ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ


Team Udayavani, Apr 30, 2024, 6:23 PM IST

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

■ ಉದಯವಾಣಿ ಸಮಾಚಾರ
ಭಟ್ಕಳ: ದಿನದಿಂದ ದಿನಕ್ಕೆ ಬಿಸಿಲ ತಾಪ ಏರುತ್ತಿದ್ದು ತಾಲೂಕಿನ ಹಲವೆಡೆ ಜೀವ ಜಲ ಪಾತಾಳಕ್ಕಿಳಿಯುತ್ತಿದ್ದು ಕೆಲವೇ ದಿನಗಳಲ್ಲಿ ನೀರಿಗೆ ಬರ ಬಂದರೂ ಆಶ್ಚರ್ಯವಿಲ್ಲ ಎನ್ನುವಂತಾಗಿದೆ. ತಾಲೂಕಿನಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರುತ್ತಲೇ ಇದ್ದು ಕಳೆದ ಸುಮಾರು ಒಂದು ವಾರದಿಂದ 28 ಡಿಗ್ರಿಯಿಂದ 36-38 ಡಿಗ್ರಿಯ ತನಕ ತಾಪಮಾನ ದಾಖಲಾಗುತ್ತಿದೆ. ಕೆಲ ದಿನಗಳ ಹಿಂದೆ ಎರಡು ಮಳೆ ಬಂದಾಗ ಮಾತ್ರ ಕೊಂಚ ತಾಪಮಾನ ಕಡಿಮೆಯಾಗಿದ್ದು ಬಿಟ್ಟರೆ ಮತ್ತೆ ಬಿಸಿಲ ಪ್ರಖರತೆ ಹೆಚ್ಚುತ್ತಲೇ ಇದ್ದು ಸೆಖೆ ತಡೆಯಲಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಭಟ್ಕಳ ತಾಲೂಕಿನಾದ್ಯಂತ ಬಿರು ಬೇಸಿಗೆ ಹಾಗೂ ನೀರಿನ ಕೊರತೆ ಜನರನ್ನು ಹೈರಾಣಾಗಿಸಿದೆ. ಇನ್ನು ಕೆಲ ದಿನಗಳ ಕಾಲ ಮಳೆ ಬಾರದಿದ್ದರೆ ಹನಿ ನೀರಿಗೂ ಕಷ್ಟಪಡುವ ಪರಿಸ್ಥಿತಿ ಬಂದರೂ ಆಶ್ಚರ್ಯವಿಲ್ಲ. ಹಿಂದೆ ನದಿ, ಹೊಳೆ-ಹಳ್ಳಗಳಿಗೆ ಕಟ್ಟು (ಒಡ್ಡು) ಹಾಕಿ ಕೃಷಿ ಚಟುವಟಿಕೆಗೆ ನೀರು ನಿಲ್ಲಿಸುವುದರಿಂದ ಅಕ್ಕಪಕ್ಕದ ಕಿ.ಮೀ. ಗಟ್ಟಲೆ ಪ್ರದೇಶದಲ್ಲಿ ತಂಪು ಗಾಳಿಯಾದರೂ ಬೀಸುತ್ತಿತ್ತು. ಬಾವಿ, ಕೆರೆಗಳಲ್ಲಿ ನೀರಿನ ಸೆಲೆ ಉಳಿದುಕೊಂಡು ಕುಡಿಯುವ ನೀರಿಗೆ ಬರ ಎನ್ನುವುದು ಇರಲಿಲ್ಲ. ಆದರೆ ಇಂದು ಕೃಷಿಯೇ ನಾಸ್ತಿಯಾಗಿದೆ. ಮಳೆಗಾಲದಲ್ಲೂ ಕೂಡಾ ಕೆಲವೊಂದು ಗದ್ದೆಗಳನ್ನು ಪಾಳು ಬಿಡುತ್ತಿರುವ ಇಂದಿನ ಕಾಲದಲ್ಲಿ ಬೇಸಿಗೆ ಕೃಷಿಯಂತು ದೂರದ ಮಾತಾಗಿದೆ.

ಬತ್ತಿದ ನದಿ-ಬಾವಿ: ತಾಲೂಕಿನಲ್ಲಿ ನೂರಾರು ನದಿ, ಹಳ್ಳ-ಕೊಳ್ಳಗಳಿದ್ದು ಇವುಗಳಲ್ಲಿ ಅರ್ಧದಷ್ಟು ನವೆಂಬರ್‌-ಡಿಸೆಂಬರ್‌ ಕೊನೆ ವಾರವೇ ಒಣಗಿ ಹೋದರೆ ಮತ್ತೆ ಸುಮಾರು ಶೇ.25 ರಷ್ಟು ಮಾರ್ಚ್‌ ವೇಳೆಗೆ ಬತ್ತಿ ಬರಡಾಗಿವೆ. ಇನ್ನು ಕೆಲವೇ ಕೆಲವು ನದಿ, ಹಳ್ಳ-ತೊರೆಗಳು ಏಪ್ರಿಲ್‌, ಮೇ ತನಕ ಇರುತ್ತಿದ್ದು, ಅವು ಜೀವ ಸೆಲೆಗಳಾಗಿ ಇಲ್ಲಿನ ಬಾವಿ, ಕೆರೆಗಳಿಗೆ ನೀರುಣಿಸುವ ಜಲಮೂಲವಾಗಿವೆ. ಆದರೆ ಕಳೆದ ಎರಡು ದಶಕಗಳಿಂದ ಇವು ಕೂಡಾ ಬತ್ತಿ ಹೋಗುತ್ತಿದ್ದು ನೀರನ್ನು ಕಟ್ಟುಕಟ್ಟಿ ಹಿಡಿದಿರುವ ಸಂಪ್ರದಾಯವೂ ಮಾಯವಾಗಿದ್ದರಿಂದ ನೀರಿನ ಸೆಲೆಯೇ ಇಲ್ಲದಂತಾಗಿದೆ.

ಟ್ಯಾಂಕರ್‌ ನೀರೇ ಗತಿ: ಏಪ್ರಿಲ್‌ ತಿಂಗಳಿನಲ್ಲಿಯೇ ತಾಲೂಕಿನಲ್ಲಿ ಕುಡಿಯುವ ನೀರಿನ ಬರ ಉಂಟಾಗಿದ್ದು. ತಾಲೂಕಿನಲ್ಲಿ ವರ್ಷ ವರ್ಷ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಕೊರತೆ ಹೆಚ್ಚುತ್ತಿದೆ. ಆದರೆ ಬೇಸಿಗೆ ಮಧ್ಯದಲ್ಲಿ ಒಂದೆರಡು ಉತ್ತಮ ಮಳೆ ಸುರಿದು ದಾಹ ತೀರಿಸುವಲ್ಲಿ ಸಫಲವಾಗುತ್ತಿತ್ತು. ಈ ಬಾರಿಯ ಮಳೆ ಕೇವಲ ಒಂದೆರಡು ತಾಸು ಬಂದು ಹೋಗಿದ್ದು, ಇರುವ ನೀರನ್ನು ಒಣಗಸಿದೆ ಎನ್ನುವುದು ಹಿರಿಯರ ಮಾತು. ಕೆಲವು ಪ್ರದೇಶದಲ್ಲಿ ಬಾವಿಗಳು ಸಂಪೂರ್ಣ ಬತ್ತಿ ಹೋಗಿ ಆ ಭಾಗದ ಜನ ಪಂಚಾಯತ್‌ ನೀಡುವ ಟ್ಯಾಂಕರ್‌ ನೀರು ಅಥವಾ ಹತ್ತಿರದಲ್ಲಿನ ಇರುವ ಯಾವುದಾದರೂ ಒಂದು ಬಾವಿಯನ್ನು ಆಶ್ರಯಿಸುವ ಸ್ಥಿತಿ ಎದುರಾಗಿದೆ.

ಹೆಚ್ಚಿದ ಆತಂಕ: ಆದರೆ ಈ ಬಾರಿ ಈಗಾಗಲೇ ಬಾವಿಗಳು ಒಣಗಿದ್ದರಿಂದ ಜನ ಹಾಗೂ ತಾಲೂಕಾಡಳಿತವನ್ನು ಆತಂಕಕ್ಕೆ ಈಡು ಮಾಡಿದೆ. ಎಲ್ಲರ ಬಾವಿಗಳೂ ಬತ್ತಿ ಹೋಗುತ್ತಾ ಬಂದಿದ್ದು ಜನರಲ್ಲಿ ನೀರಿಗಾಗಿ ಹಾಹಾಕಾರ ಎದ್ದಿದೆ. ನಗರಕ್ಕೆ ನೀರು ಸರಬರಾಜು ಮಾಡುತ್ತಿದ್ದ ಇಲ್ಲಿನ ಕಡವಿನ ಕಟ್ಟೆ ಡ್ಯಾಂ ಕೂಡಾ ಇನ್ನೇನು ಕೆಲವೇ ದಿನಗಳಲ್ಲಿ ಬತ್ತಿ ಹೋಗುವ ಸಾಧ್ಯತೆ ಇದ್ದು ನಗರಕ್ಕೆ, ಶಿರಾಲಿ, ಜಾಲಿ ಹಾಗೂ ಮಾವಿನಕುರ್ವೆ ನೀರು ಸರಬರಾಜು ವ್ಯತ್ಯಯವಾಗಲಿದೆ. ಇನ್ನಾದರೂ ಉತ್ತಮ ಮಳೆ ಬಂದು ಬಾವಿ, ಹಳ್ಳ, ನದಿ-ತೊರೆಗಳಲ್ಲಿ ನೀರು ತುಂಬಿಕೊಂಡರೆ ಮಾತ್ರ ಕುಡಿಯುವ ನೀರು ದೊರೆಯಬಹದು. ಇಲ್ಲವಾದಲ್ಲಿ ನೀರಿನ ಬವಣೆ ತಪ್ಪಿದ್ದಲ್ಲ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

4-sirsi

Sirsi: ಗುಂಡಿಗದ್ದೆ ಬಳಿ ರಸ್ತೆ ದಾಟಿದ ಚಿರತೆ! : ಸ್ಥಳೀಯರಲ್ಲಿ ಆತಂಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ಕೈಗೊಳ್ಳುತ್ತಾರೆ: ಭೀಮಣ್ಣ ನಾಯ್ಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ: ಭೀಮಣ್ಣ ನಾಯ್ಕ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.