![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Apr 30, 2024, 1:42 AM IST
ಪುತ್ತೂರು: ಕಬಕ ಗ್ರಾಮದ ಮುರ ಭಾರತ್ ಲೈಮ್ ಫ್ಯಾಕ್ಟರಿ ಸಮೀಪದ ರವಿ ಎನ್. ಅವರ ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರವಿ ಎ.26ರಂದು ಮತ ಚಲಾಯಿಸಿ ಬಂದು ಮನೆಗೆ ಬೀಗ ಹಾಕಿ ಕೇರಳದ ಸಂಬಂಧಿಕರ ಮನೆಗೆ ತೆರಳಿದ್ದು, ಎ.28ರಂದು ಬೆಳಗ್ಗೆ ಬಂದು ನೋಡಿದಾಗ ಮನೆಯಲ್ಲಿ ಕಳವು ನಡೆದಿರುವುದು ಬೆಳಕಿಗೆ ಬಂದಿದೆ.
ಮನೆಯ ಎದುರಿನ ಬಾಗಿಲಿನ ಬೀಗವನ್ನು ಮುರಿದು, ಬೆಡ್ರೂಮಿನಲ್ಲಿದ್ದ ಕಬ್ಬಿಣದ ಕಪಾಟು ಹಾಗೂ ಸೇಫ್ ಲಾಕರ್ ಅನ್ನು ಒಡೆದು ಸುಮಾರು 11 ಗ್ರಾಂ ತೂಕದ ಚಿನ್ನದ ಸರ, 9 ಗ್ರಾಂ ತೂಕದ ಬ್ರಾಸ್ಲೆಟ್, 16 ಗ್ರಾಂ ತೂಕದ ಹಳೆಯ ಜೋಮಾಲೆ, 3 ಗ್ರಾಂ ತೂಕದ ಬೆಂಡೋಲೆ ಸಹಿತ ಒಟ್ಟು 42 ಗ್ರಾಂ ತೂಕದ ಚಿನ್ನಾಭರಣವನ್ನು ಕಳವು ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.