Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Team Udayavani, Apr 26, 2024, 11:56 PM IST
ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆಯನ್ನು ರಾಜ್ಯ ಸರಕಾರ ಹಗುರವಾಗಿ ಪರಿಗಣಿಸಿದ್ದು, ಮೊದಲ ದಿನವೇ ತನಿಖೆ ಹಾದಿ ತಪ್ಪಿದೆ. ಕುಟುಂಬದವರಿಗೆ ನ್ಯಾಯ ಸಿಗಬೇಕಾದರೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ನೇಹಾಳ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿ ಪಾಲಕರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ದೊಡ್ಡ ದುರ್ಘಟನೆ ನಡೆದರೂ ಪೊಲೀಸರು ಹಂತಕನನ್ನು ತಮ್ಮ ವಶಕ್ಕೆ ಕೇಳದೆ ಮೊದಲ ದಿನದಿಂದಲೇ ನ್ಯಾಯಾಂಗ ವಶಕ್ಕೆ ಒಪ್ಪಿಸಿದರು. ಮೊದಲ ದಿನವೇ ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸುವಲ್ಲಿ ವಿಫಲರಾದರು. ಈ ಪ್ರಕರಣದ ತನಿಖೆ ಮೊದಲ ದಿನದಿಂದಲೇ ದಾರಿ ತಪ್ಪಿದೆ. ಆದ್ದರಿಂದ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.
ಘಟನೆ ಬಗ್ಗೆ ರಾಜ್ಯ ಸರಕಾರ ನಡೆದುಕೊಂಡ ರೀತಿ ಪ್ರಕರಣದ ದಾರಿ ತಪ್ಪಿಸುವಂತದ್ದಾಗಿದೆ. ಇಂದಿಗೂ ಮೃತಳ ತಂದೆ-ತಾಯಿ ಇದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಅದೆಲ್ಲದರ ಸಮಗ್ರ ತನಿಖೆ ಆಗಬೇಕಾದರೆ ಈ ಪ್ರಕರಣ ಸಿಬಿಐಗೆ ವಹಿಸಬೇಕೆಂದು ಹೇಳುತ್ತಿದ್ದಾರೆ. ಆದರೆ ರಾಜ್ಯ ಸರಕಾರ ಸಿಐಡಿಗೆ ಕೊಟ್ಟು ಕೈತೊಳೆದುಕೊಳ್ಳುವ ಕೆಲಸ ಮಾಡಿದೆ. ಸರಕಾರ ಅಪರಾಧಿಗಳನ್ನು ರಕ್ಷಿಸುತ್ತಿಲ್ಲ ಎಂದಾದರೆ ಯಾರಿಗೂ ಭಯಪಡದೆ ಇದನ್ನು ಸಿಬಿಐಗೆ ವಹಿಸಬೇಕು ಎಂದರು.
ಯುವತಿ ಹಾಡಹಗಲೇ ಕಾಲೇಜ್ ಕ್ಯಾಂಪಸ್ನಲ್ಲಿ ಕೊಲೆಯಾದರೂ ವಿಪಕ್ಷಗಳು ಸುಮ್ಮನೆ ಕುಳಿತು ಕೊಳ್ಳಬೇಕೆಂದು ಮುಖ್ಯಮಂತ್ರಿ ಭಾವಿಸುತ್ತಿದ್ದಾರೋ? ಈ ಘಟನೆಯಿಂದ ಇಡೀ ರಾಜ್ಯದ ಜನತೆ ಹೌಹಾರಿದ್ದಾರೆ, ಆತಂಕಗೊಂಡಿದ್ದಾರೆ. ಇದನ್ನು ಖಂಡಿಸಿ ಬಿಜೆಪಿ ಮಾತ್ರವಲ್ಲ ಮಠಾಧೀಶರು, ವಿದ್ಯಾರ್ಥಿಗಳು, ವಿವಿಧ ಸಂಘ-ಸಂಸ್ಥೆಗಳು, ಸಂಘಟನೆಯವರು ಪ್ರತಿರೋಧ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರೆಲ್ಲರೂ ರಾಜಕೀಯ ಮಾಡುತ್ತಿದ್ದಾರೆಯೇ? ನಿಮ್ಮ ಹೇಳಿಕೆಗಳಿಂದಲೇ ರಾಜಕೀಯ ಲೇಪ ಬಂದಿದೆ. ಅದನ್ನು ಅರ್ಥ ಮಾಡಿಕೊಳ್ಳಬೇಕು. ಈಗಲೂ ಕಾಲ ಮಿಂಚಿಲ್ಲ. ಪ್ರಕರಣವನ್ನು ಸಿಬಿಐಗೆ ವಹಿಸಿದರೆ ನ್ಯಾಯ ಸಿಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr G Parameshwar: ಸೆನ್ ಠಾಣೆಗಳಿಗೂ ಎಸ್ಪಿ ಕೇಡರ್: ಗೃಹ ಸಚಿವ
Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು
Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್-ಯುವಕನಿಗೆ ಮರುಜನ್ಮ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ
Puttur: ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ
Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್ ಧ್ವನಿ; ಹೀರೋ ಮೇಲೆ ಆರೋಪ
JDS: ಎಡಿಜಿಪಿ ವಿರುದ್ಧ ಜೆಡಿಎಸ್ ಪ್ರತಿಭಟನೆ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.