Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ


Team Udayavani, Apr 29, 2024, 3:57 PM IST

11

ಚಿಕ್ಕಬಳ್ಳಾಪುರ: ಜಿಲ್ಲೆಯ ರಾಜಕೀಯ ಪಕ್ಷಗಳ ನಡವೆ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಲೋಕಸಭಾ ಚುನಾವಣೆ ಫ‌ಲಿತಾಂಶ ಪ್ರಕಟಕ್ಕೆ ಇನ್ನೂ 35 ದಿನ ಕಾಯಬೇಕಿದ್ದು, ಕ್ಷೇತ್ರದ್ಯಾಂತ ಸುಗಮವಾಗಿ ಮತಬೇಟೆ-ಮತದಾನ ಮುಗಿದ ಬೆನ್ನಲ್ಲೇ ಅಭ್ಯರ್ಥಿಗಳ ಸೋಲು ಗೆಲುವಿನ ಲೆಕ್ಕಾಚಾರ ತಾರಕಕ್ಕೇರಿದೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಶುಕ್ರವಾರ ನಡೆದ ಮತದಾನದಲ್ಲಿ ಕ್ಷೇತ್ರದ್ಯಾಂತ ಒಟ್ಟಾರೆ ಶೇ.76.98 ರಷ್ಟು ಮತದಾನ ಆಗಿರುವುದು ಸಾಕಷ್ಟು ಕುತೂಹಲ ಹಾಗೂ ಚರ್ಚೆಗೆ ಗ್ರಾಸವಾಗಿದ್ದು, ಈ ಬಾರಿ ಹೆಚ್ಚಿನ ಮತದಾನ ಆಗಿರುವುದು ಯಾರಿಗೆ ಲಾಭ? ಯಾರಿಗೆ ನಷ್ಟ ಎನ್ನುವ ಲೆಕ್ಕಾಚಾರ ಕ್ಷೇತ್ರದಲ್ಲಿ ಸದ್ದಿಲ್ಲದೇ ನಡೆಯುತ್ತಿದೆ.

ಜೂನ್‌ 4ಕ್ಕೆ ಫ‌ಲಿತಾಂಶ: ಲೋಕಸಭಾ ಚುನಾವಣಾ ಕಣದಲ್ಲಿರುವ ಬರೋಬ್ಬರಿ 28ಮಂದಿ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಜೂನ್‌ 4 ರಂದು ಹೊರ ಬೀಳಲಿದೆ. ಫ‌ಲಿತಾಂಶ ಪ್ರಕಟಕ್ಕೆ ಇನ್ನೂ ರಾಜಕೀಯ ಪಕ್ಷಗಳು, ಕಾರ್ಯಕರ್ತರು ಬರೋಬ್ಬರಿ 35 ದಿನ ಕಾಯಬೇಕಿದೆ. ಆದರೆ ಮತದಾನ ಮುಗಿದ ಕೂಡಲೇ, ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್‌ ಹಾಗೂ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳು ಈಗಗಲೇ ಮತಗಟ್ಟೆವಾರು ಆಗಿರುವ ಮತದಾನ ವಿವರಗಳನ್ನು ಕೈಯಲ್ಲಿ ಹಿಡಿದು ತಮಗೆ ಬರಬಹುದಾದ ಮತದ ಲೆಕ್ಕಾಚಾರವನ್ನು ಆರಂಭಿಸಿದ್ದಾರೆ. ತಮ್ಮ ತಮ್ಮ ಕ್ಷೇತ್ರದಲ್ಲಿ ಪ್ರತಿ ಬೂತ್‌ವಾರು ನಡೆದಿರುವ ಸಂಪೂರ್ಣ ಮತದಾನದ ವಿವರಗಳನ್ನು ಚುನಾವಣಾ ಆಯೋಗದಿಂದ ಡೌಲ್‌ಲೋಡ್‌ ಮಾಡಿಕೊಂಡು ಚುನಾವಣೆ ಸ್ಪರ್ಧಿಸಿದ್ದ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಹಾಗೂ ಪಕ್ಷಗಳ ಮುಖಂಡರು, ಕಾರ್ಯಕರ್ತರು ಯಾವ ಯಾವ ಬೂತ್‌ನಲ್ಲಿ ಯಾವ ಪಕ್ಷಕ್ಕೆ, ಯಾವ ಅಭ್ಯರ್ಥಿಗೆ ಎಷ್ಟು ಮತಗಳ ಲೀಡ್‌ ಬರುತ್ತದೆ. ಯಾರಿಗೆ ಯಾವ ಬೂತ್‌ನಲ್ಲಿ ಕಡಿಮೆ ಮತ ಬಂದು ಹಿನ್ನೆಡೆ ಆಗಲಿದೆ.

ಯಾವ ಮತಗಟ್ಟೆಯಲ್ಲಿ ಯಾವ ಅಭ್ಯರ್ಥಿ ಮುನ್ನಡೆ ಕಾಯ್ದುಕೊಳ್ಳುತಾರೆ. ಯಾವ ಮತಗಟ್ಟೆಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಮತಗಳು ಕಡಿಮೆ ಬಿದ್ದಿರಬಹುದು. ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ಲಸ್‌, ಮೈನಸ್‌ ಏನು? ಕಾಂಗ್ರೆಸ್‌ ಅಭ್ಯರ್ಥಿ ಪ್ಲಸ್‌, ಮೈನಸ್‌ ಏನು? ಯಾವ ಮತಗಟ್ಟೆಯಲ್ಲಿ ಯಾವ ಪಕ್ಷ ಜಾತಿ ಆಧಾರದ ಮೇಲೆ ಹೆಚ್ಚು ಪ್ರಾಬಲ್ಯ ಸಾಧಿಸಿದೆ ಎಂಬುದರ ಬಗ್ಗೆ ತಮ್ಮದೇ ದಾಟಿಯಲ್ಲಿ ಪಕ್ಷಗಳು ಮತದ ಲೆಕ್ಕಾಚಾರದಲ್ಲಿ ತೊಡಗಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಜಾತಿ ಲೆಕ್ಕಾಚಾರದಲ್ಲಿ ಮತದ ಲೆಕ್ಕಾಚಾರ: ವಿಶೇಷ ಅಂದರೆ ತಮ್ಮ ತಮ್ಮ ಪಕ್ಷಗಳ ಪರ ಮುಖಂಡರು, ಕಾರ್ಯಕರ್ತರು ಗೆದ್ದೆ ಗೆಲ್ಲುತ್ತೇವೆಂಬ ವಾದ ಮಂಡಿಸುತ್ತಿದ್ದಾರೆ. ಅದಕ್ಕೆ ತರ್ಕ ಬದ್ಧವಾಗಿ ಹೋಬಳಿ, ಪಂಚಾಯಿತಿ, ಗ್ರಾಮ, ವಾರ್ಡ್‌ ವಾರು ತಮ್ಮ ಪಕ್ಷಗಳ ಅಭ್ಯರ್ಥಿಗಳು ಪಡೆಯುವ ಮತ ಗಳಿಕೆ ಬಗ್ಗೆ ತಮ್ಮದೇ ದಾಟಿಯಲ್ಲಿ ರಾಜಕೀಯ ವಿಶ್ಲೇಷಣೆ ಮಾಡಿ ಗೆಲುವಿನ ಬಗ್ಗೆ ವಿಶ್ವಾಸದ ನುಡಿಗಳನ್ನು ಹೇಳುತ್ತಿದ್ದು ಪ್ರತಿ ಸ್ಪರ್ಧಿಗಳ ಸೋಲಿನ ಬಗ್ಗೆಯು ಕಾರಣಗಳನ್ನು ಮುಂದಿಟ್ಟು ತಮ್ಮ ಪಕ್ಷಗಳ ಅಭ್ಯರ್ಥಿ ಗೆಲುವಿನ ಬಗ್ಗೆ ಸಮರ್ಥಿಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಚುನಾವಣಾ ಫ‌ಲಿತಾಂಶವನ್ನು

ಕ್ಷೇತ್ರದ ಒಟ್ಟಾರೆ ಮತದಾನ ಪ್ರಮಾಣ, ಕ್ಷೇತ್ರದಲ್ಲಿರುವ ಜಾತಿವಾರು ಮತದಾರರ ಪ್ರಮಾಣವನ್ನು ಉಲ್ಲೇಖೀಸಿಕೊಂಡು ಈ ಪಕ್ಷದ ಅಭ್ಯರ್ಥಿ ಇಷ್ಟೇ ಮತ ಪಡೆಯುತ್ತಾರೆಂದು ಹೇಳುವ ಮೂಲಕ ತಮ್ಮ ತಮ್ಮ ಅಭ್ಯರ್ಥಿಗಳ ಗೆಲುವಿನ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರು ವಿಶ್ವಾಸದಿಂದ ಹೇಳಿಕೊಳ್ಳುವ ಮೂಲಕ ಸೋಲು, ಗೆಲುವಿನ ಲೆಕ್ಕಾಚಾರದಲ್ಲಿ ಮುಳಗಿದ್ದಾರೆ.

ಕುತೂಹಲ ಕೆರಳಿಸಿರುವ ಹೊಸಕೋಟೆ, ಯಲಹಂಕ, ದೇವನಹಳ್ಳಿ ಕ್ಷೇತ್ರ:

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಎರಡು ಚುನಾವಣೆಗಳಿಂದ ಹೆಚ್ಚು ಗಮನ ಸೆಳೆಯುತ್ತಿರುವ ಕ್ಷೇತ್ರಗಳಲ್ಲಿ ಹೊಸಕೋಟೆ ಹಾಗೂ ಯಲಹಂಕ ಕ್ಷೇತ್ರ. ಹೊಸಕೋಟೆ ಅತಿ ಹೆಚ್ಚು ದಾಖಲೆ ಮತದಾನಕ್ಕೆ ಸಾಕ್ಷಿಯಾದರೆ ಯಲಹಂಕ ಕಡಿಮೆ ಮತದಾನಕ್ಕೆ ಸಾಕ್ಷಿಯಾಗುತ್ತಿದೆ. ಹೊಸಕೋಟೆ ರಾಜಕೀಯವಾಗಿ ತೀವ್ರ ಜಿದ್ದಾಜಿದ್ದಿನ ಕ್ಷೇತ್ರ. ಯಲಹಂಕ, ಬಿಜೆಪಿ ಪ್ರಾಬಲ್ಯ ಇರುವ ಕ್ಷೇತ್ರ. ಕಳೆದ ಬಾರಿ ಹೊಸಕೋಟೆ ಬಚ್ಚೇಗೌಡರಿಗೆ 10 ಸಾವಿರ ಮತಗಳ ಅಂತರ ತಂದುಕೊಟ್ಟಿತ್ತು. ಯಲಹಂಕ 75 ಸಾವಿರಕ್ಕೂ ಅಧಿಕ ಮತಗಳ ಅಂತರ ತಂದುಕೊಟ್ಟಿತ್ತು. ಆದರೆ ಈ ಬಾರಿ ಗೌರಿಬಿದನೂರು, ಬಾಗೇಪಲ್ಲಿ ಕ್ಷೇತ್ರದಲ್ಲಿ ಶೇ.79 ರಷ್ಟು ಮತದಾನ ಮಾಡಿದ್ದು, ಕಾಂಗ್ರೆಸ್‌, ಬಿಜೆಪಿ ನಡುವೆ ಮತಗಳಿಕೆಯಲ್ಲಿ ತೀವ್ರ ಪೈಪೋಟಿ ನಡೆದಿರುವುದು ಮತಗಟ್ಟೆ ಸಮೀಕ್ಷೆಯಲ್ಲಿ ತಿಳಿದು ಬಂದಿದೆ. ಇನ್ನೂ ದೇವನಹಳ್ಳಿ, ಚಿಕ್ಕಬಳ್ಳಾಪುರ ಕ್ಷೇತ್ರಗಳು ಕೂಡ ಈ ಬಾರಿ ಲೋಕಸಭಾ ಚುನಾವಣೆ ಫ‌ಲಿತಾಂಶ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎಂಬ ಮಾತು ಕೇಳಿ ಬರುತ್ತಿದೆ.

19.81ಲಕ್ಷದಲ್ಲಿ 15.25 ಲಕ್ಷ ಮಂದಿ ಮತ:

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 9,83,775 ಮಂದಿ ಪುರುಷರು , 9,97,306 ಮಂದಿ ಮಹಿಳೆಯರು, ಇತರೇ 266 ಮಂದಿ ಸೇರಿ ಒಟ್ಟು 19,81,347 ಮಂದಿ ಮತದಾರರು ಇದ್ದರು. ಆ ಪೈಕಿ ಚುನಾವಣೆಯಲ್ಲಿ ಬರೋಬ್ಬರಿ 7,66,151 ಮಂದಿ ಪುರುಷರು ತಮ್ಮ ಹಕ್ಕು ಚಲಾವಣೆ ಮಾಡಿದರೆ 7,58,952 ಮಂದಿ ಮಹಿಳೆಯರು ಮಾತ್ರ ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ. ಇತರೇ 266 ಮಂದಿ ಪೈಕಿ 96 ಮಂದಿ ಮಾತ್ರ ತಮ್ಮ ಹಕ್ಕು ಚಲಾವಣೆ ಮಾಡಿದ್ದು, ಒಟ್ಟಾರೆ ಲೋಕಸಭಾ ಚುನಾವಣೆಯಲ್ಲಿ 15,25,199 ಮಂದಿ ಮತದಾರರು ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ.

ಸಾರ್ವಜನಿಕ ವಲಯದಲ್ಲಿ ಮತದ ಲೆಕ್ಕ

ರಾಜಕೀಯ ಪಕ್ಷಗಳು ಒಂದಡೆ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಮತ ಎಣಿಕೆ ಬಳಿಕ ಹೊರ ಬೀಳುವ ಫ‌ಲಿತಾಂಶದ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡು ಮತಗಟ್ಟೆವಾರು ಮತದ ಲೆಕ್ಕಾಚಾರ ನಡೆಸುತ್ತಿದ್ದರೆ ಮತ್ತೂಂದಡೆ ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ಕೂಡ ಚುನಾವಣೆಯ ಸೋಲು, ಗೆಲುವಿನ ಲೆಕ್ಕಾಚಾರದ ಭರಾಟೆ ಮುಗಿಲು ಮುಟ್ಟಿದೆ.

ಕ್ಷೇತ್ರದಲ್ಲಿ ಎಲ್ಲಿ ನೋಡಿದರೂ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಮಾತ್ರವಲ್ಲದೇ ಜನ ಸೇರುವ ಟೀ ಅಂಗಡಿ, ಕಟ್ಟಿಂಗ್‌ ಶಾಪ್‌, ಹೋಟೆಲ್‌, ಸಾರ್ವಜನಿಕ ಬಸ್‌ ನಿಲ್ದಾಣ, ಸಂತೆ, ಎಪಿಎಂಸಿ ಮಾರುಕಟ್ಟೆ ಮತ್ತಿತರ ಕಡೆಗಳಲ್ಲಿ ಚುನಾವಣಾ ಸಮರದ ಫ‌ಲಿತಾಂಶ ಬಗ್ಗೆಯೆ ಹೆಚ್ಚು ಚರ್ಚೆ ನಡೆಯುತ್ತಿದೆ. ಗ್ರಾಮಾಂತರ ಪ್ರದೇಶದಲ್ಲೂ ಕೂಡ ಗುಂಪು ಗುಂಪುಗಳಾಗಿ ಜನ ಸೇರಿರುವ ಕಡೆ ಸೋಲು, ಗೆಲುವಿನ ಲೆಕ್ಕಾಚಾರದ್ದೆ ಮಾತು ಕೇಳಿ ಬರುತ್ತಿದೆ.

ಸಿಪಿಎಂ, ಬಿಎಸ್‌ಪಿ ಮತಗಳಿಕೆ ಬಗ್ಗೆ ಗಹನ ಚರ್ಚೆ:

ಕ್ಷೇತ್ರದಲ್ಲಿ ಈ ಬಾರಿಯು ಕೂಡ ಮಾರ್ಕ್ಸ್ವಾದಿ ಕಮ್ಯೂನಿಸ್ಟ್‌ (ಸಿಪಿಎಂ) ಕೂಡ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿತ್ತು. ಅಲ್ಲದೇ ಬಹುಜನ ಸಮಾಜ ಪಕ್ಷ ತನ್ನ ಅಭ್ಯರ್ಥಿಕ್ಕೆ ಅಖಾಡಕ್ಕೆ ಇಳಿಸಿತ್ತು. ಇದೇ ಮೊದಲ ಬಾರಿಗೆ ಎಸ್‌ಯುಸಿಐ ಪಕ್ಷ ಕೂಡ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿತ್ತು. ಹೀಗಾಗಿ ಬಾಗೇಪಲ್ಲಿ ಕ್ಷೇತ್ರದಲ್ಲಿ ದಟ್ಟ ಪ್ರಭಾವ ಹೊಂದಿರುವ ಸಿಪಿಎಂ ಪಕ್ಷ ಕ್ಷೇತ್ರದಲ್ಲಿ ಗಳಿಸುವ ಮತಗಳ ಬಗ್ಗೆಯು ಚುನಾವಣಾ ಫ‌ಲಿತಾಂಶದ ಸೋಲು, ಗೆಲುವಿನ ಲೆಕ್ಕಾಚಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ.

ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

0528

Chikkaballapur: ಕೈ ಚೆಲ್ಲಿದ ಜನಪ್ರತಿನಿಧಿಗಳು: ಸುಂಕ ವಸೂಲಿಗೆ ನಗರಸಭೆ ಟೆಂಡರ್‌!

dinesh-gu

COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್‌ ಗುಂಡೂರಾವ್‌

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.