Chess; ಭಾರತದಲ್ಲೇ ವಿಶ್ವ ಚಾಂಪಿಯನ್ಶಿಪ್ ನಡೆಸಲು ಚಿಂತನೆ
Team Udayavani, Apr 29, 2024, 12:47 AM IST
ಚೆನ್ನೈ: ಫಿಡೆ ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿ ಗೆದ್ದು ವಿಶ್ವಚಾಂಪಿಯನ್ ಫೈನಲ್ಗೆ ಡಿ. ಗುಕೇಶ್ ಆಯ್ಕೆಯಾಗಿರುವ ಬೆನ್ನಲ್ಲೇ ಹೊಸ ಲೆಕ್ಕಾಚಾರಗಳು ಶುರುವಾಗಿವೆ. ಕೂಟವನ್ನು ಭಾರತದಲ್ಲೇ ನಡೆಸಲು ಭಾರತೀಯ ಚೆಸ್ ಚಿಂತನೆ ನಡೆಸಿದೆ ಎಂದು ಮೂಲಗಳು ಹೇಳಿವೆ.
ಈ ಬಗ್ಗೆ ಮಾತನಾಡಿರುವ ಭಾರತೀಯ ಚೆಸ್ ಆಡಳಿತ ಮಂಡಳಿಯ (ಎಐಸಿಎಫ್) ಕಾರ್ಯದರ್ಶಿ ದೇವ್ ಪಟೇಲ್, ಇದರ ಕುರಿತು ವಿಶ್ವ ಚೆಸ್ ಆಡಳಿತ ಮಂಡಳಿ (ಫಿಡೆ) ಜತೆಗೆ ಚರ್ಚೆಗೆ ನಾವು ಸಿದ್ಧರಿದ್ದೇವೆ. ಭಾರತದಲ್ಲೇ ವಿಶ್ವ ಚಾಂಪಿಯನ್ಶಿಪ್ ನಡೆದರೆ ಉತ್ತಮ ಎಂದಿದ್ದಾರೆ.
ವಿಶ್ವ ಚೆಸ್ ಚಾಂಪಿಯನ್ಶಿಪ್ಗೆ ಫಿಡೆ ಇನ್ನೂ ದಿನಾಂಕ, ತಾಣವನ್ನು ಘೋಷಿಸಿಲ್ಲ. ಈ ವರ್ಷ ನವೆಂಬರ್ ಅಥವಾ ಡಿಸೆಂಬರ್ನಲ್ಲಿ ಟೂರ್ನಿ ನಡೆಯುವ ನಿರೀಕ್ಷೆಯಿದೆ. ಟೂರ್ನಿ ಆಯೋಜಿಸಲು ಆಸಕ್ತರು ಬಿಡ್ಡಿಂಗ್ ಸಲ್ಲಿಸಲು, ಮೇ 31ರಂದು ಕಡೇ ದಿನವಾಗಿರಲಿದೆ.
70 ಕೋಟಿ ರೂ. ವೆಚ್ಚ
ವಿಶ್ವ ಚೆಸ್ ಚಾಂಪಿಯನ್ಶಿಪ್ 25 ದಿನ ನಡೆಯುವ ಟೂರ್ನಿ. ಇದಕ್ಕೆ 70 ಕೋ.ರೂ. ನಷ್ಟು ವೆಚ್ಚ ತಗಲುತ್ತದೆ. ಇದರಲ್ಲಿ 9 ಕೋಟಿ ರೂ.ನಷ್ಟು ಹಣ ಫಿಡೆ ನೀಡುತ್ತದೆ. ಪ್ರಸ್ತುತ ವಿಶ್ವ ಚಾಂಪಿಯನ್ಶಿಪ್ ಫೈನಲ್ನಲ್ಲಿ ಗುಕೇಶ್, ಹಾಲಿ ವಿಶ್ವ ಚಾಂಪಿಯನ್ ಚೀನದ ಡಿಂಗ್ ಲಿರೆನ್ ಅವರನ್ನು ಎದುರಿಸಲಿದ್ದಾರೆ.
ಗುಕೇಶ್ಗೆ 75 ಲಕ್ಷ ರೂ.
ಕ್ಯಾಂಡಿಡೇಟ್ಸ್ ಗೆದ್ದು 78 ಲಕ್ಷ ರೂ. ಪಡೆದಿರುವ ಡಿ. ಗುಕೇಶ್ಗೆ ರವಿವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ 75 ಲಕ್ಷ ರೂ. ಚೆಕ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್: ದ.ಆಫ್ರಿಕಾಗೆ 177 ರನ್ ಅಂತರದ ಸೋಲು
147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್ ಗೆ ಆಲೌಟ್
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.