Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Team Udayavani, Apr 27, 2024, 1:16 AM IST
ಉಡುಪಿ: ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಎರಡೂ ಪಕ್ಷದ ಅಭ್ಯರ್ಥಿಗಳು ಶುಕ್ರವಾರ ಬೆಳಗ್ಗೆ ಮತದಾನ ಮಾಡಿ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಚರಿಸಿ, ಮತಯಾಚನೆಯ ಕಸರತ್ತು ನಡೆಸಿದರು.
ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಕೊರ್ಗಿ ಶಾಲೆಯಲ್ಲಿ ಬೆಳಗ್ಗೆ 7 ಕ್ಕೆ ಮತ ಚಲಾಯಿಸಿ, ಕುಂದಾಪುರ, ಬಾರಕೂರು, ಉಡುಪಿ, ಪರ್ಕಳ, ಪೆರ್ಡೂರು, ಕಾಪು, ಕಾರ್ಕಳ ಸೇರಿದಂತೆ ಜಿಲ್ಲೆಯ 4 ವಿಧಾನಸಭಾ ವ್ಯಾಪ್ತಿಯಲ್ಲಿ ಸಂಚರಿಸಿದರು. ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿದರು.
ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಕೋಟತಟ್ಟು ಗ್ರಾ.ಪಂ. ಮತಗಟ್ಟೆ ಯಲ್ಲಿ ಮತದಾನ ಮಾಡಿ ವಿವಿಧೆಡೆ ಭೇಟಿ ನೀಡಿದರು. ಗಿಳಿಯಾರು ಮತಗಟ್ಟೆ ಬಳಿ ಕಾರ್ಯ ಕರ್ತರೊಂದಿಗೆ ಕುಳಿತು ಮತ ಯಾಚಿಸಿದರು.
ಸಂಸದನಾಗಿ ನಾನು ಮಾಡಿದ ಅಭಿವೃದ್ಧಿ ಕಾರ್ಯ ಹಾಗೂ ರಾಜ್ಯ ಸರಕಾರದ ಗ್ಯಾರಂಟಿ
ಯೋಜನೆಗಳು ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿ ಪರಿಕಲ್ಪನೆಯಡಿ ಮತ ಯಾಚಿಸಿದ್ದೆ. ಮತದಾರರು ಮತ ಚಲಾಯಿಸಿದ್ದು, ನಿಶ್ಚಿತವಾ ಗಿಯೂ ಗೆಲುವು ದಕ್ಕಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದವರು ಕೆ. ಜಯಪ್ರಕಾಶ್ ಹೆಗ್ಡೆ.
ಕೇಂದ್ರ ಸರಕಾರ 10 ವರ್ಷದಲ್ಲಿ ಕೈಗೊಂಡಿ ರುವ ಅಭಿವೃದ್ಧಿ ಕಾರ್ಯ, ದೇಶದ ಭದ್ರತೆ, ಸುರಕ್ಷತೆಯ ಜತೆಗೆ ವಿಕಸಿತ ಭಾರತದ ನಿರ್ಮಾಣ ಸಂಕಲ್ಪದ ಪ್ರಧಾನಿ ನರೇಂದ್ರ ಮೋದಿ ಯವರ ನಾಯಕತ್ವದ ಜತೆ ಅಭಿವೃದ್ಧಿ ವಿಷಯಗಳನ್ನೇ ಮುಂದಿಟ್ಟುಕೊಂಡು ಮತ ಕೇಳಲಾಗಿದೆ. ಖಂಡಿತವಾಗಿ ಜಯ ಸಿಗಲಿದೆ ಎಂದುವರು ಕೋಟ ಶ್ರೀನಿವಾಸ ಪೂಜಾರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ
Udupi: ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ
Social Media Fake Account: ಸಂಸದ ಕೋಟ ಶ್ರೀನಿವಾಸ ಪೂಜಾರಿ ಖಾತೆ ನಕಲಿ: ದೂರು
Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ
Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.