Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ


Team Udayavani, Apr 30, 2024, 3:04 PM IST

1-sirsi

ಶಿರಸಿ: ದೇಶದ ಪ್ರಧಾನಿಗಳು ಬಂದು ಹೋದ ಬಳಿಕ ಕಾಂಗ್ರೆಸ್ ಮತಗಳ ಮೇಲೆ ಯಾವುದೇ ಪರಿಣಾಮ ಆಗಿಲ್ಲ, ಅಡ್ಡ ಪರಿಣಾಮ ಕೂಡ ಏನಿಲ್ಲ ಎಂದು ಶಾಸಕ ಭೀಮಣ್ಣ ನಾಯ್ಕ ಸಮರ್ಥಿಸಿಕೊಂಡರು.

ಮಂಗಳವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ, ಅಭಿವೃದ್ದಿ ವಿಚಾರ ಬಿಟ್ಟು ತಾಳಿ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಜಿಲ್ಲೆಯ ಅನೇಕ ಸಮಸ್ಯೆ ಇತ್ಯರ್ಥದ ಭರವಸೆ ನೀಡಬೇಕಿತ್ತು ಎಂದೂ ಹೇಳಿದರು.

ಪ್ರಧಾನಿಗಳು ರಾಜ್ಯ, ಜಿಲ್ಲೆಗೆ ಯಾವುದೇ ಘೋಷಣೆ ನೀಡಿಲ್ಲ. ಇಲ್ಲಿನ ಅಭಿವೃದ್ದಿ, ಅನೇಕ ವರ್ಷದಿಂದ ಇರುವ ದೊಡ್ಡ ಸಮಸ್ಯೆ ಅತಿಕ್ರಮಣ, ನಿರುದ್ಯೋಗ ಸಮಸ್ಯೆ ಬಗೆಹರಿಸುತ್ತೇನೆ ಎಂದೂ ಹೇಳಿಲ್ಲ. ಇಲ್ಲಿಯ ಸಮಸ್ಯೆ, ಇಲ್ಲಿನ ಮುಖಂಡರು ಸಮಸ್ಯೆ ಬಗೆಹರಿಸಿಲ್ಲ. ಕಸ್ತೂರಿರಂಗನ್ ಸಮಸ್ಯೆ ಕೂಡ ಪ್ರಸ್ತಾಪ ಮಾಡಿಲ್ಲ ಎಂದರು.

ಕಾಂಗ್ರೆಸ್ ಸರಕಾರ ಬಂದರೆ ಆಸ್ತಿ ಮೇಲೆ ಕಣ್ಣು, ತಾಯಂದಿರ ತಾಳಿ ಮೇಲೂ ಕಣ್ಣು ಎಂದು ಪ್ರಧಾನಿಗಳು ಆಡಬಾರದಿತ್ತು. ಕಾಂಗ್ರೆಸ್ ಸರಕಾರ ಮಾತ್ರ ಬಹುಜನ ಹಿತಾಯ ಮಾಡುವ ಸರಕಾರ ಎಂದರು.

ಮಾಜಿ ಶಾಸಕಿ ರೂಪಾಲಿ ನಾಯ್ಕ ಐದು ಗ್ಯಾರಂಟಿಗಳನ್ನೂ ತಿರಸ್ಕಾರ ಮಾಡಿ ಎಂದು ಹೇಳುತ್ತಾರೆ. ಐದು ಗ್ಯಾರಂಟಿ ಮನೆ ಮನೆಗೆ ತಲುಪುತ್ತಿದೆ. ತಾಯಿಯ ನೋವು ಗೊತ್ತಿದ್ದರೆ ರೂಪಾಲಿ ಅವರು ಹೀಗೆ ಹೇಳುತ್ತಿರಲಿಲ್ಲ. ಏತಕ್ಕಾಗಿ ಹೀಗೆ ಹೇಳಿದರು ಎಂಬುದನ್ನು ಹೇಳಬೇಕು. ಕಾಂಗ್ರೆಸ್ ಸರಕಾರದಿಂದ ನೀಡಲಾದ ಭಾಗ್ಯಲಕ್ಷ್ಮೀಯಿಂದ ತಾಳಿ ಸರ ಇಲ್ಲದವರು ತಾಳಿ ಸರ, ಮನೆಗೆ ಬೇಕಾದ ವಸ್ತು ಕೂಡ ತೆಗೆದುಕೊಂಡಿದ್ದಾರೆ. ಆದರೆ, ರೂಪಾಲಿ ಬೇಜವಬ್ದಾರಿ ಮಾತನಾಡಬಾರದಿತ್ತು ಎಂದರು.

ಅಯೋಧ್ಯೆ ರಾಮನ ಸೇವೆಯಲ್ಲಿ ಎಲ್ಲರ ಕಾಣಿಕೆ ಇದೆ. ಆದರೆ, ಇದನ್ನು ಬಿಜೆಪಿ ಸ್ವಾರ್ಥಕ್ಕೋಸ್ಕರ ಬಳಸಿಕೊಳ್ಳುತ್ತಿದೆ ಎಂದ ಅವರು, ಪರೇಶ ಮೇಸ್ತಾ  ಪ್ರಕರಣವನ್ನು ಎಬ್ಬಿಸಿದವರು ಯಾರು? ವಿಕಾಸಾಶ್ರಮ ಬಯಲಿನಲ್ಲಿ ಚಾಲನೆ ನೀಡಿ, ಯುವಕರ ಮೇಲೆ ಪ್ರಕರಣ ಬರುವಂತೆ ಮಾಡಿದವರು ಯಾರು? ಪ್ರಧಾನಿಗಳು ಇದರ ಬಗ್ಗೆ ಕೂಡ ನೋಡಬೇಕಿತ್ತು ಎಂದರು.

ದೇವರ ಹೆಸರಿನಲ್ಲಿ ಮತ ಕೇಳುವುದು, ಕೊಟ್ಟ ಮಾತು ಈಡೇರಿಸದೇ ಮತ್ತೆ ಅಧಿಕಾರ ಕೇಳುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಸರಕಾರ 34 ರೂ.ಗೆ ಅಕ್ಕಿ ಕೊಡುತ್ತೇನೆ ಎಂದರೂ ಕೊಡದ ಕೇಂದ್ರ ಸರಕಾರ ಈಗ 29 ರೂ.ಗೆ ಮಾರಾಟ ಮಾಡುತ್ತಿದೆ. ಕಾಂಗ್ರೆಸ್ ಸರಕಾರವು ಜನರಿಗೆ ಉಚಿತವಾಗಿ ಅಕ್ಕಿ ಪೂರೈಸಲಾಗಿತ್ತು. ಆಗ ಕೇಳಿದರೂ ಕೊಡದ ಕೇಂದ್ರ ಬಿಜೆಪಿ ಸರಕಾರದ ನಡೆ ಸರಿನಾ ಎಂದೂ ಕೇಳಿದರು.

ಈ ವೇಳೆ ದೀಪಕ್ ದೊಡ್ಡೂರು, ಜಗದೀಶ ಗೌಡ, ಗಣೇಶ ದಾವಣಗೆರೆ, ಸುಮಾ ಉಗ್ರಾಣಕರ, ಪ್ರಸನ್ನ ಶೆಟ್ಟಿ ಇತರರಿದ್ದರು.

ಪ್ರಧಾನಿಗಳು ಬಂದಾಗ ನಾನೂ ಸ್ವಾಗತ ಕೋರಲು ಮುಂದಾಗಿದ್ದೆ. ಆದರೆ, ಚುನಾವಣೆ ಕಾರಣದಿಂದ ಹೋಗಿಲ್ಲ. ಪ್ರಧಾನಿಗಳ ಕಾರ್ಯಕ್ರಮ ಸಹಿತ, ಬಿಜೆಪಿಯ ಯಾವುದೇ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಥವಾ ಸರಕಾರ ಹಸ್ತಕ್ಷೇಪ ಮಾಡಿಲ್ಲ. ಅಧಿಕಾರಿಗಳು, ಇಲಾಖೆ ತಪ್ಪು ಮಾಡಿದರೆ ಚುನಾವಣೆ ಆಯೋಗ ಕಠಿಣ ಕ್ರಮ ಕೈಗೊಳ್ಳಲಿ. – ಭೀಮಣ್ಣ ನಾಯ್ಕ, ಶಾಸಕ

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Buffellow

Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ

19-sirsi

Sirsi: ದೇಶಾಪಂಡೆ, ಕಾಗೇರಿ ಅವರ ಭಾಷಣ ಶೈಲಿ ಬದಲಾಗಿದೆ ಅಂದಿದ್ದು ಯಾಕೆ?

Dandeli: ಬೀದಿನಾಯಿ ದಾಳಿ.. ಬಾಲಕನಿಗೆ ಗಾಯ: ಬೀದಿನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹ

Dandeli: ಬೀದಿನಾಯಿ ದಾಳಿ.. ಬಾಲಕನಿಗೆ ಗಾಯ: ಬೀದಿನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.