Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Team Udayavani, Apr 29, 2024, 2:34 PM IST
ಹುಬ್ಬಳ್ಳಿ: ಮಾಜಿ ಸಚಿವ ದಿವಂಗತ ಅನಂತಕುಮಾರ ಅವರ ಸ್ಥಾನವನ್ನು ಪ್ರಹ್ಲಾದ್ ಜೋಶಿ ತುಂಬಲಿದ್ದಾರೆ ಎನ್ನುವ ನಿರೀಕ್ಷೆಯಿತ್ತು. ಇವರಿಂದ ರಾಜ್ಯಕ್ಕೆ ಮತ್ತು ಕ್ಷೇತ್ರಕ್ಕೆ ಯಾವುದೇ ಅನುಕೂಲವಾಗಿಲ್ಲ. ರಾಜಕಾರಣಕ್ಕಾಗಿ ರಾಜ್ಯವನ್ನು ಬಳಕೆ ಮಾಡಿಕೊಂಡಿರುವುದು ಇವರ ಬಹುದೊಡ್ಡ ಸಾಧನೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಲೇವಡಿ ಮಾಡಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಂತಕುಮಾರ್ ಅವರು ರಾಜ್ಯದ ವಿಚಾರ ಬಂದಾಗ ಕೇಂದ್ರದಲ್ಲಿ ರಾಜ್ಯದ ಪರವಾಗಿ ಒಂದಿಷ್ಟು ಕೆಲಸ ಮಾಡುತ್ತಿದ್ದರು. ಅವರ ನಂತರ ಪ್ರಹ್ಲಾದ ಜೋಷಿ ಅವರು ಸ್ಥಾನವನ್ನು ತುಂಬಲಿದ್ದಾರೆ ಎನ್ನುವ ನಿರೀಕ್ಷೆ ರಾಜ್ಯದ ಜನತೆಯಲ್ಲಿತ್ತು. ಆದರೆ ತಮ್ಮ ರಾಜಕಾರಣಕ್ಕಾಗಿ ರಾಜ್ಯವನ್ನು ಬಳಕೆ ಮಾಡಿಕೊಂಡಿರುವುದು ಇವರ ಬಹುದೊಡ್ಡ ಸಾಧನೆ ಎಂದರು. ಕಾಂಗ್ರೆಸ್ ಪಕ್ಷದಿಂದ ಸಜ್ಜನ ಹಾಗೂ ವಿದ್ಯಾವಂತ ಅಭ್ಯರ್ಥಿ ವಿನೋದ ಅಸೂಟಿ ಅವರನ್ನು ಕಣಕ್ಕಿಳಿಸಿದ್ದೇವೆ ಎಂದರು.
ಸಿಬಿಐ ಈಡಿ ಐಟಿ ಇವುಗಳ ಮೂಲಕ ವಿರೋಧ ಪಕ್ಷಗಳ ನಾಯಕರನ್ನು ಮುಗಿಸುವುದು ಮೋದಿಯ ಕೆಲಸ. ಇಂಡಿಯಾ ಒಕ್ಕೂಟದಲ್ಲಿದ್ದ ಇಬ್ಬರು ಮುಖ್ಯಮಂತ್ರಿಗಳನ್ನು ಜೈಲಿಗೆ ಹಾಕಿಸಿದ್ದಾರೆ. ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಶಿಕ್ಷಣ ಪ್ರಮಾಣ ಕುಸಿದಿದೆ. 2013 ರಲ್ಲಿ ಶೇ.4.9 ರಷ್ಟಿದ್ದ ನಿರುದ್ಯೋಗ ಪ್ರಮಾಣ ಈಗ ಶೇ.8 ಕ್ಕೆ ತಲುಪಿದೆ. ಹಿಂದಿನ ಎಲ್ಲಾ ಪ್ರಧಾನಿಗಳು ಮಾಡಿದ ಸಾಲದ ಅರ್ಧದಷ್ಟು ಸಾಲವನ್ನು ನರೇಂದ್ರ ಮೋದಿ ಮಾಡಿದ್ದಾರೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubbali: ಅಪಾರ್ಟ್ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು
Dr G Parameshwar: ಸೆನ್ ಠಾಣೆಗಳಿಗೂ ಎಸ್ಪಿ ಕೇಡರ್: ಗೃಹ ಸಚಿವ
Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.