ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Team Udayavani, May 1, 2024, 2:56 PM IST
ಗಂಗಾವತಿ: ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಜತೆ ಕೈ ಜೋಡಿದ್ದರಿಂದ ಗಂಗಾವತಿ ಹಾಗೂ ಬಳ್ಳಾರಿ ಕ್ಷೇತ್ರಕ್ಕೆ ಪ್ರಚಾರ ಆಗಮಿಸಲಿಲ್ಲ ಎಂದು ಶಾಸಕ ಬಿಜೆಪಿ ಹಿರಿಯ ಮುಖಂಡ ಗಾಲಿ ಜನಾರ್ದನ ರೆಡ್ಡಿ ಸ್ಪೋಟಕ ಸುದ್ದಿಯನ್ನು ಹೇಳಿದರು.
ಅವರು ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಪರ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದರು.
ಇಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರಿಗೆ ಸಂಸ್ಕಾರವಿಲ್ಲ. ತಂದೆ, ತಾಯಿ, ಸಹೋದರರಿಗೆ ಮೋಸ ಮಾಡಿದ ವ್ಯಕ್ತಿಯಾಗಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸಂದರ್ಭದಲ್ಲಿ ನಾನು ಹೇಳಿದಂತೆ ಬಡವರಿಗೆ ಮನೆ, ರಸ್ತೆ, ವಿದ್ಯುತ್ ಹಾಗೂ ಮಹಿಳೆಯರಿಗೆ ಜಿನ್ಸ್ ಮಾಡಿ ಕೈಗಾರಿಕೆ ಸ್ಥಾಪಿಸಲಾಗುತ್ತದೆ. ಈಗ 10 ತಿಂಗಳು ಕಳೆದಿದ್ದು, ಮುಂದೆ ಎಲ್ಲಾ ಭರವಸೆ ಈಡೇರಿಸಲಾಗುತ್ತದೆ ಎಂದರು.
ಶ್ರೀನಾಥ ಹಾಗೂ ಎಂ.ಮಲ್ಲಿಕಾರ್ಜುನ ನಾಗಪ್ಪ ಪಕ್ಷದ್ರೋಹಿ ಕೆಲಸ ಮಾಡಿದ್ದಾರೆಂದು ಪದೇ ಪದೇ ಹೇಳಿ ಆಕ್ರೋಶ ವ್ಯಕ್ತಪಡಿಸುವುದು ಸರಿಯಲ್ಲ. ಸ್ವತಃ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಅವರು ನನ್ನನ್ನು ಬೆಂಬಲಿಸಿದ್ದರು. ಎಲ್ಲಿಯೂ ಸಿದ್ದರಾಮಯ್ಯ, ಡಿ..ಕೆ.ಶಿವಕುಮಾರ್ ನನ್ನ ಬಗ್ಗೆ ಟೀಕಿಸಿಲ್ಲ ಎಂದ ಅವರು, ಗಂಗಾವತಿಯಲ್ಲಿ ಅನ್ಸಾರಿಗೆ ಖುಷಿಯಾಗಲಿ ಎಂದು ಲೋಕಸಭಾ ಚುನಾವಣೆ ಪ್ರಚಾರದಲ್ಲಿ ನನ್ನ ಬಗ್ಗೆ ಟೀಕಿಸಿ ಮಾತನಾಡಿದ್ದಾರೆ. ಲೋಕಸಭಾ ಸಮರದ ನಂತರ ಅನ್ಸಾರಿ ನಾನು ಮೊದಲು ಹೇಳಿದಂತೆ ಡಸ್ಟ್ ಬಿನ್ ಸೇರಲಿದ್ದಾರೆ. ಅವನ ಸೊಕ್ಕು ಅವನನ್ನು ತಿನ್ನಲಿದೆ ಎಂದು ಏಕ ವಚನದಲ್ಲಿ ಅನ್ಸಾರಿಯನ್ನು ಟೀಕಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಸಿ.ಟಿ.ರವಿ, ಅಭ್ಯರ್ಥಿ ಡಾ.ಬಸವರಾಜ, ಮಾಜಿ ಶಾಸಕ ಪರಣ್ಣ ಮುನವಳ್ಳಿ, ಜಿ.ವೀರಪ್ಪ, ತಿಪ್ಪೇರುದ್ರಸ್ವಾಮಿ, ಸಿದ್ದರಾಮಯ್ಯ ಸ್ವಾಮಿ, ಸೈಯದ್ ಅಲಿ, ವಿರೂಪಾಕ್ಷಪ್ಪ ಸಿಂಗನಾಳ, ಅಮರಜ್ಯೋತಿ ನರಸಪ್ಪ, ರಾಘವೇಂದ್ರ ಶೆಟ್ಟಿ, ವೀರಭದ್ರ ನಾಯಕ, ಹನುಮಂತಪ್ಪ ನಾಯಕ, ಆರ್ಹಾಳ ಡ್ಯಾಗಿ ರುದ್ರೇಶ, ಶ್ರವಣಕುಮಾರ ರಾಯಕರ್ ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
ಕರ್ನಾಟಕಕ್ಕೆ ಬೇಕಿದೆ ಕೇರಳ ಮಾದರಿ ಶಿಕ್ಷಣ: ಶಾಸಕ ಹಿಟ್ನಾಳ
ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ
Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ಅದಾಲತ್ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.