Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ
Team Udayavani, May 2, 2024, 12:21 PM IST
ಕೊಪ್ಪಳ: ದೇಶದಲ್ಲಿ ಮತ್ತೊಮ್ಮೆ ಮೋದಿ ಎನ್ನುವ ಮಾತು ಕೇಳಿ ಬಂದಿದೆ. ಪಾಕಿಸ್ತಾನದಲ್ಲಿ ಮೋದಿ ಬಗ್ಗೆ ಚರ್ಚೆಯಾಗಿದೆ. ವಿದೇಶ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ ಎಂದು ಕೊಪ್ಪಳದಲ್ಲಿ ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಲೋಕಸಭಾ ಚುನಾವಣೆ ನಡೆಯುತ್ತಿದೆ. ಕೊಪ್ಪಳ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ರಾಜಕೀಯ ಕುಟುಂಬದಿಂದ ಬಂದಿದ್ದಾರೆ. ಅಭ್ಯರ್ಥಿ ತಂದೆ ಕೆ ಶರಣಪ್ಪ ಅವರು ಶಾಸಕರಾಗಿ, ಕೆಕೆಆರ್ಡಿಬಿ ಮಂಡಳಿ ಅಧ್ಯಕ್ಷರಾಗಿದ್ದವರು. ನಮ್ಮ ಅಭ್ಯರ್ಥಿ ಗೆಲ್ಲಲು ಪ್ರತಿಯೊಬ್ಬರು ಶ್ರಮಿಸಬೇಕು ಎಂದರು.
ನಾನು ಕಲ್ಯಾಣ ಭಾಗದಲ್ಲಿ ಪ್ರಚಾರ ಆರಂಭ ಮಾಡಿರುವೆ. ಬಿಜೆಪಿಯಲ್ಲಿ 28 ವರ್ಷ ನಾನು ಕೆಲಸ ಮಾಡಿರುವೆ. ಒಳ ಮೀಸಲಾತಿ ಚರ್ಚೆ ಮುನ್ನೆಲೆ ಇದ್ದಾಗ ಯಾವ ರಾಜಕೀಯ ಪಕ್ಷ ಸ್ಪಂದನೆ ಮಾಡುವೆವು ಎಂದಿದ್ದಾಗ ಬೊಮ್ಮಾಯಿ ಸ್ಪಂದನೆ ಮಾಡಿದರು. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚುಮಾಡಲಿಲ್ಲ. ಬೊಮ್ಮಾಯಿ ಸರ್ಕಾರ ದಲಿತರ ಮೀಸಲಾತಿ ಶೇ. 15 ರಿಂದ 17 ಪ್ರತಿಶತ ಹೆಚ್ಚಳ ಮಾಡಿದರು. ಮಾದಿಗರೊಂದಿಗೆ ಮೋದಿ ಎನ್ನುವ ಮಾತು ಕೇಳಿ ಬಂದಿದೆ ಎಂದರು.
ಗ್ಯಾರಂಟಿಯಿಂದ ಗೆಲ್ಲುತ್ತೇವೆ ಎಂದು ಕಾಂಗ್ರೆಸ್ ಹೇಳುತ್ತೆದೆ. ಪ್ರಸ್ತುತ ಹಣ, ಅಧಿಕಾರ ದುರುಪಯೋಗ ನಡೆದಿದೆ. ಮೋದಿ ಗ್ಯಾರಂಟಿ ಎಲ್ಲರಿಗೂ ಯೋಜನೆ ಕೊಟ್ಟಿದೆ. ಕಾಂಗ್ರೆಸ್ ದಲಿತರಿಗೆ ಮೀಸಲಿಟ್ಟ ಹಣ ಬಳಕೆ ಮಾಡಿಕೊಂಡಿದ್ದಾರೆ. ಸಂವಿಧಾನ ಬದಲಾವಣೆ ಸಾಧ್ಯವಿಲ್ಲ ಎಂದು ಮೋದಿ ಹೇಳಿದ್ದಾರೆ ಎಂದರು.
ವಿಷ್ಣು ಭಕ್ತರು, ಈಶ್ವರನ ಭಕ್ತರು ಎಂದ ಖರ್ಗೆ ಹೇಳಿಕೆ ವಿಚಾರಕ್ಕೆ ಮಾತನಾಡಿದ ಸಚಿವರು, ಕಾಂಗ್ರೆಸ್ ದೇಶ ಇಬ್ಬಾಗ ಮಾಡಲು ಹೊರಟಿದೆ. ಪಕ್ಷಗಳು ಧರ್ಮಗಳನ್ನು ಇಬ್ಬಾಗ ಮಾಡಬಾರದು. ನಾವೇ ಎಸ್ಸಿಪಿ-ಟಿಎಸ್ಪಿ ಕಾಯ್ದೆ ತರಲು ನಾವು ಸಿದ್ದತೆ ಮಾಡಿಕೊಂಡಿದ್ದೆವು. ಆದರೆ ನಮ್ಮ ಸರ್ಕಾರದ ಅವಧಿ ಮುಗಿಯಿತು. ನಾವು ದಲಿತರ ಪರವಾಗಿದ್ದೇವೆ ಎಂದರು.
ಪ್ರಜ್ವಲ್ ರೇವಣ್ಣ ಪ್ರಕರಣ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿದೆ. ತನಿಖೆ ಹಂತದಲ್ಲಿ ನಾವು ಏನೂ ಹೇಳಲು ಬರುವುದಿಲ್ಲ ಎಂದರು.
ಸುದ್ದಿಗೋಷ್ಠಿಯಲ್ಲಿ ಎಂಎಲ್ಸಿ ಹೇಮಲತಾ ನಾಯಕ್, ಮೈತ್ರಿ ಪಕ್ಷದ ಸಿ ವಿ ಚಂದ್ರಶೇಖರ, ಮಹಾಂತೇಶ ಮೈನಳ್ಳಿ, ವೆಂಕಟೇಶ ಹಾಲವರ್ತಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ
CM ಸಿದ್ದರಾಮಯ್ಯನವರಿಗೆ ಗಂಗಾವತಿಯಲ್ಲಿ ಅದ್ದೂರಿಯ ಸ್ವಾಗತ
Koppala; ‘ಒಂದು ವರ್ಷ ಅವಕಾಶ ಕೊಡಿ’ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
ಕುಷ್ಟಗಿ: ಹೆಚ್ಚಿದ ಕಾರ್ಯಭಾರ-ಒತ್ತಡದಲ್ಲಿ ಪೊಲೀಸ್ ಸಿಬ್ಬಂದಿ
Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.