EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
ಈ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಎರಡು ನಿರ್ದೇಶನಗಳನ್ನು ನೀಡಿದೆ
Team Udayavani, Apr 26, 2024, 1:12 PM IST
ನವದೆಹಲಿ: ಮತ ಎಣಿಕೆಯ ಸಂದರ್ಭದಲ್ಲಿ ಇವಿಎಂಗಳಲ್ಲಿನ ಮತ ಹಾಗೂ ವಿವಿಪ್ಯಾಟ್ ಗಳಲ್ಲಿನ ಮತಗಳನ್ನು ಶೇ.100ರಷ್ಟು ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ಶುಕ್ರವಾರ (ಏಪ್ರಿಲ್ 26) ವಜಾಗೊಳಿಸಿದೆ.
ಇದನ್ನೂ ಓದಿ:LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
ಈ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಎರಡು ನಿರ್ದೇಶನಗಳನ್ನು ನೀಡಿದೆ, ಮೊದಲನೆಯದು ಸಿಂಬಲ್(ಚಿಹ್ನೆ) ಲೋಡಿಂಗ್ ಯೂನಿಟ್ ಅನ್ನು ಸೀಲ್ ಮಾಡಬೇಕು ಮತ್ತು ಇವಿಎಂಗೆ ಚಿಹ್ನೆ ಲೋಡ್ ಮಾಡುವ ಪ್ರಕ್ರಿಯೆ ಪೂರ್ಣಗೊಂಡ ನಂತರ ಕನಿಷ್ಠ 45 ದಿನಗಳವರೆಗೆ ಸಂಗ್ರಹಿಸಿ ಇಟ್ಟಿರಬೇಕು ಎಂದು ಸೂಚಿಸಿದೆ.
ಸುಪ್ರೀಂಕೋರ್ಟ್ ನೀಡಿದ ಎರಡನೇ ನಿರ್ದೇಶನದ ಪ್ರಕಾರ, ಅಭ್ಯರ್ಥಿಗಳು ಫಲಿತಾಂಶವನ್ನು ಘೋಷಿಸಿದ ನಂತರ ಎಂಜಿನಿಯರ್ ಗಳ ತಂಡದಿಂದ ಇವಿಎಂಗಳ ಮೈಕ್ರೋಕಂಟ್ರೋಲರ್ ಪ್ರೋಗ್ರಾಂ ಅನ್ನು ಪರಿಶೀಲಿಸುವ ಆಯ್ಕೆ ಹೊಂದಿರುತ್ತಾರೆ. ಈ ಮನವಿಯನ್ನು ಅಭ್ಯರ್ಥಿಯು ಫಲಿತಾಂಶ ಘೋಷಿಸಿದ ಏಳು ದಿನದೊಳಗೆ ಮಾಡಬೇಕು ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಾಂಕರ್ ದತ್ತಾ ಅವರನ್ನೊಳಗೊಂಡ ಪೀಠ ಈ ತೀರ್ಪು ನೀಡಿದೆ.
ಏಪ್ರಿಲ್ 18ರಂದು ಇವಿಎಂ ಯಂತ್ರದಲ್ಲಿ ಬಿದ್ದ ಮತಗಳನ್ನು ಸಂಪೂರ್ಣವಾಗಿ ವಿವಿ ಪ್ಯಾಟ್ ಸ್ಲಿಪ್ ಗಳೊಂದಿಗೆ ಸಂಪೂರ್ಣವಾಗಿ ಪರಿಶೀಲನೆ ನಡೆಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿತ್ತು.
ಇವಿಎಂಗಳ ಪ್ರಯೋಜನಗಳನ್ನು ಪ್ರಶ್ನಿಸುವ ಮತ್ತು ಬ್ಯಾಲೆಟ್ ಪೇಪರ್ ಗೆ ಮರಳುವಂತೆ ಪ್ರತಿಪಾದಿಸುವವರ ಮನಸ್ಸನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ತಿಳಿಸಿರುವ ಸುಪ್ರೀಂಕೋರ್ಟ್, ಇವಿಎಂಗಳ ಕಾರ್ಯನಿರ್ವಹಣೆ ಮತ್ತು ಮೈಕ್ರೋ ಕಂಟ್ರೋಲರ್ ಕುರಿತು ಚುನಾವಣಾ ಆಯೋಗ ನೀಡಿದ ಉತ್ತರವನ್ನು ಪೀಠ ಪರಿಗಣಿಸಿರುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್ ಬುಲ್ ಶ್ವಾನದ ಕಿತ್ತ ಕಿವಿ ಜೋಡಣೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ
Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್ ಆರೋಪ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.