Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Team Udayavani, Apr 26, 2024, 6:57 AM IST
ಬೆಂಗಳೂರು: ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ತನ್ನ ಸಹೋದರ ಮತ್ತು ಸ್ನೇಹಿತರ ಜತೆ ಸೇರಿ ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಡಿ ಹೈಗ್ರೌಂಡ್ಸ್ ಠಾಣೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಚಿತ್ರದುರ್ಗ ಮೂಲದ ಸಂತ್ರಸ್ತೆ ಸರಕಾರಿ ನೌಕರಿ ಮಾಡುತ್ತಿದ್ದು, ಠಾಣೆ ವ್ಯಾಪ್ತಿಯ ಪೇಯಿಂಗ್ ಗೆಸ್ಟ್ನಲ್ಲಿ ವಾಸವಾಗಿದ್ದರು. ಎ.20ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಕೆಲಸಕ್ಕೆ ಹೋಗುತ್ತಿದ್ದಾಗ, ಆರೋಪಿಗಳು ಕಾರಿನಲ್ಲಿ ಬಂದು ಆಕೆಯನ್ನು ಅಪರಿಸಿದ್ದಾರೆ. ಬಳಿಕ ನಗರದ ಹೊರವಲಯದ ಕೋಣೆಯೊಂದರಲ್ಲಿ ಸಂತ್ರಸ್ತೆಯನ್ನು ಕೂಡಿ ಹಾಕಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಹಲವು ವರ್ಷಗಳ ಪರಿಚಯ:
ಸಂತ್ರಸ್ತೆ ಮತ್ತು ಪ್ರಮುಖ ಆರೋಪಿ ಹಲವು ವರ್ಷಗಳಿಂದ ಪರಿಚಿತರು. ಇಬ್ಬರು ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ. ಇತ್ತೀಚೆಗೆ ಯುವತಿಗೆ ಸರಕಾರಿ ಉದ್ಯೋಗ ಸಿಕ್ಕಿತ್ತು. ಹೈಗ್ರೌಂಡ್ಸ್ನಲ್ಲಿ ಪೇಯಿಂಗ್ ಗೆಸ್ಟ್ನಲ್ಲಿ ಉಳಿದುಕೊಂಡು, ಅಲ್ಲಿಂದಲೇ ಕೆಲಸಕ್ಕೆ ಹೋಗುತ್ತಿದ್ದರು. ಆ ಬಳಿಕವೂ ಇಬ್ಬರು ಸಂಪರ್ಕದಲ್ಲಿದ್ದರು.
ಈ ಮಧ್ಯೆ ಯುವತಿ ಆರೋಪಿಯಿಂದ ಅಂತರ ಕಾಯ್ದುಕೊಳ್ಳಲು ಆರಂಭಿಸಿದ್ದಾರೆ. ಕರೆ ಮಾಡಿದರೂ ಪ್ರತಿಕ್ರಿಯೆ ನೀಡುತ್ತಿರಲಿಲ್ಲ. ಅದರಿಂದ ಕೋಪಗೊಂಡಿದ್ದ ಆರೋಪಿ, ಯುವತಿಯನ್ನು ಅಪಹರಿಸಿ ಅತ್ಯಾಚಾರವೆಸಗಲು ಸಂಚು ರೂಪಿಸಿದ್ದ. ಅದಕ್ಕೆ ತನ್ನ ಸಹೋದರ ಹಾಗೂ ಸ್ನೇಹಿತರಿಗೆ ವಿಷಯ ತಿಳಿಸಿ ಸಹಕಾರ ಕೋರಿದ್ದ. ಅವರೆಲ್ಲರೂ ಒಪ್ಪಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಎ.20ರಂದು ಆರೋಪಿಗಳು ಸಂತ್ರಸ್ತೆಯನ್ನು ಅಪಹರಿಸಿ, ಕೋಣೆಯೊಂದರಲ್ಲಿ ಅತ್ಯಾಚಾರ ಎಸಗಿದ್ದಾರೆ ಎಂಬುದು ಗೊತ್ತಾಗಿದೆ. ಬಂಧಿತ ಆರೋಪಿಗಳನ್ನು ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.