Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

ಪ್ರತಿಯೊಂದು ವಿಡಿಯೋ ಎಳೆಎಳೆಯಾಗಿ ಪರಿಶೀಲಿಸುತ್ತಿರುವ ಎಸ್‌ಐಟಿ

Team Udayavani, May 1, 2024, 7:05 AM IST

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

ಬೆಂಗಳೂರು: ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ಪೆನ್‌ಡ್ರೈವ್‌ ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ), ಬರೋಬ್ಬರಿ 40 ಜಿಬಿ ಪೆನ್‌ ಡ್ರೈವ್‌ನಲ್ಲಿರುವ ಸಾವಿರಾರು ಅಶ್ಲೀಲ ವಿಡಿಯೋವನ್ನು ಎಳೆಎಳೆಯಾಗಿ ಪರಿಶೀಲಿಸುತ್ತಿದೆ.

ಎಸ್‌ಐಟಿಯ ಮೂರು ವಿಶೇಷ ತಂಡಗಳು ಒಂದೊಂದು ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ. ಈಗಾಗಲೇ 40 ಜಿಬಿಯ 2 ಪೆನ್‌ ಡ್ರೈವ್‌ ಎಸ್‌ಐಟಿ ಕೈ ಸೇರಿದೆ. ಮೂರು ತಂಡಗಳ ಪೈಕಿ ಒಂದು ತಂಡದಲ್ಲಿರುವ ಇನ್‌ಸ್ಪೆಕ್ಟರ್‌ ಸೇರಿ ನಾಲ್ವರು ಪೊಲೀಸ್‌ ಸಿಬ್ಬಂದಿ ಜಪ್ತಿ ಮಾಡಿರುವ 40 ಜಿಬಿಯ ಪೆನ್‌ ಡ್ರೈವ್‌ಗಳಲ್ಲಿರುವ ಸಾವಿರಾರು ಅಶ್ಲೀಲ ವಿಡಿಯೋಗಳನ್ನು ತನಿಖಾ ಆಯಾಮಗಳಲ್ಲಿ ಪರಿಶೀಲಿಸುತ್ತಿದ್ದಾರೆ.

ಪೆನ್‌ಡ್ರೈವ್‌ನಲ್ಲಿ ನೂರಾರು ಮಹಿಳೆಯರ ವಿಡಿಯೋ ಇರುವುದರಿಂದ ಅದರಲ್ಲಿರುವ ಒಬ್ಬೊಬ್ಬ ಮಹಿಳೆಯರನ್ನು ಗುರುತಿಸುವುದೇ ಎಸ್‌ಐಟಿಗೆ ಸವಾಲಾಗಿದೆ. ಹೀಗಾಗಿ ಸಿಐಡಿ ಸೈಬರ್‌ ವಿಭಾಗದ ಸಿಬ್ಬಂದಿಯ ಸಹಾಯ ಪಡೆಯಲಾಗಿದೆ. ಈಗಾಗಲೇ ವಿಡಿಯೋದಲ್ಲಿರುವ 5ಕ್ಕೂ ಹೆಚ್ಚಿನ ಮಹಿಳೆಯರ ವಿವರ ಪತ್ತೆಹಚ್ಚಲಾಗಿದೆ.

ಎಸ್‌ಐಟಿಯ ಮತ್ತೊಂದು ತಂಡ ಪತ್ತೆಯಾದ ಮಹಿಳೆಯರನ್ನು ಗೌಪ್ಯವಾಗಿ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕುವ ಕಾರ್ಯ ಪ್ರಾರಂಭಿಸಿದೆ. ಇದುವರೆಗೆ ನಾಲ್ವರು ಮಹಿಳೆಯರ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಪೆನ್‌ ಡ್ರೈವ್‌ನಲ್ಲಿರುವ ಅಷ್ಟೂ ವಿಡಿಯೋಗಳ ಬಗ್ಗೆ ಇರುವ ವಿವರಗಳನ್ನು ತನಿಖಾಧಿಕಾರಿಗಳು ಶೀಘ್ರದಲ್ಲೇ ಎಸ್‌ಐಟಿ ಮುಖ್ಯಸ್ಥರಿಗೆ ವರದಿ ನೀಡಲಿದ್ದಾರೆ. ಮತ್ತೂಂದೆಡೆ ಜಪ್ತಿ ಮಾಡಿರುವ ಪೆನ್‌ಡ್ರೈವ್‌ನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್ಎಸ್‌ಎಲ್‌) ಕಳುಹಿಸಲು ಸಿದ್ಧತೆ ನಡೆಯುತ್ತಿದೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ ಎಂದಿರುವ ತನಿಖಾ ತಂಡವು, ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದೆ.

ಸರ್ಕಾರಿ ಅಧಿಕಾರಿಗಳಿಗೆ ಢವಢವ:
ಪೆನ್‌ಡ್ರೈವ್‌ನಲ್ಲಿ ಸೆರೆಯಾದ ಅಶ್ಲೀಲ ವಿಡಿಯೋವನ್ನು ತನಿಖಾ ತಂಡವು ಪರಿಶೀಲಿಸಿದಾಗ ಹಲವಾರು ಸರ್ಕಾರಿ ಮಹಿಳಾ ಅಧಿಕಾರಿಗಳು ಹಾಗೂ ಇನ್ನು ಕೆಲವರು ರಾಜಕೀಯ ರಂಗದಲ್ಲಿ ಗುರುತಿಸಿಕೊಂಡಿರುವವರು ಇರುವುದು ಕಂಡು ಬಂದಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಕೆಲವು ಉನ್ನತ ಹುದ್ದೆಯಲ್ಲಿರುವ ಮಹಿಳೆಯರು, ಖಾಸಗಿಯಾಗಿ ಉದ್ಯಮ ನಡೆಸುತ್ತಿರುವವರೂ ಹಗರಣದಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ. ಕೆಲಸ ಕೊಡಿಸುವುದು, ವರ್ಗಾವಣೆ, ಬಡ್ತಿ ಇತರ ಆಮಿಷಕ್ಕೆ ಒಳಗಾಗಿ ಮಹಿಳಾ ಸರ್ಕಾರಿ ಅಧಿಕಾರಿಗಳು ಆರೋಪಿಯ ಬಲೆಗೆ ಬಿದ್ದಿರುವ ಶಂಕೆ ಮೆಲ್ನೋಟಕ್ಕೆ ಕಂಡು ಬಂದಿದೆ. ವಿಡಿಯೋದಲ್ಲಿರುವ ಒಬ್ಬೊಬ್ಬ ಮಹಿಳೆಯರನ್ನೂ ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗುತ್ತಿದೆ. ಹೀಗಾಗಿ ವೈರಲ್‌ ಆಗಿರುವ ವಿಡಿಯೋದಲ್ಲಿರುವ ಮಹಿಳಾ ಸರ್ಕಾರಿ ಅಧಿಕಾರಿಗಳಿಗೆ ಢವ ಢವ ಶುರುವಾಗಿದೆ.

ಕೆಲ ಸಂತ್ರಸ್ತೆಯರ ವಿಚಾರಣೆ
ಅಶ್ಲೀಲ ವಿಡಿಯೋದಲ್ಲಿ ಸೆರೆಯಾಗಿರುವ ಕೆಲವು ಮಹಿಳೆಯರನ್ನು ವಿಚಾರಣೆ ನಡೆಸಲಾಗಿದೆ. ಮುಖ್ಯವಾಗಿ ವೈರಲ್‌ ಆಗಿರುವ ವಿಡಿಯೋದಲ್ಲಿ ಇರುವುದು ನೀವೇನಾ? ವಿಡಿಯೋ ಮಾಡಿಕೊಂಡಿರುವ ಉದ್ದೇಶವೇನು?, ಆರೋಪಿಯ ಆಮಿಷಕ್ಕೆ ಒಳಗಾಗಿ ಅಥವಾ ಬೆದರಿಕೆಗೆ ಒಳಗಾಗಿ ವಿಡಿಯೋ ಮಾಡಲು ಸಮ್ಮತಿಸಿದಿರಾ? ಎಂಬಿತ್ಯಾದಿ ಪ್ರಶ್ನೆಗಗಳಿಗೆ ವಿಡಿಯೋದಲ್ಲಿದ್ದಾರೆ ಎನ್ನಲಾದ ಮಹಿಳೆಯರಿಂದ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ.

ಪ್ರಕರಣ ಮುಂದೇನಾಗಬಹುದು ?
ಪ್ರಜ್ವಲ್‌ ರೇವಣ್ಣ ಅವರನ್ನು ವಿಚಾರಣೆ ನಡೆಸಿ ಎಸ್‌ಐಟಿ ಹೇಳಿಕೆ ದಾಖಲಿಸಿಕೊಳ್ಳಬಹುದು. ವಿಡಿಯೋದಲ್ಲಿ ಮಾತನಾಡಿರುವ ಸ್ವರ (ವಾಯ್ಸ)ಯಾರದ್ದು ಎಂಬ ಮಾಹಿತಿಯನ್ನು ಎಫ್ಎಸ್‌ಎಲ್‌ನಿಂದ ತನಿಖಾ ತಂಡವು ವರದಿ ಪಡೆದುಕೊಳ್ಳಲಿದೆ. ಮೊಬೈಲ್‌ ಜಪ್ತಿ ಮಾಡಿ ರಿಟ್ರೈವ್‌ ಮಾಡುವ ಸಾಧ್ಯತೆಗಳಿವೆ. ಇವರ ಮೊಬೈಲ್‌ನಲ್ಲಿ ಕರೆ ಮಾಡಿರುವ ವಿವರ, ವಿಡಿಯೋ ಕರೆಗಳ ವಿವರ ಪರಿಶೀಲಿಸಬಹುದು. ಎಸ್‌ಐಟಿ ಕೊಟ್ಟ ನೋಟಿಸ್‌ಗೆ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಸ್ಪಂದಿಸದಿದ್ದರೆ ಬಂಧಿಸುವ ಸಾಧ್ಯತೆಗಳನ್ನೂ ಅಲ್ಲಗಳೆಯುವಂತಿಲ್ಲ. ಎಫ್ಎಸ್‌ಎಲ್‌ ವರದಿ ಆಧರಿಸಿ ಎಸ್‌ಐಟಿ ತನಿಖೆ ಮುಂದೆ ಸಾಗಲಿದೆ. ವಿಡಿಯೋದಲ್ಲಿರುವ ಮಹಿಳೆಯರ ಹೇಳಿಕೆ ಆಧರಿಸಿ ಘಟನಾ ಸ್ಥಳಕ್ಕೆ ತೆರಳಿ ತನಿಖಾಧಿಕಾರಿಗಳು ಮಹಜರು ಮಾಡುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.