![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 30, 2024, 6:33 AM IST
ಲಾಹೋರ್: ಪಾಕಿಸ್ಥಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮುಂದಿನ ವರ್ಷದ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ತಾಣಗಳನ್ನು ಅಂತಿಮಗೊಳಿಸಿದೆ. ಇದರಿಂದ ಈ ಟೂರ್ನಿಯ ಆತಿಥ್ಯ ತನ್ನದೇ ಆಗಿರಲಿದೆ ಎಂಬುದನ್ನು ಸಾರಿದಂತಾಗಿದೆ.
ಲಾಹೋರ್, ಕರಾಚಿ ಮತ್ತು ರಾವಲ್ಪಿಂಡಿಯಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು ನಡೆಯಲಿವೆ. 2025ರ ಫೆಬ್ರವರಿ-ಮಾರ್ಚ್ ವೇಳೆ ಈ ಪಂದ್ಯಾವಳಿ ನಡೆಯುವ ಸಾಧ್ಯತೆ ಇದೆ. 2017ರಲ್ಲಿ ಕೊನೆಯ ಸಲ ಇಂಗ್ಲೆಂಡ್ನಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯನ್ನು ಆಡಲಾಗಿತ್ತು.
ಭಾರತದ ಪಂದ್ಯಗಳೆಲ್ಲಿ?
ಆದರೆ ಪಾಕಿಸ್ಥಾನದಲ್ಲಿ ನಡೆಯುವ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾರತ ಪಾಲ್ಗೊಳ್ಳುವ ಯಾವುದೇ ಸಾಧ್ಯತೆ ಇಲ್ಲ. ಆಗ ಐಸಿಸಿ “ಹೈಬ್ರಿಡ್ ಮಾದರಿ’ಯಂತೆ ಭಾರತದ ಪಂದ್ಯಗಳನ್ನು ತಟಸ್ಥ ಕೇಂದ್ರದಲ್ಲಿ ಆಡಿಸುವ ಸಾಧ್ಯತೆ ಇದೆ. ಕಳೆದ ವರ್ಷದ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲೂ ಇದನ್ನು ಅನುಸರಿಸಲಾಗಿತ್ತು. ಪಾಕಿಸ್ಥಾನದ ಆತಿಥ್ಯದ ಈ ಕೂಟದಲ್ಲಿ ಭಾರತದ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿಸಲಾಗಿತ್ತು.
“ನಾವು ಈಗಾಗಲೇ ಐಸಿಸಿಗೆ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಸಂಭಾವ್ಯ ವೇಳಾಪಟ್ಟಿಯೊಂದನ್ನು ಕಳುಹಿಸಿದ್ದೇವೆ. ಇದೀಗ ತಾಣಗಳನ್ನೂ ಅಂತಿಮ ಗೊಳಿಸಿದ್ದೇವೆ. ಐಸಿಸಿ ಭದ್ರತಾ ತಂಡ ಈಗಾಗಲೇ ಪಾಕಿಸ್ಥಾನಕ್ಕೆ ಆಗಮಿಸಿ ತಾಣಗಳನ್ನು ಪರಿಶೀಲಿಸಿದೆ. ಕೆಲವು ಸ್ಟೇಡಿಯಂಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಇದಕ್ಕಾಗಿ ಮೇ 7ರಂದು ಬಿಡ್ ಕರೆಯಲಿದ್ದೇವೆ. ಈ ಕೂಟವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಬಲ್ಲೆವು ಎಂಬ ವಿಶ್ವಾಸ ನಮ್ಮದು’ ಎಂಬುದಾಗಿ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಹೇಳಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.