ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು


Team Udayavani, Apr 25, 2024, 5:53 PM IST

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಗಂಗೊಳ್ಳಿ: ಮೃತ ವ್ಯಕ್ತಿಯ ಹೆಸರಿನಲ್ಲಿ ನಕಲಿ ಸಹಿ ಮಾಡಿ ಜನರಲ್‌ ಪವರ್‌ ಆಫ್‌ ಅಟಾರ್ನಿ ತಯಾರಿಸಿ ವಂಚಿಸಿರುವ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರೇಮಾ ಎಂಬವರು ದೂರು ದಾಖಲಿಸಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

ಗುಜ್ಜಾಡಿ ಗ್ರಾಮದ ಕೊಡಪಾಡಿ ಎಂಬಲ್ಲಿ ಬಾಬು ಅವರಿಗೆ ಸೇರಿದ್ದ ಸರ್ವೆ ನಂಬರ್‌ 62/3ರಲ್ಲಿ 93 ಸೆಂಟ್ಸು, 62/15ರಲ್ಲಿ 15 ಸೆಂಟ್ಸು, 62/12ಬಿರಲ್ಲಿ 16 ಸೆಂಟ್ಸು, 62/4ರಲ್ಲಿ 68 ಸೆಂಟ್ಸು ಜಾಗ ಕರ್ನಾಟಕ ಭೂ ಮಸೂದೆ ಕಾಯ್ದೆಯಂತೆ ಕುಂದಾಪುರ ಭೂ ನ್ಯಾಯ ಮಂಡಳಿಯ ಅಧಿಬೋಗದಾರಿಕೆಯಲ್ಲಿ ತೀರ್ಪು ಆಗಿರುತ್ತದೆ.

ಪಿರ್ಯಾದಿದಾರರಾದ ಪ್ರೇಮಾ ಅವರ ತಂದೆ ಸುಮಾರು 10 ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿದ್ದರು. 2ನೇ ಆರೋಪಿ ರಾಜು ಪಿರ್ಯಾದಿದಾರರ ತಂದೆಯ ಆಸ್ತಿಯನ್ನು 1ನೇ ಆರೋಪಿತರಾದ ತುಂಗಾ ಅವರ ಹೆಸರಿಗೆ ಮಾಡಿಕೊಡುವಂತೆ ಒತ್ತಡ ಹೇರುತ್ತಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪಿರ್ಯಾದಿದಾರ ಪ್ರೇಮಾ ಅವರ ತಂದೆ ಬಾಬು ಅವರು ಮಾತನಾಡುವ ಹಾಗೂ ಸಹಿ ಹಾಕುವ ಸ್ಥಿತಿಯಲ್ಲಿ ಇಲ್ಲದಿದ್ದರೂ, ಆರೋಪಿತರು ಪಿರ್ಯಾದಿದಾರರ ತಂದೆಯ ಆಸ್ತಿಯನ್ನು ಲಪಟಾಯಿಸುವ ಉದ್ದೇಶದಿಂದ ಬಾಬು ಅವರ ಹೆಸರಿನಲ್ಲಿ ನಿರಾಕ್ಷೇಪಣಾ ಪ್ರಮಾಣ ಪತ್ರ ಪಡೆಯಲು ಮನವಿ ಪತ್ರ ತಯಾರಿಸಿ ಅದರಲ್ಲಿ ಪಿರ್ಯಾದಿದಾರರ ಪೋರ್ಜರಿ ಸಹಿ ಮಾಡಿ ಅದನ್ನು ತಹಶೀಲ್ದಾರರಿಗೆ ನೀಡಿ 3 ನಿರಾಕ್ಷೇಪಣಾ ಪತ್ರ ಪಡೆದುಕೊಂಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

18/07/2023ರಂದು ಅನಾರೋಗ್ಯದಲ್ಲಿದ್ದ ಬಾಬು ಅವರು ಮೃತಪಟ್ಟಿದ್ದರು. ಬಳಿಕ 02/11/2023ರಂದು ಮೃತ ಬಾಬು ಅವರ ಹೆಸರಿನಲ್ಲಿ 200 ರೂಪಾಯಿ ಮುಖಬೆಲೆಯ ಸ್ಟ್ಯಾಂಪ್‌ ಪೇಪರ್‌ ನಲ್ಲಿ ಬಾಬು ಅವರ ನಕಲಿ ಸಹಿ ಮಾಡಿ ಪವರ್‌ ಆಫ್‌ ಅಟಾರ್ನಿ ತಯಾರಿಸಿದ್ದರು. ಅದಲ್ಲದೇ ಜನರಲ್‌ ಪವರ್‌ ಆಫ್‌ ಅಟಾರ್ನಿಯ ಮೂಲಕ ವ್ಯವಸ್ಥಾಪನಾ ಪತ್ರ ತಯಾರಿಸಿ ಉಪನೋಂದಣಾಧಿಕಾರಿ ಮುಂದೆ ಹಾಜರುಪಡಿಸಿ ನೊಂದಾವಣೆ ಮಾಡಿಸಿರುವುದಾಗಿ ದೂರಿನಲ್ಲಿ ತಿಳಿಸಿದ್ದು, ಅದರನ್ವಯ ಆರೋಪಿತರ ವಿರುದ್ಧ ಐಪಿಸಿ ಕಲಂ 420, 465, 468, 471ರಂತೆ ಪ್ರಕರಣ ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangolli: Disgusted person commits suicide

Gangolli: ಜುಗುಪ್ಸೆಗೊಂಡು ವ್ಯಕ್ತಿ ಆತ್ಮಹತ್ಯೆ

ಬಿಸಿಲಿನ ತಾಪಕ್ಕೆ ಕರಾವಳಿಯ ಯುವಕ ವಿದೇಶದಲ್ಲಿ ಸಾವು

Kundapura: ಬಿಸಿಲಿನ ತಾಪಕ್ಕೆ ಕರಾವಳಿಯ ಯುವಕ ವಿದೇಶದಲ್ಲಿ ಸಾವು

Gangolli: ಗೋ ಕಳವಿಗೆ ಯತ್ನಿಸಿ ಪರಾರಿಯಾಗಿದ್ದ ಆರೋಪಿಗಳ ಬಂಧನ

Gangolli: ಗೋ ಕಳವಿಗೆ ಯತ್ನಿಸಿ ಪರಾರಿಯಾಗಿದ್ದ ಆರೋಪಿಗಳ ಬಂಧನ

Maravanthe- ತ್ರಾಸಿ ಬೀಚ್‌: ಬಂಡೆಗಳು ಜಾರುತ್ತಿದ್ದರೂ ಪ್ರವಾಸಿಗರ ಮೋಜಿನಾಟ

Maravanthe- ತ್ರಾಸಿ ಬೀಚ್‌: ಬಂಡೆಗಳು ಜಾರುತ್ತಿದ್ದರೂ ಪ್ರವಾಸಿಗರ ಮೋಜಿನಾಟ

Thekkatte: ಸುಟ್ಟು ಕರಕಲಾದ ಎರಡು ದ್ವಿಚಕ್ರ ವಾಹನ

Thekkatte: ಸುಟ್ಟು ಕರಕಲಾದ ಎರಡು ದ್ವಿಚಕ್ರ ವಾಹನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.