Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
ಹೊಳೆನರಸೀಪುರ ಕೇಸ್ ಸಿಐಡಿಗೆ ವರ್ಗಾವಣೆ
Team Udayavani, Apr 30, 2024, 10:56 PM IST
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡಕ್ಕೆ ಹೆಚ್ಚುವರಿಯಾಗಿ 18 ಮಂದಿ ಅಧಿಕಾರಿ-ಸಿಬ್ಬಂದಿ ನೇಮಕ ಮಾಡಲಾಗಿದೆ.
ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಶಾಸಕ ಎಚ್.ಡಿ.ರೇವಣ್ಣ ಹಾಗೂ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಕರಣ ದಾಖಲಾಗಿದ್ದು, ಪ್ರಕರಣವನ್ನು ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿದೆ. ಈ ಸಂಬಂಧ ಈಗಾಗಲೇ ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್, ಮೈಸೂರು ಎಸ್ಪಿ ಸೀಮಾ ಲಾಟ್ಕರ್, ಸುಮನ್ ಡಿ.ಪೆನ್ನೇಕರ್ ನೇತೃತ್ವದ ತಂಡ ತನಿಖೆ ಆರಂಭಿಸಿದೆ. ಈ ತಂಡಕ್ಕೆ ಹೆಚ್ಚುವರಿಯಾಗಿ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ ಮೂವರು ಎಸಿಪಿ ಸೇರಿ 19 ಮಂದಿ ಅಧಿಕಾರಿ-ಸಿಬ್ಬಂದಿ ನೇಮಿಸಲಾಗಿದೆ.
ಎಸ್ಐಟಿ ತಂಡದ ಅಧಿಕಾರಿಗಳು: ಬೆಂಗಳೂರು ಮಾರತ್ತಹಳ್ಳಿ ಉಪವಿಭಾಗದ ಎಸಿಪಿ ಪ್ರಿಯದರ್ಶಿನಿ ಈಶ್ವರ್ ಸಾನಿಕೊಪ್ಪ, ಸಿಸಿಬಿಯ ಎಸ್.ಬಿ.ವಿಭಾಗದ ಸತ್ಯನಾರಾಯಣ ಸಿಂಗ್, ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಪಿ ಧನ್ಯಾ ಎನ್.ನಾಯ್ಕ, ಕೆ.ಆರ್.ಪೇಟೆ ಟೌನ್ ಠಾಣೆಯ ಪಿಐ ಬಿ.ಎಸ್.ಸುಮರಾಣಿ, ಮೈಸೂರಿನ ಆಲನಹಳ್ಳಿ ಠಾಣೆಯ ಬಿ.ಎಸ್.ಸ್ವರ್ಣಾ, ಮಂಗಳೂರಿನ ಊರ್ವ ಠಾಣೆಯ ಪಿಐ ಜಿ.ಭಾರತಿ, ವೈಟ್ಫೀಲ್ಡ್ ಸಿಇಎನ್ ಠಾಣೆಯ ಪಿಐ ಎಂ.ಹೇಮಂತ್ಕುಮಾರ್, ಬೆಂಗಳೂರು ಸಿಸಿಬಿ ಪಿಐ ಜಿ.ಸಿ.ರಾಜಾ, ಮಲ್ಪೆ ಸಿಎಸ್ಪಿಯ ಪಿಎಸ್ಐ ವೈಲೆಟ್ ಪ್ಲೆಮೀನಾ, ಬೆಂಗಳೂರು ಸಿಸಿಆರ್ಬಿ ಪಿಎಸ್ಐ ವಿನುತಾ, ಚಾಮರಾಜನಗರ ಜಿಲ್ಲೆಯ ಯಳಂದೂರು ಠಾಣೆಯ ಪಿಎಸ್ಐ ನಂದೀಶ್, ಮೈಸೂರು ಜಿಲ್ಲೆಯ ಇಲವಾಲ ಠಾಣೆ ಪಿಎಸ್ಐ ಕುಮುದಾ, ಕೊಡಗು ಮಹಿಳಾ ಠಾಣೆಯ ಹೆಡ್ಕಾನ್ಸ್ಟೆಬಲ್ ಸುಮತಿ, ಹುಣಸೂರು ಠಾಣೆಯ ಹೆಡ್ಕಾನ್ಸ್ಟೆಬಲ್ ಮನೋಹರ್, ಬೆಂಗಳೂರು ಸಿಇಎನ್ ಠಾಣೆಯ ಹೆಚ್ಸಿ ಸುನೀಲ್ ಬೆಳವಗಿ, ಶಿರಸಿಯ ಎನ್ಎಂಪಿಎಸ್ ಎಚ್ಸಿ ಬಸವರಾಜ ಮೈಗೇರಿ, ಮೈಸೂರು ಸಿಇಎನ್ ಠಾಣೆಯ ಕಾನ್ಸ್ಟೆಬಲ್ಗಳಾದ ರಂಗಸ್ವಾಮಿ, ಸಿಂಧು ಎಂಬವರನ್ನು ವಿಶೇಷ ತಂಡಕ್ಕೆ ನೇಮಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.