ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ


Team Udayavani, May 1, 2024, 4:11 PM IST

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೂ ಕಳೆದ ಬಾರಿಗೆ ಹೋಲಿಸಿದರೆ ಈ ವರ್ಷ ಅಗ್ನಿ ಆಕಸ್ಮಿಕ ಪ್ರಮಾಣ ಸ್ವಲ್ಪ ಇಳಿಮುಖವಾಗಿದೆ. ಅಲ್ಲಲ್ಲಿ ಗುಡ್ಡಗಳಿಗೆ, ಕುರುಚಲು ಪೊದೆಗಳಿಗೆ ಸಹಿತ ವಿವಿಧ ಸ್ಥಳಗಳಿಗೆ ಬೆಂಕಿ ಬೀಳುವ ಪ್ರಕರಣಗಳು ವರದಿಯಾಗುತ್ತಿದ್ದರೂ ಈ ಪ್ರಮಾಣ ಕಳೆದ ವರ್ಷದಷ್ಟಿಲ್ಲ.

2023ರಲ್ಲಿ ಈ ಅವಧಿಯಲ್ಲಿ ದ.ಕ. ಜಿಲ್ಲೆಯಲ್ಲಿ ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿತ್ತು. ಆದರೆ ಈ ಬಾರಿ 666 ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂದ ಕರೆಗಳಿಗೆ ಅಗ್ನಿ ಶಾಮಕದಳ ಸ್ಪಂದಿಸಿದೆ. ಪುತ್ತೂರಿನಲ್ಲಿ 137 ಮತ್ತು ಬಂಟ್ವಾಳದಲ್ಲಿ 112 ಪ್ರಕರಣಗಳು ವರದಿಯಾಗಿದ್ದು, ಕಳೆದ ವರ್ಷ ಸುಳ್ಯ ಹೊರತು ಪಡಿಸಿ ಇತರ ಠಾಣೆಗಳಲ್ಲಿ 100- 200ರಷ್ಟು ಪ್ರಕರಣಗಳು ದಾಖಲಾಗಿತ್ತು.

ಪ್ರಸ್ತುತ ದಿನಕ್ಕೆ ಜಿಲ್ಲೆಯಲ್ಲಿ ಸರಾಸರಿ 10-12 ಕರೆಗಳು ಬರುತ್ತಿದ್ದು, ಕೆಲವು ಸಣ್ಣ ಅಗ್ನಿ ಅವಘಡಗಳಲ್ಲಿ ಸ್ಥಳೀಯರೇ ಬೆಂಕಿ ನಂದಿಸುತ್ತಾರೆ. “ಗುಡ್ಡದಲ್ಲಿ ಮುಳಿ ಹುಲ್ಲಿಗೆ ಬೆಂಕಿ ಬಿದ್ದಿದೆ’ ಎನ್ನುವ ಕರೆಗಳೇ ಅಧಿಕ. ಕಳೆದ ವರ್ಷ ಪಚ್ಚನಾಡಿ ತ್ಯಾಜ್ಯ ವಿಲೇವಾರಿ ಘಟಕ ಪ್ರದೇಶದಲ್ಲಿಯೇ ನಾಲ್ಕೈದು ಬಾರಿ ಅಗ್ನಿ ಅವಘಡ ಸಂಭವಿಸಿತ್ತು. ಈ ಬಾರಿ ಒಮ್ಮೆ ಮಾತ್ರ ಬೆಂಕಿ ಆಕಸ್ಮಿಕ ಉಂಟಾಗಿದೆ.

ಕೆಲವು ಕಡೆಗಳಲ್ಲಿ ಸಾರ್ವಜನಿಕರೇ ಕಳೆ ಗಿಡ ನಾಶಮಾಡುವ ಉದ್ದೇಶಕ್ಕೆ ಬೆಂಕಿ ಹಚ್ಚುತ್ತಾರೆ. ಹೆಚ್ಚು ವ್ಯಾಪಿಸಿದಾಗ ಆರಿಸಲು ಸಾಧ್ಯವಾಗದೆ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ ಪ್ರಕರಣಗಳೂ ಇವೆ. ಗಾಳಿಗೆ ವಿದ್ಯುತ್‌ ತಂತಿಗಳು ಒಂದಕ್ಕೊಂದು ತಾಗಿ ಕಿಡಿ ಉಂಟಾಗಿ ಬೆಂಕಿ ಬೀಳುತ್ತವೆ ಎನ್ನುತ್ತಾರೆ ಅಧಿಕಾರಿಗಳು.

ಮಳೆಯಾದರೆ ಸಮಸ್ಯೆ ದೂರ
ಬೇಸಗೆ ಮಳೆ ಆರಂಭವಾದರೆ ಬೆಂಕಿ ಅವಘಡ ಪ್ರಕರಣಗಳಿಗೆ ಮುಕ್ತಿ ದೊರೆಯಲಿದೆ. ಒಂದೆರಡು ಮಳೆ ಯಾದರೆ ಒಣಗಿರುವ ಹುಲ್ಲು, ಪೊದೆಗಳು ಮತ್ತೆ ಚಿಗುರಿ ಬೆಂಕಿ ಅವಘಡಗಳು ಕಡಿಮೆಯಾಗುತ್ತವೆ. ಕಾಡಿಗೆ ಬೆಂಕಿ ಬೀಳುವ ಪ್ರಕರಣಗಳೂ ಇದರಿಂದ ಕಡಿಮೆಯಾಗುತ್ತದೆ ಎನ್ನುತ್ತಾರೆ ಠಾಣಾ ಸಿಬಂದಿ.

ಅಗ್ನಿಶಮನ ವಾಹನಗಳ ಸಂಖ್ಯೆ ಕಡಿಮೆ
ಕೇಂದ್ರ ಸರಕಾರದ ಗುಜರಿ ನೀತಿಯ ಅನ್ವಯ 15 ವರ್ಷಗಳ ಹಳೆಯ ಡೀಸೆಲ್‌ ವಾಹನಗಳನ್ನು ವಿವೇವಾರಿ ಮಾಡ ಬೇಕಾಗಿದ್ದು, ಇದರಿಂದಾಗಿ ವಾಹನಗಳ ಅಗ್ನಿಶಮನ ವಾಹನಗಳ ಸಂಖ್ಯೆ ಕಡಿಮೆಯಾಗಿದೆ. ಮಂಗಳೂರು ನಗರ ಹೊರತುಪಡಿಸಿ ಇತರ ಠಾಣೆಗಳಲ್ಲಿ ಒಂದೊಂದೇ ವಾಹನಗಳು ಇವೆ. ಪಾಂಡೇಶ್ವರದಲ್ಲಿ ಸದ್ಯ 2 ವಾಹನ ಇದೆ. ತುರ್ತು ಸಂದರ್ಭ ಬಂದಾಗ ಪಕ್ಕದ ಠಾಣೆಯಿಂದ ವಾಹನ ಪಡೆಯಲಾಗುತ್ತಿದೆ. ಹೊಸ ವಾಹನಗಳ ಖರೀದಿ ಪ್ರಕ್ರಿಯೆ ರಾಜ್ಯಮಟ್ಟದಲ್ಲಿ ನಡೆಯುತ್ತಿದ್ದು, ಶೀಘ್ರ ವಾಹನಗಳು ಬರುವ ನಿರೀಕ್ಷೆಯಿದೆ. ವಿಮಾನ ನಿಲ್ದಾಣ, ಎನ್‌ಎಂಪಿಎ, ಎಂಆರ್‌ಪಿಎಲ್‌, ಎಂಸಿಎಫ್‌, ಕೆಐಒಸಿಎಲ್‌ ಮೊದಲಾದ
ಸಂಸ್ಥೆಗಳಲ್ಲಿರುವ ಅತ್ಯಾಧುನಿಕ ವಾಹನ ಗಳನ್ನೂ ತುರ್ತು ಸಂದರ್ಭದಲ್ಲಿ ಪಡೆಯ ಲಾಗುತ್ತದೆ ಎಂದು ಅಧಿಕಾರಿಗಳು
ತಿಳಿಸಿದ್ದಾರೆ.

ಕಳೆದ ವರ್ಷ ಬೆಂಕಿ ದುಪ್ಪಟ್ಟು
ಕಳೆದ ವರ್ಷ ಇದೇ ಅವಧಿಯಲ್ಲಿ 1,180 ಪ್ರಕರಣಗಳು ದಾಖಲಾಗಿತ್ತು. ಪಾಂಡೇಶ್ವರ 161, ಕದ್ರಿ 232, ಮೂಡುಬಿದಿರೆ 161, ಬೆಳ್ತಂಗಡಿ 131, ಪುತ್ತೂರು 206, ಸುಳ್ಯ 82 ಪ್ರಕರಣಗಳು ವರದಿಯಾಗಿತ್ತು. 2022ರಲ್ಲಿ ಇಡೀ ವರ್ಷದಲ್ಲಿ 773 ಕರೆಗಳು, 2021ರಲ್ಲಿ 507 ಮತ್ತು 2020ರಲ್ಲಿ 823 ಕರೆಗಳು ದಾಖಲಾಗಿತ್ತು.

ಸ್ವಲ್ಪ ಕಡಿಮೆ
ಬಿಸಿಲ ಬೇಗೆ ಕಳೆದ ವರ್ಷಕ್ಕೆ ಹೋಲಿಸಿದರೆ ಇಲ್ಲಿಯವರೆಗೆ ಅಗ್ನಿ ಅವಘಡ ಪ್ರಕರಣಗಳು ಸ್ವಲ್ಪ ಕಡಿಮೆ ಇದೆ. ಪ್ರತೀ ದಿನ 10-12 ಪ್ರಕರಣಗಳು ಕರೆಗಳು ಬರುತ್ತಿವೆ. ಕಳೆದ ವರ್ಷ 30-40 ಕರೆಗಳು ಬರುತಿತ್ತು. ಗುಡ್ಡಗಳಲ್ಲಿ ಮುಳಿಹುಲ್ಲಿಗೆ ಬೆಂಕಿ ಬೀಳುವ ಪ್ರಕರಣಗಳು ಸ್ವಲ್ಪ ಹೆಚ್ಚಿವೆ.
ಭರತ್‌ ಕುಮಾರ್‌ ದ.ಕ. ಜಿಲ್ಲಾ
ಅಗ್ನಿಶಾಮಕ ಅಧಿಕಾರಿ, ಪಾಂಡೇಶ್ವರ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.