Airbus; 30 ಏರ್ಬಸ್ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ
Team Udayavani, Apr 27, 2024, 1:51 AM IST
ಹೊಸದಿಲ್ಲಿ: ದೇಶದ ಅತೀದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ ತನ್ನ ಅಂತಾರಾಷ್ಟ್ರೀಯ ಕಾರ್ಯಾ ಚರಣೆಗಳನ್ನು ಹೆಚ್ಚಿಸುವುದಕ್ಕಾಗಿ ಏರ್ಬಸ್ ಎ-350-900ನ 30 ವಿಮಾನಗಳನ್ನು ಖರೀದಿಸಲು ಮುಂದಾಗಿದೆ. ಈ ಕುರಿತಂತೆ ಇಂಡಿಗೋ ಸಂಸ್ಥೆ ಮಾಹಿತಿ ನೀಡಿದ್ದು, ದೇಶದ ವಿವಿಧ ಭಾಗಗಳಿಂದ ಜಗತ್ತಿನ ವಿವಿಧ ಸ್ಥಳಗಳಿಗೆ ತಲುಪುವ ನಿಟ್ಟಿನಲ್ಲಿ ನಾವು ಮತ್ತೂಂದು ಹೆಜ್ಜೆ ಮುಂದಿಟ್ಟಿದ್ದು, ವಿಶಾಲವಾದ ಹಾಗೂ ಪ್ರಯಾಣಿಕರಿಗೆ ಅತ್ಯುತ್ತಮ ಪ್ರಯಾಣ ಅನುಭವ ನೀಡಲಿರುವ ಏರ್ಬಸ್ ಎ-350-900 ವಿಮಾನಗಳನ್ನು ಖರೀದಿಸಲು ಒಪ್ಪಂದ ಮಾಡಿಕೊಂಡಿದ್ದೇವೆ ಎಂದಿದೆ. ಕಳೆದ ವರ್ಷ ಒಂದೇ ಬಾರಿಗೆ 350 ವಿಮಾನಗಳ ಖರೀದಿಗೆ ಮುಂದಾಗಿ ಸುದ್ದಿಯಾಗಿತ್ತು.
ಗೋ ಫಸ್ಟ್ ಏರ್ಲೈನ್ಸ್ನ 54 ವಿಮಾನ ನೋಂದಣಿ ರದ್ದುಗೊಳಿಸಿ: ಹೈಕೋರ್ಟ್
ಮುಂದಿನ 5 ದಿನಗಳಲ್ಲಿ ಗೋ ಫಸ್ಟ್ ಏರ್ಲೈನ್ಸ್ ಗುತ್ತಿಗೆ ಪಡೆದಿರುವ ವಿಮಾನಗಳ ನೋಂದಣಿ ರದ್ದು ಮಾಡಲು ನಾಗರಿಕ ವಿಮಾನ ಯಾನ ಮಹಾ ನಿರ್ದೇಶನಾಲಯಕ್ಕೆ ದಿಲ್ಲಿ ಹೈಕೋರ್ಟ್ ಶುಕ್ರವಾರ ಸೂಚನೆ ನೀಡಿದೆ. ಇದು ಆರ್ಥಿಕವಾಗಿ ದಿವಾಳಿ ಎಂದು ಕಳೆದ ವರ್ಷವಷ್ಟೇ ಘೋಷಿ ಸಿ ಕೊಂಡಿ ರುವ ಗೋ ಫಸ್ಟ್ ಏರ್ಲೈನ್ಸ್ಗೆ ಆಗಿ ರುವ ಪ್ರಮುಖ ಹಿನ್ನಡೆ. ಪ್ರಕರಣದ ವಿಚಾರಣೆ ನಡೆಸಿದ ದಿಲ್ಲಿ ಹೈಕೋರ್ಟ್, ಗೋ ಫಸ್ಟ್ ಸಂಸ್ಥೆಯ ಎಲ್ಲ 54 ವಿಮಾನಗಳ ನೋಂದಣಿ ರದ್ದುಗೊಳಿಸಲು ಸೂಚಿಸಿದೆ. ಜತೆಗೆ ಈ ವಿಮಾನಗಳ ಕಾರ್ಯಾ ಚರಣೆ ನಡೆಸದಂತೆ ಸೂಚಿಸಿದೆ. ವಿವಿಧ ಏವಿಯೇಶನ್ ಕಂಪೆನಿಗಳು ತಮ್ಮ ವಿಮಾನಗಳನ್ನು ಗೋ ಫಸ್ಟ್ ಏರ್ಲೈನ್ಸ್ನಿಂದ ಹಿಂಪಡೆಯಲು ಅನುಮತಿ ನೀಡುವಂತೆ 2023ರಲ್ಲಿ ದಿಲ್ಲಿ ಹೈಕೋರ್ಟ್ ಮೊರೆ ಹೋಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.