Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Team Udayavani, May 1, 2024, 6:33 PM IST
ಚೆನ್ನೈ: ದಳಪತಿ ವಿಜಯ್ ರಾಜಕೀಯ ರಂಗಕ್ಕೆ ಧುಮುಕಿದ್ದಾರೆ. ಸಿನಿಮಾರಂಗದಲ್ಲಿ ಹೈಪ್ ಹೆಚ್ಚಿರುವಾಗಲೇ ಅವರು ರಾಜಕೀಯ ಅಖಾಡಕ್ಕೆ ಎಂಟ್ರಿ ಆಗಿರುವುದು ಅವರ ಕೆಲ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.
ಕೊನೆಯ ಎರಡು ಸಿನಿಮಾಗಳನ್ನು ಮಾಡಿದ ಬಳಿಕ ಅವರು, 2026 ರ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಆ ಬಳಿಕ ಸಂಪೂರ್ಣವಾಗಿ ರಾಜಕೀಯ ರಂಗದಲ್ಲಿ ತೊಡಗಿಕೊಳ್ಳುವುದಾಗಿ ವಿಜಯ್ ಹೇಳಿದ್ದಾರೆ.
ಸದ್ಯ ವಿಜಯ್ ವೆಂಕಟ್ ಪ್ರಭು ನಿರ್ದೇಶನದ ʼ ಗೋಟ್ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಬಗ್ಗೆ ಹೈಪ್ ಹೆಚ್ಚಾಗಿದೆ. ಇತ್ತೀಚೆಗೆ ʼವಿಜಿಲ್ ಪೋಡ್ʼ ಎನ್ನುವ ಮೊದಲ ಸಿಂಗಲ್ ಹಾಡನ್ನು ರಿಲೀಸ್ ಮಾಡಲಾಗಿದೆ.
ಇದೀಗ ಸಿನಿಮಾದ ಬಗ್ಗೆ ಮತ್ತೊಂದು ಅಪ್ಡೇಟ್ ವೊಂದು ಕಾಲಿವುಡ್ ನಲ್ಲಿ ಹರಿದಾಡಿದೆ. ವಿಜಯ್ ಅವರ ʼಗೋಟ್ʼ ಸಿನಿಮಾದಲ್ಲಿ ನಟ ಅಜ್ಮಲ್ ಅವರು ಪಾತ್ರವೊಂದನ್ನು ಮಾಡಲಿದ್ದಾರೆ.
ಇತ್ತೀಚೆಗೆ ಅವರು ಯೂಟ್ಯೂಬ್ ಚಾನೆಲ್ ವೊಂದಕ್ಕೆ ಸಂದರ್ಶನದಲ್ಲಿ ಕುತೂಹಲಕಾಗಿ ವಿಚಾರವನ್ನು ಹೇಳಿದ್ದಾರೆ.
“ಚೆನ್ನೈ ಸೂಪರ್ ಕಿಂಗ್ಸ್ ಆಟಗಾರರು ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆಯೇ?” ಎನ್ನುವ ಪ್ರಶ್ನೆಯೊಂದನ್ನು ಕೇಳಲಾಗಿದೆ. ಇದಕ್ಕೆ ಒಂದು ಕ್ಷಣ ತುಟಿ ಬಿಚ್ಚದ ಅವರು, ಆ ಬಳಿಕ ಇಂಥ ವಿಚಾರವನ್ನು ಪ್ರೂಡಕ್ಷನ್ ಹೌಸ್ ಅಧಿಕೃತವಾಗಿ ಹೇಳುತ್ತಾರೆ ಎಂದು ಹೇಳುವ ಮೂಲಕ ಕುತೂಹಲವನ್ನು ಹಾಗೆಯೇ ಬಿಟ್ಟಿದ್ದಾರೆ.
ಅಜ್ಮಲ್ ಈ ಪ್ರಶ್ನೆ ಇಲ್ಲವೆನ್ನುವ ಉತ್ತರವನ್ನು ಹೇಳದ ಕಾರಣ, ಸಿನಿಮಾದಲ್ಲಿ ಧೋನಿ ಹಾಗೂ ರುತ್ ರಾಜ್ ಗಾಯಕ್ವಾಡ್ ಅವರು ನಟಿಸುತ್ತಾರೆ ಎಂದು ಹರಿದಾಡುತ್ತಿದ್ದ ವದಂತಿ ಮತ್ತಷ್ಟು ಬಲಗೊಂಡಂತಾಗಿದೆ.
ಇತ್ತೀಚೆಗೆ ರುತ್ ರಾಜ್ ʼಲಿಯೋʼ ಸಿನಿಮಾವನ್ನು ಓಟಿಟಿಯಲ್ಲಿ ನೋಡಿ ಖುಷಿಪಟ್ಟಿದ್ದರು. ಧೋನಿ ಈಗಾಗಲೇ ನಿರ್ಮಾಪಕರಾಗಿ ಸಿನಿರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹಾಗಾಗಿ ಈ ಇಬ್ಬರು ಸಿನಿಮಾದಲ್ಲಿ ಸಣ್ಣ ಪಾತ್ರ ಮಾಡಿದರೆ ಅಚ್ಚರಿಪಡಬೇಕಿಲ್ಲ.
ಇದೇ ವರ್ಷದ ಸೆ.5 ರಂದು ʼಗೋಟ್ʼ ಸಿನಿಮಾ ರಿಲೀಸ್ ಆಗಲಿದೆ. ಸಿನಿಮಾದಲ್ಲಿ ವಿಜಯ್ ಜೊತೆ ಮೀನಾಕ್ಷಿ ಚೌಧರಿ, ಯೋಗಿ ಬಾಬು, ಜಯರಾಮ್, ಪ್ರಭುದೇವ, ಲೈಲಾ ಮುಂತಾದವರು ಕಾಣಿಸಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amaran trailer: ಮೇಜರ್ ಮುಕುಂದ್ ಸಾಹಸಗಾಥೆಗೆ ಜೀವ ತುಂಬಿದ ಶಿವಕಾರ್ತಿಕೇಯನ್
Actor: ಮಾಜಿ ಪತ್ನಿ ದೂರಿನಿಂದ ಅರೆಸ್ಟ್ ಆದ ಕೆಲ ದಿನಗಳಲ್ಲೇ 3ನೇ ಮದುವೆಯಾದ ಖ್ಯಾತ ನಟ
The Raja Saab: ಹುಟ್ಟುಹಬ್ಬಕ್ಕೆ ʼರಾಜಾಸಾಬ್ʼ ಆಗಿ ಸಿಂಹಾಸನದಲ್ಲಿ ಕೂತ ರೆಬೆಲ್ ಸ್ಟಾರ್
Toxic Movie: ‘ಟಾಕ್ಸಿಕ್ʼ ರಿಲೀಸ್ ಡೇಟ್ ಮುಂದೂಡಿಕೆ ಅಧಿಕೃತ; ಯಶ್ ಹೇಳಿದ್ದೇನು?
Actor Yash: ‘ಕೆಜಿಎಫ್-3ʼ ಬಗ್ಗೆ ಯಶ್ ಕೊಟ್ರು ಬಿಗ್ ಅಪ್ಡೇಟ್; ಯಾವಾಗ ಬರಲಿದೆ ಸಿನಿಮಾ?
MUST WATCH
ಹೊಸ ಸೇರ್ಪಡೆ
BBK11: ಮತ್ತೆ ʼಬಿಗ್ಬಾಸ್ʼ ಕಾರ್ಯಕ್ರಮದ ವಾಹಿನಿಗೆ ಬಂದ ಲಾಯರ್ ಜಗದೀಶ್; ವೀಕ್ಷಕರು ಖುಷ್
Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!
INDvsNZ: ರಾಹುಲ್, ಕುಲದೀಪ್, ಸಿರಾಜ್ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ
Muddebihal: ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು
Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.