LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


Team Udayavani, Apr 25, 2024, 9:58 AM IST

5-harikrishna

ಮಂಗಳೂರು: ತುಳುನಾಡಿನ ಪುಣ್ಯದ ಮಣ್ಣಿನ ಜನರು ಹಿಂದೂ ಸಂಸ್ಕೃತಿ, ಪರಂಪರೆ ಉಳಿಸುವ ಆಶಯದಿಂದಾಗಿ ಜಾತಿಯನ್ನು ನೋಡದೆ ದೇಶದ ಹಿತವನ್ನೇ ಬಯಸಿದ ಕಾರಣ ದಿಂದ ಬಿಜೆಪಿ ಸಶಕ್ತವಾಗಿ ಕರಾವಳಿಯಲ್ಲಿ ನಿಂತಿದೆ. ಈ ಬಾರಿಯ ಲೋಕಸಭಾ ಚುನಾವಣೆಯ ವೇಳೆಯಲ್ಲೂ ಜಾತಿಗಿಂತ ದೇಶದ ಹಿತವೇ ಮುಖ್ಯ ಎಂಬುವುದನ್ನು ಕ್ಯಾ| ಬ್ರಿಜೇಶ್‌ ಚೌಟ ಗೆಲುವಿನ ಮೂಲಕ ಮತದಾರರು ಸ್ಪಷ್ಟಪಡಿಸಲಿದ್ದಾರೆ ಎಂದು ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ ಹೇಳಿದರು.

ಕ್ಯಾ| ಬ್ರಿಜೇಶ್‌ ಚೌಟ ಅವರ ಪರ ಮೂಲ್ಕಿಯಲ್ಲಿ ಬುಧವಾರ ನಡೆದ ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ತುಳುನಾಡಿನ ಮಣ್ಣು ಅತ್ಯಂತ ಪವಿತ್ರವಾದ ಮಣ್ಣು. ಕಳೆದ 33 ವರ್ಷಗಳಿಂದ ಇಲ್ಲಿನ ಮತದಾರರು ಜಾತಿ, ಮತ, ಪಂಥ, ಭಾಷೆ ನೋಡದೆ ಮತದಾನ ಮಾಡಿದ್ದಾರೆ. ಧನಂಜಯ ಕುಮಾರ್‌, ಸದಾನಂದ ಗೌಡ, ನಳಿನ್‌ ಕುಮಾರ್‌ ಕಟೀಲು ಅವರ ಜತೆಗೆ ನಮ್ಮ ಬಿಲ್ಲವರು, ಬಂಟರು, ಕುಲಾಲರು, ಬ್ರಾಹ್ಮಣರ ಸಹಿತ ಎಲ್ಲ ತುಳುನಾಡಿನ ಮಣ್ಣಿನ ಮಕ್ಕಳು ಜಾತಿ ನೋಡದೆ ಮತ ನೋಡದೆ ಭಾರತದ ಹಿಂದೂ ಸಂಸ್ಕೃತಿ, ಪರಂಪರೆ ಉಳಿಸುವಂತಹ ಪಕ್ಷವಾದ ಬಿಜೆಪಿ ಪರವಾಗಿಯೇ ನಿಂತಿದ್ದಾರೆ. ಇದೇ ರೀತಿ ಈ ಬಾರಿಯೂ ಕ್ಯಾ| ಬ್ರಿಜೇಶ್‌ ಚೌಟ ಅವರ ಬಿಜೆಪಿ ಪರವಾಗಿಯೇ ಜನರು ನಿಲ್ಲಲಿದ್ದಾರೆ. ಇದರಲ್ಲಿ ಜಾತಿ ನೋಡುವುದಿಲ್ಲ. ಮತ-ಭಾಷೆಯನ್ನೂ ಜನರು ನೋಡುವುದಿಲ್ಲ. ದೇಶದ ಹಿತವನ್ನೇ ಜನರು ಬಯಸಿದ್ದಾರೆ ಎಂದರು.

ಕಾಂಗ್ರೆಸ್‌ನ ಕೈ ಚಿಹ್ನೆಯಲ್ಲಿ 5 ಬೆರಳುಗಳಿವೆ. ಅದರಲ್ಲಿ 1 ಬೆರಳು ಮಾತ್ರ ಕಾಂಗ್ರೆಸ್‌. ಉಳಿದ ಒಂದೊಂದು ಬೆರಳುಗಳು ಭಾರತ ವಿರೋಧಿ ನಿಲುವು ಹೊಂದಿದ ಪಕ್ಷಗಳ ಸಖ್ಯವನ್ನು ಹೊಂದಿದೆ. ಹೀಗಾಗಿ ಭಾರತ ವಿರೋಧಿ ಪಕ್ಷವನ್ನು ಮೆಟ್ಟಿನಿಲ್ಲಬೇಕಿದೆ ಎಂದರು.

ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಈ ಬಾರಿಯೂ ಬಿಜೆಪಿ ಗೆಲ್ಲುವುದಕ್ಕೆ ಹಾಗೂ ಪ್ರಧಾನಿಯಾಗಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದವರು ಹೇಳಿದರು.

ಶಾಸಕ ಉಮಾನಾಥ ಕೋಟ್ಯಾನ್‌, ಬಿಜೆಪಿ ಮುಖಂಡರಾದ ಈಶ್ವರ ಕಟೀಲು, ಅನಿಲ್‌ ಕುಮಾರ್‌, ದಿನೇಶ್‌ ಮುಂತಾದವರು ಉಪಸ್ಥಿತರಿದ್ದರು.

“ಪ್ರಧಾನಿ ಮೋದಿ ಭಾರತ ಮಾತೆಯ ಪೂಜಾರಿ

ಭಾರತ ಮಾತೆಯನ್ನು ಪೂಜೆ ಮಾಡಿ, ದೇಶದ ಸರ್ವ ಜನರ ಹಾರೈಕೆಯನ್ನೇ ತನ್ನ ಕಾಯಕವಾಗಿ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರೇ ಈ ದೇಶದ ಮಹಾ ಪೂಜಾರಿ. ಅವರು ಭಾರತದ ಪೂಜಾರಿಯೂ ಹೌದು. ಹಿಂದುತ್ವದ ಪೂಜಾರಿಯೂ ಹೌದು. ದೇಶದ ಸಂಸ್ಕೃತಿ, ಪರಂಪರೆಯನ್ನು ಉಳಿಸುವ ಪೂಜಾರಿ ಅವರು. ದೇಶ ರಕ್ಷಣೆಯ ಮಹಾ ಸಂಕಲ್ಪದ ಕನಸುಗಾರ ಅವರು ಎಂದು ಹರಿಕೃಷ್ಣ ಬಂಟ್ವಾಳ ಹೇಳಿದರು.

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullal ಜು. 10- 16: ಸೋಮೇಶ್ವರ‌ ರೈಲ್ವೇಗೇಟ್‌ ಬಂದ್‌

Ullal ಜು. 10- 16: ಸೋಮೇಶ್ವರ‌ ರೈಲ್ವೇಗೇಟ್‌ ಬಂದ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

ಪರಿಸರ ಸಂರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ

Brijesh Chowta ಪರಿಸರ ಸಂರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ

Congress ಹಿಂದೂ ವಿರೋಧಿ ಪಕ್ಷ: ಸಂಸದ ಕ್ಯಾ| ಬ್ರಿಜೇಶ್‌ ಚೌಟ

Congress ಹಿಂದೂ ವಿರೋಧಿ ಪಕ್ಷ: ಸಂಸದ ಕ್ಯಾ| ಬ್ರಿಜೇಶ್‌ ಚೌಟ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.