Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Team Udayavani, Apr 26, 2024, 3:54 PM IST
ಮಂಗಳೂರು: ಸಂಪರ್ಕ ಸೇತುವೆ ಇಲ್ಲದೆ ಪರದಾಡುತ್ತಿರುವ ದ್ವೀಪ ನಿವಾಸಿಗಳು ಇಂದು ನಡೆದ ಲೋಕ ಸಭಾ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲು ಬೋಟ್ ಮೂಲಕ ಬಂದಿದ್ದಾರೆ.
ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾವೂರು ಉಳಿಯ ದ್ವೀಪದ ಜನರು ಹಲವು ವರ್ಷಗಳಿಂದ ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕವೇ ನಗರ ಪ್ರದೇಶಕ್ಕೆ ಬರಬೇಕಾದ ಸ್ಥಿತಿ ಇಲ್ಲಿಯ ಜನರದ್ದು ಆದರೆ ಇಂದು ಅದನ್ನೆಲ್ಲಾ ಮರೆತು ಬೋಟ್ ಮೂಲಕ ನದಿ ದಾಟಿ ಬಂದು ಮತದಾನ ಮಾಡಿ ತಮ್ಮ ಕರ್ತವ್ಯ ಮೆರೆದಿದ್ದಾರೆ.
ದ್ವೀಪದ ಸುತ್ತ ಹರಿಯುತ್ತಿರುವ ನೇತ್ರಾವತಿ ನದಿ ಸಂಪರ್ಕ ಸೇತುವೆಯಿಲ್ಲದೆ ಹಲವು ವರ್ಷಗಳಿಂದ ಇಲ್ಲಿನ ಜನ ಪರದಾಡುತ್ತಿದ್ದಾರೆ, ಸಂಪರ್ಕ ಸೇತುವೆಗಾಗಿ ಜನಪ್ರತಿನಿಧಿಗಳಿಗೆ ಸಾಕಷ್ಟು ಮನವಿ ಮಾಡಿದ್ರು ಇದುವರೆಗೂ ಬೇಡಿಕೆ ಈಡೇರಿಲ್ಲ. ಪಾವೂರು ಉಳಿಯ ದ್ವೀಪ ಪ್ರದೇಶದಲ್ಲಿ 50 ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು 150 ಕ್ಕೂ ಹೆಚ್ಚು ಮತದಾರರನ್ನು ಹೊಂದಿದ್ದಾರೆ.
ಬೋಟ್ ಮೂಲಕ ಬಂದು ಮತ ಚಲಾಯಿಸಿದ ಹಿರಿಯರು, ಮಹಿಳೆಯರು, ಯುವತಿ-ಯುವಕರು. ಈ ಬಾರಿಯಾದರೂ ತೂಗು ಸೇತುವೆ ನಿರ್ಮಾಣವಾಗುವ ಭರವಸೆ ವ್ಯಕ್ತಪಡಿಸಿದ ದ್ವೀಪ ನಿವಾಸಿಗಳು.
ಇದನ್ನೂ ಓದಿ: INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ
Mangaluru: ಗುಂಡಿ ಬಿದ್ದ ರಸ್ತೆಗಳಿಗೆ ಜಲ್ಲಿಕಲ್ಲೇ ಆಧಾರ; ಅಪಾಯದಲ್ಲಿ ಸವಾರರು
Jokatte: ಸಂಪೂರ್ಣ ಹದೆಗೆಟ್ಟ ಕೂಳೂರು, ಕೈಗಾರಿಕೆ ವಲಯದ-ಜೋಕಟ್ಟೆ ರಸ್ತೆ
Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು
Mangaluru: ಪ್ಲಾಸ್ಟಿಕ್ ಬ್ರಹ್ಮರಾಕ್ಷಸನ ತಡೆವ ಮಂತ್ರದಂಡ ಬೇಕಿದೆ !
MUST WATCH
ಹೊಸ ಸೇರ್ಪಡೆ
INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್
Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ
UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು
Manipal ಪರಿಸರದ 15-20 ಪಕ್ಷಿ ಪ್ರಭೇದ ಕಣ್ಮರೆ; ಇ ಬರ್ಡ್ ಪೋರ್ಟಲ್ನಲ್ಲಿ ದಾಖಲಾತಿ
Shirva: ಹುಲಿ ವೇಷ ಹಾಕಿ ಅನಾರೋಗ್ಯಪೀಡಿತ ಬಾಲಕನಿಗೆ ನೆರವು ನೀಡಿದ ಪೋರರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.