PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ


Team Udayavani, Apr 27, 2024, 11:47 PM IST

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಹತ್ತು ವರ್ಷದಲ್ಲಿ ಮಾರುಕಟ್ಟೆಯಲ್ಲಿ ಸುಳ್ಳು ಮಾರಿಕೊಂಡು ಹೊರಟಿದ್ದಾರೆ. ಅವರನ್ನು ನಂಬಿ ಜನ ಮತ ಹಾಕಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನವರು ಹಿಂದುಳಿದವರ ಮೀಸಲಾತಿ ಕಿತ್ತುಕೊಂಡು ಮುಸ್ಲಿಮರಿಗೆ ಕೊಡುತ್ತಾರೆ ಎನ್ನುವ ಮೋದಿ ಹೇಳಿಕೆ ರಾಜಕೀಯ ಪ್ರೇರಿತವಾಗಿದೆ. ಮಹಿಳೆಯರ ಮಾಂಗಲ್ಯದ ಬಗ್ಗೆಯೂ ನೀಡಿದ ಅವರ ಹೇಳಿಕೆ ಹತಾಶೆಯಿಂದ ಕೂಡಿದೆ. ಅವರ ಹೇಳಿಕೆಗಳ ವಿರುದ್ಧ ಕಾಂಗ್ರೆಸ್‌ ವತಿಯಿಂದ ಚುನಾವಣೆ ಆಯೋಗಕ್ಕೆ ದೂರು ದಾಖಲಿಸಲಾಗುವುದು ಎಂದು ಹೇಳಿದರು.

ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರಿಗೆ ನೀಡುವ ಮೀಸಲಾತಿಯನ್ನು ಯಾವ ಕಾರಣಕ್ಕೆ ಬಿಜೆಪಿ ಬೆಂಬಲಿಸಿಲ್ಲ. ಅಡ್ವಾಣಿ ಮೀಸಲಾತಿ ವಿರುದ್ಧ ರಥಯಾತ್ರೆ ಕೈಗೊಂಡಿದ್ದರು. ಬಿಜೆಪಿ ಸಂಸದ ರಾಮಾಜೋಯಿಸ್‌ ಮಹಿಳೆಯರಿಗೆ ಹಾಗೂ ಹಿಂದುಳಿದ ವರ್ಗಗಳಿಗೆ ನೀಡುವ ಮೀಸಲಾತಿ ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಮೀಸಲಾತಿ ನೀಡಿದ್ದನ್ನು ಸುಪ್ರಿಂಕೋರ್ಟ್‌ ಎತ್ತಿ ಹಿಡಿದಿತ್ತು ಎಂದು ನೆನಪಿಸಿಕೊಂಡರು. ಸಂವಿಧಾನದ ಆರ್ಟಿಕಲ್‌ 15 ಹಾಗೂ 16ಎ ಪ್ರಕಾರ ಎಲ್ಲರೂ ಸಮಾನರು. ಆದರೆ ಆರ್ಟಿಕಲ್‌ 14ರ ಪ್ರಕಾರ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಬಹುದು.

ಮಂಡಲ್‌ ಆಯೋಗದ ವರದಿಯಲ್ಲಿ ಇದನ್ನೇ ಹೇಳಲಾಗಿದೆ. ಹಿಂದುಳಿದ ವರ್ಗಗಳ ಆಯೋಗ ಇರಬೇಕು ಎಂದು ಹೇಳಿದೆ. ಆದರೆ ವರದಿ ವಿರುದ್ಧ ಬಿಜೆಪಿ ವಿದ್ಯಾರ್ಥಿಗಳನ್ನು ಪ್ರಚೋದಿಸಿತ್ತು. ಮೀಸಲಾತಿ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಕೂಡಾ ಒಪ್ಪಿಕೊಂಡಿದ್ದು ಅದು ಶೇ. 50 ಮೀರಬಾರದು ಎಂದು ನಿಗದಿಪಡಿಸಿದೆ. ಆದರೆ, ಮೋದಿ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶೇ. 10 ಮೀಸಲಾತಿ ಕೊಟ್ಟಿದೆ. ಜೊತೆಗೆ ಬೊಮ್ಮಾಯಿ ಸರಕಾರ ಅಧಿ ಕಾರದಲ್ಲಿದ್ದಾಗ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲಾಗಿದೆ ಎನ್ನುವ ಕಾರಣ ನೀಡಿ, ಮುಸಲ್ಮಾನರಿಗೆ ಕೊಟ್ಟಿದ್ದ ಮೀಸಲಾತಿಯನ್ನು ರದ್ದುಗೊಳಿಸಿದೆ. ಈ ಕುರಿತು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ ಎಂದು ಹೇಳಿದರು.

1974-75ರಲ್ಲಿ ನಡೆದ ಸಂವಿಧಾನದ ತಿದ್ದುಪಡಿ ಮೂಲಕ ಜಿಪಂ ಹಾಗೂ ತಾಪಂಗಳಲ್ಲಿ ಮಹಿಳೆಯರು ಹಾಗೂ ಹಿಂದುಳಿದವರಿಗೆ ಮೀಸಲಾತಿ ನೀಡಲಾಗಿತ್ತು. ನರಸಿಂಹ ರಾವ್‌ ಪ್ರಧಾನಿ ಆಗಿದ್ದಾಗ ರಾಜ್ಯದಲ್ಲಿ ಬಿಸಿ(ಎ) ಹಾಗೂ ಬಿಸಿ(ಬಿ) ಮೀಸಲಾತಿ ತರಲಾಯಿತು. ಹಾಗೆ ಮಹಿಳೆಯರಿಗೆ ಶೇ.33 ಮೀಸಲಾತಿ ತರಲಾಯಿತು. ಹಿಂದುಳಿದವರಿಗೆ ಶೇ.33 ಮೀಸಲಾತಿ, ಬಿಸಿ (ಎ)ಗೆ ಶೇ. 26.4 ಹಾಗೂ ಬಿಸಿ (ಬಿ)ಗೆ ಶೇ. 6.6 ಮೀಸಲಾತಿ ನೀಡಲಾಗಿತ್ತು. ಆಗಿನಿಂದ ಈಗಿನವರೆಗೂ ಮುಸಲ್ಮಾನರು ಬಿಸಿ(ಎ)ನಲ್ಲಿ ಇದ್ದಾರೆ ಎಂದು ವಿವರಿಸಿದರು.

1994ರಲ್ಲಿ ಸಲ್ಲಿಕೆಯಾದ ಚಿನ್ನಪ್ಪರೆಡ್ಡಿ ವರದಿಯಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿ ನೀಡುವಂತೆ ಶಿಫಾರಸು ಮಾಡಲಾಗಿತ್ತು. ಆಗ ವೀರಪ್ಪ ಮೊಯ್ಲಿ ಸಿಎಂ ಆಗಿದ್ದರು. ಆದರೆ ಅದು ದೇವೇಗೌಡರು ಸಿಎಂ ಆಗಿದ್ದಾಗ ಜಾರಿಯಾಗಿದೆ ಎಂದು ಹೇಳಿದರು.

ಡಿಕೆಶಿ ಜತೆ ಭಿನ್ನಮತವಿಲ್ಲ
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹಾಗೂ ಸಿಎಂ ಮಧ್ಯೆ ಶೀತಲ ಸಮರ ನಡೆದಿದೆ ಎನ್ನುವ ಅಸ್ಸಾಂ ಸಿಎಂ ಹಿಮಂತ್‌ ಬಿಸ್ವಾ ಶರ್ಮ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅಸ್ಸಾಂ ಸಿಎಂಗೆ ಇಲ್ಲಿನ ವಿಚಾರ ಗೊತ್ತಿಲ್ಲ. ತಮ್ಮ ಹಾಗೂ ಡಿ.ಕೆ. ಶಿವಕುಮಾರ ಮಧ್ಯೆ ಯಾವುದೇ ಶೀತಲ ಸಮರವಿಲ್ಲ ಎಂದು ಸ್ಪಷ್ಟಪಡಿಸಿದರು. ನಾವೆಲ್ಲ ಒಗ್ಗಟ್ಟಾಗಿದ್ದೇವೆ. ನಮ್ಮ ಸರಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿವೆ. ಅವರು ಬುದ್ಧಿವಂತರಿದ್ದು, ನಮಗೆ ಆಶೀರ್ವಾದ ಮಾಡಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದರು.

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.