ಮಾರ್ಕಿಂಗ್‌ ಮಾಡುವ ಮೂಲಕ ಅಚ್ಚುಕಟ್ಟು ನಿರ್ವಹಣೆಗೆ ಆದ್ಯತೆ ಕಲ್ಪಿಸಲಾಗಿದೆ. ಪೊಲೀಸರು ಹಾಗೂ ಹೋಂ ಗಾರ್ಡ್‌ ಗಳನ್ನು ಸದ್ಯಕ್ಕೆ ಕರ್ತವ್ಯಕ್ಕೆ ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ.

ಸಿಸಿ ಕೆಮರಾ
ಶಾಲಾ ಆವರಣದ ಒಳಭಾಗ ಹಾಗೂ ಹೊರಭಾಗದಲ್ಲಿ ಪೊಲೀಸರಷ್ಟೇ ಅಲ್ಲದೆ ಸಿಸಿ ಕೆಮರಾ ಕಣ್ಗಾವಲು ಕೂಡ ಇರಲಿದೆ. ಒಳಭಾಗದಲ್ಲಿ ಶಾಮಿಯಾನ ಅಳವಡಿಸಲಾಗಿದ್ದು, ಅಧಿಕಾರಿಗಳಿಗೆ ಹಾಗೂ ಸಿಬಂದಿಗೆ ಊಟೋಪಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಭದ್ರತೆಗೆ ಪೊಲೀಸ್‌ ಇಲಾಖೆ ಸನ್ನದ್ಧ
ಉಡುಪಿ: ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್‌ ಭ ದ್ರತೆ ಕಲ್ಪಿಸಲಾಗಿದ್ದು 866 ಬೂತ್‌ಗಳ ಪೈಕಿ 177 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ.

ಎಲ್ಲ ಸಾಮಾನ್ಯ ಬೂತ್‌ಗಳಲ್ಲಿ ಕನಿಷ್ಠ ಒಬ್ಬ ಪೊಲೀಸ್‌ ಸಿಬಂದಿ ಇರಲಿದ್ದು, ಪ್ರತಿ ಬೂತ್‌ಗಳನ್ನು ಸೇರಿಸಿ 57 ವಲಯಗಳಾಗಿ ವಿಂಗಡಿಸಲಾಗಿದೆ. ಪ್ರತೀ ವಲಯವನ್ನು ಪಿಎಸ್‌ಐ ಅಥವಾ ಎಎಸ್‌ಐಗಳು ಮೇಲ್ವಿಚಾರಣೆ ನಡೆಸುವರು. 57 ಮಂದಿ ಸೆಕ್ಟರ್‌ ಅಧಿಕಾರಿಗಳು ಹಾಗೂ 14 ಮಂದಿ ಇನ್‌ಸ್ಪೆಕ್ಟರ್‌ ಶ್ರೇಣಿಯ ಅಧಿಕಾರಿಗಳು ಮೇಲ್ವಿಚಾರಣೆ ಮಾಡಲಿದ್ದು, ಇವರಲ್ಲದೇ ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ಒಬ್ಬರಂತೆ 4 ಮಂದಿ ಡಿವೈಎಸ್‌ಪಿಗಳು ನಿಗಾ ವಹಿಸಲಿದ್ದಾರೆ.

ಒಟ್ಟು 177 ಸೂಕ್ಷ್ಮ ಬೂತ್‌ಗಳ ಪೈಕಿ 36 ಅನ್ನು ಈ ಹಿಂದೆ ನಕ್ಸಲ್‌ ಪೀಡಿತ ಪ್ರದೇಶವಾಗಿದ್ದ ಜಾಗದಲ್ಲಿರಲಿವೆ. 36 ಬೂತ್‌ಗಳಿಗೆ ಸಶಸ್ತ್ರಧಾರಿ ಪೊಲೀಸ್‌ ನಿಯೋಜಿಸಲಾಗುವುದು. ಹೆಚ್ಚುವರಿಯಾಗಿ ಆರು ಬೂತ್‌ಗೆ ಒಂದರಂತೆ 6 ಸಶಸ್ತ್ರ ಪೊಲೀಸ್‌ ಗಸ್ತು ವಾಹನಗಳನ್ನು ಒದಗಿಸಲಾಗುವುದು. ಈ 36 ಬೂತ್‌ಗಳೂ ಡಿವೈಎಸ್‌ಪಿ ಅವರ ಮೇಲ್ವಿಚಾರಣೆಯಲ್ಲಿರಲಿದೆ. ಇಲ್ಲಿ ವೆಬ್‌ಕಾಸ್ಟಿಂಗ್‌ ಹಾಗೂ ಮೈಕ್ರೋ ಅಬ್ಸವರ್‌ìಗಳೂ ಹೆಚ್ಚುವರಿಯಾಗಿ ಇರುವರು. ಕಾನೂನು ಸುವ್ಯವಸ್ಥೆಗೆ ಅಡ್ಡಿ ಉಂಟಾಗದಂತೆ ತಡೆಯಲು ಅಧಿಕಾರಿಗಳು, ಎಲ್ಲ ಇನ್‌ಸ್ಪೆಕ್ಟರ್‌ಗಳನ್ನೊಳಗೊಂಡ ಸ್ಟೈಕಿಂಗ್‌ ಫೋರ್ಸ್‌ ಇರಲಿದೆ.

ಅನಿರೀಕ್ಷಿತ ಸಂದರ್ಭಗಳು ಎದುರಾ ದಲ್ಲಿ 4 ರಿಸರ್ವ್‌ ಪ್ಲಟೂನ್‌ಗಳು, ಎಸ್‌ಪಿ ದರ್ಜೆಯ ಮೂವರು ಅಧಿಕಾರಿಗಳು, 6 ಡಿವೈಎಸ್‌ಪಿಗಳು, 15 ಇನ್‌ಸ್ಪೆಕ್ಟರ್‌ಗಳು, ಇತರ ಶ್ರೇಣಿಯ 1,501 ಪೊಲೀಸರು, ಸುಮಾರು 500 ಮೀಸಲು ಪೊಲೀಸರನ್ನು ನಿಯೋಜಿಸಲಾಗಿದೆ. ಈಗಾಗಲೇ ಪೊಲೀಸರು ಪಥ ಸಂಚಲನ ನಡೆಸಿದ್ದಾರೆ. ಅಲ್ಲದೇ ಠಾಣೆಗಳಲ್ಲಿ ಸಿಬಂದಿ ನಿತ್ಯದ ಕರ್ತವ್ಯ ನಿರ್ವಹಿಸುವರು ಎಂದು ಎಸ್‌ಪಿ ಡಾ| ಕೆ.ಅರುಣ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Bhairadevi Review; ಅಘೋರಿ ಹಿಂದೆ ಘೋರ ಕಥನ

Bhairadevi Review; ಅಘೋರಿ ಹಿಂದೆ ಘೋರ ಕಥನ

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

1

Manipal: ಹೊಟೇಲ್‌ ಮ್ಯಾನೇಜರ್‌ಗೆ ವಂಚಿಸಿದ ವೈಟರ್‌

3

Hiriydaka: ಅಕ್ರಮ ಮರಳುಗಾರಿಕೆ ಟಿಪ್ಪರ್‌ ಸಹಿತ ಇಬ್ಬರು ಆರೋಪಿಗಳು ವಶಕ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Gopilola Movie Review

Gopilola Movie Review: ಹೆಣ್ಣು ಮಣ್ಣಿನ ಮಧ್ಯೆ ಗೋಪಿ ಆಟ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.