Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


Team Udayavani, Apr 25, 2024, 8:31 AM IST

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಬೀದರ್‌: ವಿಶ್ವಕ್ಕೆ ಅನುಭವ ಮಂಟಪದ ಮೂಲಕ ಪ್ರಜಾ ಪ್ರಭುತ್ವದ ಪರಿಕಲ್ಪನೆಯನ್ನು ಸಾರಿದ ಬೀದರ್‌ ನೆಲದಲ್ಲಿ ಕಾಂಗ್ರೆಸ್‌ ಹೆಚ್ಚು ಪ್ರಾಬಲ್ಯ ಸಾ ಧಿಸಿದೆ. ಕೈ ತೆಕ್ಕೆಯಲ್ಲಿದ್ದ ಕ್ಷೇತ್ರ ಕ್ರಮೇಣ ಬಿಜೆಪಿ ಭದ್ರಕೋಟೆಯಾಗಿ ಬದಲಾಗಿದೆ. ಈ ಲೋಕಸಭಾ ಕ್ಷೇತ್ರದ ಮೇಲೆ ಈಗ ಮತ್ತೆ ಹಿಡಿತ ಸಾಧಿ ಸಲು ಎರಡು ರಾಷ್ಟ್ರೀಯ ಪಕ್ಷಗಳು ಸಮರಕ್ಕೆ ಇಳಿದಿವೆ. ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿರುವ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾಗೆ ದೇಶದ ಕಿರಿಯ ಅಭ್ಯರ್ಥಿಯಾಗಿರುವ ಕಾಂಗ್ರೆಸ್‌ನ ಸಾಗರ್‌ ಖಂಡ್ರೆ ಸವಾಲು ಹಾಕಿದ್ದಾರೆ. ಮೊದಲ ಪ್ರಯತ್ನದಲ್ಲೇ ಸಂಸತ್‌ ಪ್ರವೇಶಿಸುವ ತವಕದಲ್ಲಿದ್ದಾರೆ.

ಭಾರತದ ಸಂವಿಧಾನ ಜಾರಿಯಾದ ಅನಂತರ ಬೀದರ್‌ಕ್ಷೇತ್ರದಲ್ಲಿ ನಡೆದ ಚುನಾವಣೆಯಲ್ಲಿ 11 ಬಾರಿ ಕಾಂಗ್ರೆಸ್‌ ಮತ್ತು 7 ಬಾರಿ ಬಿಜೆಪಿ ಗೆಲುವು ಸಾ ಧಿಸಿದೆ. ಸತತ 10 ಬಾರಿ ಗೆದ್ದು ಕಾಂಗ್ರೆಸ್‌ ಭದ್ರಕೋಟೆ ಎನಿಸಿಕೊಂಡಿದ್ದ ಗಡಿ ಕ್ಷೇತ್ರದಲ್ಲಿ ನಂತರ ದಿ|ರಾಮಚಂದ್ರ ವೀರಪ್ಪ ಸತತ ಐದು ಬಾರಿ ಕಮಲ ಅರಳಿಸಿದ್ದರು. ಆ ಬಳಿಕ ಕಾಂಗ್ರೆಸ್‌ ಮತ್ತು ಬಿಜೆಪಿ ತಲಾ ಎರಡು ಬಾರಿ ಕ್ಷೇತ್ರದಲ್ಲಿ ಹಿಡಿತ ಸಾ ಧಿಸಿವೆ. ಕಳೆದ 10 ವರ್ಷಗಳಿಂದ ಬಿಜೆಪಿ ಹಿಡಿತದಲ್ಲಿರುವ ಬೀದರ ಕ್ಷೇತ್ರವನ್ನು ಶತಾಯಗತಾಯ ಕೈ’ ವಶ ಮಾಡಿಕೊಳ್ಳಲು ಕಾಂಗ್ರೆಸ್‌ ತಂತ್ರ ಹೆಣೆಯುತ್ತಿದ್ದರೆ, ಇತ್ತ ಬಿಜೆಪಿ ಕ್ಷೇತ್ರದಲ್ಲಿ ತನ್ನ ಪ್ರಾಬಲ್ಯವನ್ನು ಮುಂದುವರಿಸಲು ಪ್ರತಿತಂತ್ರ ರೂಪಿಸುತ್ತಿದೆ.

ಶಾಸಕರ ಬಲಾಬಲ: ಸತತ ಎರಡು ಬಾರಿ ಸಂಸದರಾಗಿ ಬೀದರ ಜಿಲ್ಲೆಯಿಂದ ಮೊದಲ ಬಾರಿಗೆ ಕೇಂದ್ರ ಸಂಪುಟದಲ್ಲಿ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿರುವ ಭಗವಂತ ಖೂಬಾ, ಮೂರನೇ ಸಲ ಅಗ್ನಿಪರೀಕ್ಷೆ ಎದುರಿಸುತ್ತಿದ್ದಾರೆ. ಮಾಜಿ ಸಿಎಂ ಧರಂಸಿಂಗ್‌ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಈಶ್ವರ ಖಂಡ್ರೆ ಅಂಥ ಘಟಾನುಘಟಿಗಳನ್ನು ಸೋಲಿಸಿ ವರ್ಚಸ್ಸು ಹೆಚ್ಚಿಸಿಕೊಂಡವರು. ಈಗ ಬೀದರ್‌ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಈ ಬಾರಿ ಐದು ಕ್ಷೇತ್ರಗಳಲ್ಲಿ ಕಮಲ ಅರಳಿರುವುದು ಜತೆಗೆ ಜೆಡಿಎಸ್‌ನೊಂದಿಗೆ ಚುನಾವಣ ಮೈತ್ರಿಯಿಂದ ಬಲ ಹೆಚ್ಚಿದಂತಾಗಿದೆ. ಆದರೆ ಸ್ವಪಕ್ಷದ ಶಾಸಕರ ಜತೆಗಿನ ಮುಸುಕಿನ ಗುದ್ದಾಟ ಕಾರಣ ಅಭ್ಯರ್ಥಿ ಗೆಲುವಿನ ದಡ ಸೇರುವುದು ಸುಲಭ ಇಲ್ಲ. ಇದರ ಲಾಭವನ್ನು ಪಡೆ ಯಲು ಕಾಂಗ್ರೆಸ್‌ ಕಸರತ್ತು ನಡೆಸುತ್ತಿದೆ.

ಲೋಕಸಭೆ ಇಲ್ಲವೇ ವಿಧಾನಸಭೆ ಯಾವುದೇ ಚುನಾವಣೆಗಳಲ್ಲಿಯೂ ಅಭಿವೃದ್ಧಿ ವಿಚಾರಗಳು ಮತ್ತು ಸಮಸ್ಯೆಗಳ ಪ್ರಸ್ತಾವ ಗೌಣ. ಅಭ್ಯರ್ಥಿಯ ಹಣ, ಜಾತಿ ಬೆಂಬಲ, ರಾಜಕೀಯ ಪಕ್ಷಗಳ ಬಲ ಮತ್ತು ಸ್ಥಳೀಯ ವಿಚಾರಗಳೇ ಗೆಲುವಿನ ಪ್ರಮುಖ ವಿಷಯ ಗಳಾಗಿರುತ್ತವೆ ಎಂಬುದು ಸತ್ಯ. ಕಳೆದೆರಡು ಅವ ಧಿಯಂತೆ ಮೈತ್ರಿ ಅಭ್ಯರ್ಥಿ ಖೂಬಾ ಪ್ರಧಾನಿ ಮೋದಿ ನಾಮ ಬಲ ಮತ್ತು ತನ್ನ ಕಾರ್ಯ ಸಾಧನೆ ಮುಂದಿಟ್ಟುಕೊಂಡು ಮತ ಬೇಟೆಗಿಳಿದಿದ್ದಾರೆ. ಇನ್ನೊಂದೆಡೆ ಹೊಸ ಮುಖ, ಕಿರಿಯ ವಯಸ್ಸಿನ ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಅವರು ಖಂಡ್ರೆ ಪರಿವಾರದ ಬಲ ಮತ್ತು ರಾಜ್ಯ ಸರಕಾರದ ಪಂಚ ಗ್ಯಾರಂಟಿಗಳನ್ನು ಪ್ರಚಾರದ ಅಸ್ತ್ರವನ್ನಾಗಿ ಮಾಡಿಕೊಂಡಿದ್ದಾರೆ.

ಜಾತಿ ಲೆಕ್ಕಾಚಾರದ ಮೇಲಾಟ: ಬೀದರ್‌ ಲಿಂಗಾಯತರ ಬಾಹುಳ್ಯವುಳ್ಳ ಕ್ಷೇತ್ರ. 5.50 ಲಕ್ಷ ಲಿಂಗಾಯತರು ಇದ್ದರೆ ಪರಿಶಿಷ್ಟರು 4.50 ಲಕ್ಷ, ಅಲ್ಪಸಂಖ್ಯಾಕರು 3.50 ಲಕ್ಷ ಮತ್ತು ಮರಾಠಾ ಎರಡು ಲಕ್ಷ ಮತದಾರರನ್ನು ಹೊಂದಿದೆ. ಬಿಜೆಪಿಯ ಖೂಬಾ ಮತ್ತು ಕಾಂಗ್ರೆಸ್‌ನ ಸಾಗರ್‌ ಇಬ್ಬರು ಸಹ ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಎರಡು ಪಕ್ಷಗಳು ತಮ್ಮದೇಯಾದ ಓಟ್‌ ಬ್ಯಾಂಕ್‌ ಹೊಂದಿವೆ. ಹಾಗಾಗಿ ಈ ಮತಗಳು ಯಾರ ಪಾಲಾಗುತ್ತವೆ ಎಂಬುದು ನಿಗೂಢ. ಇನ್ನು ಕ್ಷೇತ್ರದಲ್ಲಿ ಗೆಲುವಿಗೆ ನಿರ್ಣಾಯಕ ಪಾತ್ರ ವಹಿಸುವ ಮರಾಠಾ ಸಮಾಜ ಸಹ ಈ ಸಲ ಪಕ್ಷೇತರ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಈ ಬೆಳವಣಿಗೆ ಎರಡೂ ಪಕ್ಷಗಳಿಗೆ ನುಂಗಲಾರದ ತುತ್ತಾಗಿದೆ. ವಿಶೇಷವಾಗಿ ಮರಾಠಾ ಸಾಂಪ್ರದಾಯಿಕ ಮತಗಳನ್ನು ನೆಚ್ಚಿಕೊಂಡಿರುವ ಬಿಜೆಪಿ ಮೇಲೆ ಹೆಚ್ಚು ಪರಿಣಾಮ ಬೀರುವ ಸಾಧ್ಯತೆಯಿದೆ. ವಿಭಜನೆಯಾಗುವ ಈ ಮತಗಳನ್ನು ಒಲಿಸಿಕೊಳ್ಳಲು ಯಾರೂ ಪ್ರಯತ್ನಿಸುತ್ತಾರೋ ಅವರಿಗೆ ಗೆಲುವು ಸಿದ್ಧಿಸಲಿದೆ.

– ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.