![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, May 2, 2024, 10:24 AM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ವಿರುದ್ಧ ಕಿಡಿಕಾರಿದ್ದು, ಬಿಜೆಪಿ ಹೊರತುಪಡಿಸಿ, ಇನ್ಯಾವುದೇ ವಿರೋಧ ಪಕ್ಷಗಳು ಲೋಕಸಭೆಯ 272 ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ. ಸರ್ಕಾರ ರಚಿಸಲು 272 ಸ್ಥಾನಗಳ ಅಗತ್ಯವಿದೆ ಎಂದು ಹೇಳಿದರು.
ಇದನ್ನೂ ಓದಿ:ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ
ಗುಜರಾತ್ ನ ದೀಶಾದಲ್ಲಿ ಮುಂಬರುವ 3ನೇ ಹಂತದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಒಂದು ವೇಳೆ ನಿಮಗೆ ಸರ್ಕಾರ ರಚಿಸುವ ಬಯಕೆ ಇದ್ದಿದ್ದರೆ, ಕನಿಷ್ಠ 272 ಸ್ಥಾನಗಳ ಅಗತ್ಯವಿದೆ. ಆದರೆ ಬಿಜೆಪಿ ಹೊರತುಪಡಿಸಿ, ಇತರ ಯಾವುದೇ ರಾಜಕೀಯ ಪಕ್ಷ ದೇಶದ 272 ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ. ಆದರೂ ತಾವೇ ಸರ್ಕಾರ ರಚಿಸುವುದಾಗಿ ವಿಪಕ್ಷಗಳು ಹೇಳುತ್ತಿವೆ ಎಂದು ವ್ಯಂಗ್ಯವಾಡಿದರು.
ದೆಹಲಿಯ ಐಶಾರಾಮಿ ಕುಟುಂಬಗಳು ಕೂಡಾ ಕಾಂಗ್ರೆಸ್ ಗೆ ಮತ ಹಾಕಲ್ಲ, ಅಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಲ್ಲ. ಭರೂಛ್ ನಲ್ಲಿ ಅಹ್ಮದ್ ಪಟೇಲ್ ಕುಟುಂಬ ಕಾಂಗ್ರೆಸ್ ಗೆ ಮತ ಹಾಕಲ್ಲ. ಭಾವ್ ನಗರದಲ್ಲಿಯೂ ದೊಡ್ಡ ಕಾಂಗ್ರೆಸ್ ಮುಖಂಡರಿಗೆ ಕಾಂಗ್ರೆಸ್ ಗೆ ಮತ ಹಾಕಲು ಸಾಧ್ಯವಾಗುತ್ತಿಲ್ಲ…ಇದು ಗುಜರಾತ್ ನಲ್ಲಿ ಕಾಂಗ್ರೆಸ್ ನ ಸ್ಥಿತಿ ಎಂದು ಪ್ರಧಾನಿ ಮೋದಿ ಟೀಕಿಸಿದರು.
2014ರಲ್ಲಿ ಟೀ ಮಾರಾಟಗಾರ ಎಂದು ಕಾಂಗ್ರೆಸ್ ಪಕ್ಷ ನನ್ನ ಟೀಕಿಸಿತ್ತು. ಆದರೆ ಅದಕ್ಕೆ ದೇಶದ ಜನ ತಕ್ಕ ಉತ್ತರ ನೀಡಿದ್ದಾರೆ. ದೇಶದಲ್ಲಿ 400 ಸ್ಥಾನ ಗಳಿಸಿದ್ದ ಕಾಂಗ್ರೆಸ್ ಪಕ್ಷ ಇಂದು ಕೇವಲ 40ಕ್ಕೆ ಕುಸಿದಿದೆ ಎಂದು ಪ್ರಧಾನಿ ಮೋದಿ ಕುಹಕವಾಡಿದರು.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.