IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
Team Udayavani, Apr 25, 2024, 11:12 PM IST
ಹೈದರಾಬಾದ್ : ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 35 ರನ್ ಜಯದ ನಗು ಬೀರಿದೆ.
ಹೈದರಾಬಾದ್ ಆಡಿದ 8 ನೇ ಪಂದ್ಯದಲ್ಲಿ 3 ನೇ ಸೋಲು ಅನುಭವಿಸಿತು. ಆರ್ ಸಿಬಿ ಆಡಿದ 9ನೇ ಪಂದ್ಯದಲ್ಲಿ 2 ನೇ ಗೆಲುವು ಸಾಧಿಸಿತು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆರ್ ಸಿಬಿ 7 ವಿಕೆಟ್ ನಷ್ಟಕ್ಕೆ 206 ರನ್ ಕಲೆ ಹಾಕಿತು. ಕೊಹ್ಲಿ 51(43 ಎಸೆತ )ರನ್ ಗಳಿಸಿ ಔಟಾದರು. ನಾಯಕ ಡು ಪ್ಲೆಸಿಸ್ 25(12 ಎಸೆತ) ಔಟಾದರು. ವಿಲ್ ಜಾಕ್ಸ್ 6 ರನ್ ಗೆ ಆಟ ಮುಗಿಸಿದರು. ಆ ಬಳಿಕ ಅಬ್ಬರಿಸಿದ ರಜತ್ ಪಾಟಿದಾರ್ ಅಮೋಘ ಅರ್ಧಶತಕ ಗಳಿಸಿ ಔಟಾದರು. 20 ಎಸೆತಗಳಲ್ಲಿ 50 ರನ್ ಗಳಿಸಿದರು. 2 ಬೌಂಡರಿ ಮತ್ತು 5 ಸಿಕ್ಸರ್ ಸಿಡಿಸಿದರು. ಕ್ಯಾಮರೂನ್ ಗ್ರೀನ್ 37(20) ರನ್ ಗಳಿಸಿ ಔಟಾಗದೆ ಉಳಿದರು. ಲೊಮ್ರೋರ್ 7, ಕಾರ್ತಿಕ್11, ಸ್ವಪ್ನಿಲ್ ಸಿಂಗ್12 ರನ್ ಗಳಿಸಿ ಔಟಾದರು.
ಬಿಗಿ ದಾಳಿ ನಡೆಸಿದ ಜಯದೇವ್ ಉನದ್ಕತ್ 3 ವಿಕೆಟ್ ಕಿತ್ತರು.ನಟರಾಜನ್ 2 ವಿಕೆಟ್ ಪಡೆದರೆ, ಮಾರ್ಕಂಡೆ ಮತ್ತು ಕಮ್ಮಿನ್ಸ್ ತಲಾ ಒಂದು ವಿಕೆಟ್ ಪಡೆದರು.
ಗುರಿ ಬೆನ್ನಟ್ಟಿದ ಹೈದರಾಬಾದ್ ಸ್ಪೋಟಕ ಆಟಗಾರ ಟ್ರಾವಿಸ್ ಹೆಡ್ ಅವರ ವಿಕೆಟ್ ಆರಂಭದಲ್ಲೇ ಕಳೆದುಕೊಂಡಿತು. 1 ರನ್ ಗಳಿಸಿ ಹೆಡ್ ಮರಳಿದರು. ಅಬ್ಬರಿಸಲು ಆರಂಭಿಸಿದ ಅಭಿಷೇಕ್ ಶರ್ಮ 31 ರನ್(13 ಎಸೆತ) ಗಳಿಸಿದ್ದ ವೇಳೆ ಔಟಾದರು.7 ರನ್ ಗಳಿಸಿದ್ದ ಮಾರ್ಕ್ರಾಮ್ ಅವರನ್ನು ಸ್ವಪ್ನಿಲ್ ಸಿಂಗ್ ಎಲ್ಬಿಡಬ್ಲ್ಯೂ ಬಲೆಗೆ ಬೀಳಿಸಿದರು. ನಿತೀಶ್ ರೆಡ್ಡಿ 13 ರನ್ ಗಳಿಸಿ ಔಟಾದರು. ಹೆನ್ರಿಚ್ ಕ್ಲಾಸೆನ್ 7, ನಾಯಕ ಪ್ಯಾಟ್ ಕಮ್ಮಿನ್ಸ್ 31(15 ಎಸೆತ) ಗಳಿಸಿ ಔಟಾದರು. ಭುವನೇಶ್ವರ್ ಕುಮಾರ್ 13 ರನ್ ಗಳಿಸಿ ನಿರ್ಗಮಿಸಿದರು. ಶಹಬಾಜ್ ಅಹಮದ್ ಔಟಾಗದೆ 40, ಉನದ್ಕತ್ 8 ರನ್ ಗಳಿಸಿದರು. 8 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಲಷ್ಟೇ ಶಕ್ತವಾಯಿತು.
ಕರ್ಣ್ ಶರ್ಮ, ಸ್ವಪ್ನಿಲ್ ಸಿಂಗ್, ಗ್ರೀನ್ ತಲಾ 2, ಯಶ್ ದಯಾಳ್ 1 ವಿಕೆಟ್ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್ ಪುನಾರಂಭ.. ಡಿ.28ಕ್ಕೆ ಕೂಟ ಶುರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.