Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

ಜಾತಿ, ಧರ್ಮದ ಹಂಗಿಲ್ಲ.. ಸಿನಿಮಾವಲ್ಲವಿದು ಮಾನವೀಯತೆ ಎಂಬ ಪದಕ್ಕೆ ಅರ್ಥ ನೀಡಿತು

Team Udayavani, Apr 25, 2024, 6:16 PM IST

1-asaa

ಹೊಸದಿಲ್ಲಿ: ಮಾನವೀಯತೆ ಎಂಬ ಪದದ ಅರ್ಥಕ್ಕೆ ವ್ಯಾಪ್ತಿ ವಿಶಾಲವಾದದ್ದು, ಅದಕ್ಕೆ ಜಾತಿ, ಧರ್ಮಗಳ ಹಂಗಿಲ್ಲ. ದೇಶಗಳ ವ್ಯಾಪ್ತಿಯೂ ಇಲ್ಲ. ಹೃದಯ ಮಿಡಿಯುವ, ಹೃದಯ ವೈಶಾಲ್ಯ ಮೆರೆದ ಈ ಘಟನೆಯೇ ಸಾಕ್ಷಿ.

ಹೃದಯಾಘಾತಕ್ಕೊಳಗಾಗಿ ತೀವ್ರ ಸಮಸ್ಯೆಯಿಂದ ಬಳಲುತ್ತಿದ್ದ ಪಾಕಿಸ್ಥಾನದ ಹದಿಹರೆಯದ ಯುವತಿಯೊಬ್ಬಳು ದೆಹಲಿಯಲ್ಲಿ ಹೃದಯ ದಾನಿಯೊಬ್ಬರಿಂದ ಹೃದಯ ಪಡೆದ ನಂತರ ಹೊಸ ಜೀವನವನ್ನು ಪಡೆದುಕೊಂಡಿದ್ದಾಳೆ.

19 ರ ಹರೆಯದ ಆಯೇಶಾ ರಶಾನ್ ಕಳೆದ ಒಂದು ದಶಕದಿಂದ ಹೃದ್ರೋಗದಿಂದ ಬಳಲುತ್ತಿದ್ದಳು. 2014 ರಲ್ಲಿ ಆಕೆ ಭಾರತಕ್ಕೆ ಭೇಟಿ ನೀಡಿದ್ದಳು, ಆಕೆಗೆ ಹೃದಯ ಪಂಪ್ ಅನ್ನು ಅಳವಡಿಸಲಾಗಿತ್ತು. ಆಕೆಯ ಹೃದಯವು ದುರ್ಬಲಗೊಂಡಿತ್ತು. ದುರದೃಷ್ಟವಶಾತ್, ಸಾಧನವು ನಿಷ್ಪರಿಣಾಮಕಾರಿಯಾಗಿದೆ ಎಂದು ಸಾಬೀತಾದ ಬಳಿಕ ತಜ್ಞ ವೈದ್ಯರು ಆಕೆಯ ಜೀವವನ್ನು ಉಳಿಸಲು ಹೃದಯ ಕಸಿ ಮಾಡಲು ಶಿಫಾರಸು ಮಾಡಿದರು.

ಆಯೇಷಾ ರಶಾನ್ ಅವರ ಕುಟುಂಬವು ಚೆನ್ನೈನ ಎಂಜಿಎಂ ಹೆಲ್ತ್‌ಕೇರ್ ಆಸ್ಪತ್ರೆಯಲ್ಲಿ ಹೃದಯ ಮತ್ತು ಶ್ವಾಸಕೋಶ ಕಸಿ ಸಂಸ್ಥೆಯ ನಿರ್ದೇಶಕ ಡಾ.ಕೆ.ಆರ್.ಬಾಲಕೃಷ್ಣನ್ ಮತ್ತು ಸಹ ನಿರ್ದೇಶಕ ಡಾ.ಸುರೇಶ್ ರಾವ್ ಅವರಿಂದ ಸಮಾಲೋಚನೆಯನ್ನು ಕೋರಿತು. ಆಯೇಷಾಳ ಹೃದಯ ಪಂಪ್ ಸೋರಿಕೆಯನ್ನು ಅಭಿವೃದ್ಧಿಪಡಿಸಿದ ಕಾರಣ ಹೃದಯ ಕಸಿ ಅಗತ್ಯ ಎಂದು ವೈದ್ಯಕೀಯ ತಂಡ ಸಲಹೆ ನೀಡಿತು ಮತ್ತು ಆಕೆಯನ್ನು ECMO( ಎಕ್ಸ್‌ಟ್ರಾ ಕಾರ್ಪೋರಿಯಲ್ ಮೆಂಬರೇನ್ ಆಕ್ಸಿಜನೇಷನ್) ಪ್ರಕ್ರಿಯೆಗೆ ಒಳಪಡಿಸಲಾಯಿತು.

ಆದರೆ, ಕಸಿ ಪ್ರಕ್ರಿಯೆಗೆ ಅಗತ್ಯವಿರುವ 35 ಲಕ್ಷ ರೂ.ಗೂ ಹೆಚ್ಚು ಹಣವನ್ನು ಭರಿಸಲು ತಮ್ಮ ಅಸಮರ್ಥತೆಯನ್ನು ಉಲ್ಲೇಖಿಸಿ ಕುಟುಂಬಹಿಂದೇಟು ಹಾಕಿತು. ಈ ವೇಳೆ ನೆರವಿಗೆ ಮುಂದಾದ ವೈದ್ಯಕೀಯ ತಂಡ ಕುಟುಂಬವನ್ನು ಐಶ್ವರ್ಯಂ ಟ್ರಸ್ಟ್‌ನ ಸಂಪರ್ಕ ಮಾಡಿಸಿತು. ಟ್ರಸ್ಟ್‌ ಆರ್ಥಿಕ ಸಹಾಯವನ್ನು ನೀಡಿತು. ಆರು ತಿಂಗಳ ಹಿಂದೆ, ಆಯೇಶಾ ದೆಹಲಿಯಲ್ಲಿ ದಾನಿಯೊಬ್ಬರ ಹೃದಯವನ್ನು ಪಡೆದಳು. ಆಕೆ 18 ತಿಂಗಳ ಕಾಲ ಭಾರತದಲ್ಲಿ ತಂಗಿದ ನಂತರ MGM ಹೆಲ್ತ್‌ಕೇರ್‌ನಲ್ಲಿ ಕಸಿ ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ನಡೆಸಲಾಯಿತು.

ಹೊಸ ಹೃದಯ ಪಡೆದ ಬಳಿಕ ಭರವಸೆ ಮತ್ತು ಕೃತಜ್ಞತೆಯಿಂದ ತುಂಬಿದ ಆಯೇಷಾ ತನ್ನ ಸಂತೋಷವನ್ನು ವ್ಯಕ್ತಪಡಿಸಿದ್ದು, ವೈದ್ಯರು ಮತ್ತು ಭಾರತ ಸರಕಾರವು ನೀಡಿದ ಬೆಂಬಲಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾಳೆ.

ಆಯೇಷಾಳ ತಾಯಿ ಸನೋಬಾರ್ ಅವರು ಆಯೇಷಾ ಬದುಕುತ್ತಿರಲಿಲ್ಲ ಎಂದು ನೋವಿನ ದಿನಗಳನ್ನು ನೆನಪಿಸಿಕೊಂಡಿದ್ದು, ಭಾರತಕ್ಕೆ ಬಂದಾಗ ಮಗಳ ಸ್ಥಿತಿಯು ಕೇವಲ 10 ಪ್ರತಿಶತದಷ್ಟು ಚೈತನ್ಯ ಹೊಂದಿತ್ತು ಎಂದು ಹೇಳಿದ್ದಾರೆ.

“ನಿಜವಾಗಿ ಹೇಳಬೇಕೆಂದರೆ, ಭಾರತಕ್ಕೆ ಹೋಲಿಸಿದರೆ ಪಾಕಿಸ್ಥಾನದಲ್ಲಿ ಉತ್ತಮ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿಲ್ಲ. ಭಾರತ ತುಂಬಾ ಸ್ನೇಹಪರವಾಗಿದೆ ಎಂದು ನಾನು ಭಾವಿಸುತ್ತೇನೆ. ಯಾವುದೇ ಕಸಿ ಸೌಲಭ್ಯ ಲಭ್ಯವಿಲ್ಲ ಎಂದು ಪಾಕಿಸ್ಥಾನದ ವೈದ್ಯರು ಹೇಳಿದಾಗ, ನಾವು ಡಾ. ಕೆ.ಆರ್. ಬಾಲಕೃಷ್ಣನ್ ಅವರನ್ನು ಸಂಪರ್ಕಿಸಿದೇವು. ನಾನು ಭಾರತಕ್ಕೆ ಮತ್ತು ಚಿಕಿತ್ಸೆ ನೀಡಿದ ವೈದ್ಯರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಭಾವುಕರಾಗಿದ್ದಾರೆ.

ಸದ್ಯ ಆಯೇಷಾ ಹೊಸ ಭರವಸೆ ಹೊಂದಿ ಹೊಸ ಜೀವನವನ್ನು ಎದುರು ಕಾಣುತ್ತಿದ್ದು, ಫ್ಯಾಷನ್ ಡಿಸೈನರ್ ಆಗುವ ಕನಸನ್ನು ಹೊಂದಿದ್ದಾರೆ.

ಟಾಪ್ ನ್ಯೂಸ್

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.