![yogi](https://www.udayavani.com/wp-content/uploads/2024/07/yogi-3-415x249.jpg)
Gukesh: ಚಾಂಪಿಯನ್ ಗುಕೇಶ್ಗೆ ಭವ್ಯ ಸ್ವಾಗತ
Team Udayavani, Apr 25, 2024, 10:39 PM IST
![Gukesh: ಚಾಂಪಿಯನ್ ಗುಕೇಶ್ಗೆ ಭವ್ಯ ಸ್ವಾಗತ](https://www.udayavani.com/wp-content/uploads/2024/04/26-2-620x372.jpg)
ಚೆನ್ನೈ: ಟೊರೊಂಟೊ ದಲ್ಲಿ ನಡೆದ ಪ್ರತಿಷ್ಠಿತ ಕ್ಯಾಂಡಿಡೇಟ್ಸ್ ಚೆಸ್ ಕೂಟದ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಹದಿ ಹರೆಯದ ಚೆಸ್ ತಾರೆ ಗ್ರ್ಯಾನ್ ಮಾಸ್ಟರ್ ಡಿ. ಗುಕೇಶ್ ಅವರು ಗುರುವಾರ ಬೆಳಗ್ಗೆ 3 ಗಂಟೆಗೆ ಚೆನ್ನೈ ಗೆ ಬಂದಾಗ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಲಾಯಿತು.
ಗುಕೇಶ್ ಶಾಲಾ ದಿನಗಳಲ್ಲಿ ಕಲಿತ ವೆಲಮ್ಮಾಲ್ ವಿದ್ಯಾಲಯದ ನೂರಾರು ವಿದ್ಯಾರ್ಥಿಗಳು ವಿಮಾನನಿಲ್ದಾಣದಲ್ಲಿ ಸಾಲಾಗಿ ನಿಂತು 17ರ ಹರೆಯದ ಚೆಸ್ ತಾರೆಯನ್ನು ಪ್ರೀತಿಯಿಂದ ಬರಮಾಡಿಕೊಂಡರು. ಸಾರ್ವ ಜನಿಕರೂ ಭಾರೀ ಸಂಖ್ಯೆಯಲ್ಲಿ ಅವರಿಗೆ ಗುಲಾಬಿ ಹೂಗಳ ಬೃಹತ್ ಮಾಲೆ ಹಾಕಿ ಸ್ವಾಗತಿಸಿ ದರು.
ತವರಿಗೆ ಬರುತ್ತಿರುವುದಕ್ಕೆ ಅತ್ಯಂತ ಖುಷಿಯಾಗುತ್ತಿದೆ. ಇದೊಂದು ವಿಶೇಷ ಸಾಧನೆ ಯಾಗಿದೆ. ಕೂಟ ಆರಂಭವಾದ ಬಳಿಕ ನಾನು ಉತ್ತಮ ಸ್ಥಿತಿಯಲ್ಲಿದ್ದೆ. ಹೀಗಾಗಿ ಪ್ರಶಸ್ತಿ ಗೆಲ್ಲುವ ಆತ್ಮವಿಶ್ವಾಸವೂ ನನ್ನಲ್ಲಿತ್ತು. ಅದೃಷ್ಟವೂ ನನ್ನ ಪರವಾಗಿತ್ತು ಎಂದು ಗುಕೇಶ್ ತಿಳಿಸಿದರು. ಬಹಳಷ್ಟು ಮಂದಿ ಚೆಸ ಆಟ ವನ್ನು ಆನಂದಿಸು ತ್ತಿರುವುದು ಉತ್ತಮ ವಿಷಯವಾಗಿದೆ. ಪ್ರಶಸ್ತಿ ಗೆಲ್ಲಲು ನೆರವು ಮತ್ತು ಮಹತ್ತರ ಪಾತ್ರ ವಹಿಸಿದ ತಮಿಳುನಾಡು ಸರಕಾರ, ಅಪ್ಪ, ಅಮ್ಮ, ಕೋಚ್, ಸ್ನೇಹಿತರು. ಕುಟುಂಬ, ಪ್ರಾಯೋಜಕರು ಮತ್ತು ಶಾಲೆಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದವರು ಹೇಳಿದರು.
ಇಎನ್ಟಿ ಸರ್ಜನ್ ಆಗಿರುವ ತಂದೆ ರಜನಿಕಾಂತ್ ತನ್ನ ಕೆಲಸವನ್ನು ತೊರೆದು ಪುತ್ರನ ಜತೆ ಟೊರೊಂಟೊಗೆ ಪ್ರಯಾಣಿಸಿದ್ದರು. ತಾಯಿ ಪದ್ಮಾ ಮೈಕ್ರೊಬಯೋಲಾಜಿಸ್ಟ್ ಆಗಿದ್ದಾರೆ. ಇದೊಂದು ನಮ್ಮ ಪಾಲಿಗೆ ಅತ್ಯಂತ ಹೆಮ್ಮೆಯ ಕ್ಷಣವಾಗಿದೆ. ಈ ಸಾಧನೆಯ ಮಹತ್ವವನ್ನು ಅರಿತುಕೊಳ್ಳಲು ನಮಗೆ ಕೆಲವು ಸಮಯ ಬೇಕಾಗಿದೆ ಎಂದು ರಜನಿಕಾಂತ್ ಹೇಳಿದರು.
ಟಾಪ್ ನ್ಯೂಸ್
![yogi](https://www.udayavani.com/wp-content/uploads/2024/07/yogi-3-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ](https://www.udayavani.com/wp-content/uploads/2024/07/india-150x84.jpg)
T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ
![ICC-Champions-Trophy](https://www.udayavani.com/wp-content/uploads/2024/07/ICC-Champions-Trophy-150x90.jpg)
ICC Champions Trophy: ಮಾ.1ಕ್ಕೆ ಲಾಹೋರ್ನಲ್ಲಿ ಭಾರತ-ಪಾಕಿಸ್ಥಾನ ಪಂದ್ಯ
![Team-india](https://www.udayavani.com/wp-content/uploads/2024/07/Team-india-2-150x90.jpg)
T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?
![ICC T20I Rankings: ವಿಶ್ವಕಪ್ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ](https://www.udayavani.com/wp-content/uploads/2024/07/13-1-150x90.jpg)
ICC T20I Rankings: ವಿಶ್ವಕಪ್ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ
![1-asddasdsa](https://www.udayavani.com/wp-content/uploads/2024/07/1-asddasdsa-1-150x100.jpg)
Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ
MUST WATCH
ಹೊಸ ಸೇರ್ಪಡೆ
![yogi](https://www.udayavani.com/wp-content/uploads/2024/07/yogi-3-150x90.jpg)
Hathras Stampede: ಹಾಥರಸ್ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ
![UK Election 2024: ಇಂದು ಬ್ರಿಟನ್ನಲ್ಲಿ ಸಂಸತ್ ಚುನಾವಣೆ… ನಾಳೆ ಫಲಿತಾಂಶ](https://www.udayavani.com/wp-content/uploads/2024/07/election-150x94.jpg)
UK Election 2024: ಇಂದು ಬ್ರಿಟನ್ನಲ್ಲಿ ಸಂಸತ್ ಚುನಾವಣೆ… ನಾಳೆ ಫಲಿತಾಂಶ
![CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ](https://www.udayavani.com/wp-content/uploads/2024/07/kangana-150x85.jpg)
CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ
![LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/advani-150x87.jpg)
LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು
![5-byndoor](https://www.udayavani.com/wp-content/uploads/2024/07/5-byndoor-150x90.jpg)
Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.