Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Team Udayavani, May 2, 2024, 4:15 PM IST
ಗ್ರೇಟರ್ ನೋಯ್ಡಾ: ಹಾಡಹಗಲೇ ಮಹಿಳೆಯೊಬ್ಬರು ಹೋಟೆಲ್ ಮಾಲೀಕನ ಮಗನನ್ನು ಅಪಹರಿಸಿದ ಭಯಾನಕ ಘಟನೆ ಗ್ರೇಟರ್ ನೋಯ್ಡಾದ ಕೊತ್ವಾಲಿ ಬಿಟಾ 2 ಪ್ರದೇಶದಲ್ಲಿ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ ಬುಧವಾರ ಮಧ್ಯಾಹ್ನ ಘಟನೆ ನಡೆದಿರುವುದಾಗಿ ಹೇಳಿಕೊಂಡಿದ್ದು ಇದಕ್ಕೆ ಸಂಬಂಧಿಸಿದ ಸಿಸಿಟಿವಿ ಫೂಟೇಜ್ ಕೂಡ ಪೊಲೀಸರಿಗೆ ಸಿಕ್ಕಿದ್ದು ಅದರಲ್ಲಿ ಬಿಳಿ ಬಣ್ಣದ ಸ್ಕೊಡಾ ಕಾರೊಂದು ಹೋಟೆಲ್ ಬಳಿಯಲ್ಲಿ ನಿಂತ್ತಿದ್ದು ಮಹಿಳೆಯೊಬ್ಬರು ಕಾರಿನಿಂದ ಇಳಿದು ಹೋಟೆಲ್ ಕಡೆ ತೆರಳಿ ಕೆಲ ಹೊತ್ತಿನ ಬಳಿಕ ಹೋಟೆಲ್ ಮಾಲೀಕನ ಹದಿನೈದು ವರ್ಷದ ಮಗನ ಜೊತೆ ಕಾರಿನ ಬಳಿ ಬಂದಿದ್ದಾಳೆ ಈ ವೇಳೆ ಕಾರಿನಿಂದ ಸ್ವಲ್ಪ ದೂರದಲ್ಲಿ ಬಿಳಿ ಬಣ್ಣದ ಶರ್ಟ್ ಧರಿದಿದ್ದ ವ್ಯಕ್ತಿಯೊಬ್ಬರು ನಿಂತಿದ್ದು ಬಾಲಕ ಕಾರಿನಲ್ಲಿ ಕುಳಿತ ಕೂಡಲೇ ಬಿಳಿ ಬಣ್ಣದ ಧಿರಿಸು ಧರಿಸಿದ್ದ ವ್ಯಕ್ತಿ ಕೂಡ ಅವಸರದಲ್ಲಿ ಕಾರಿನಲ್ಲಿ ಕೂತು ವೇಗವಾಗಿ ತೆರಳುವ ದೃಶ್ಯ ಸೆರೆಯಾಗಿದೆ.
ಇತ್ತ ಹೋಟೆಲ್ ನಲ್ಲಿ ಮಗ ಕಾಣದೇ ಇದ್ದಾಗ ಮಗನ ಮೊಬೈಲ್ ಗೆ ತಂದೆ ಕರೆ ಮಾಡಿದ್ದಾರೆ ಆದರೆ ಮೊಬೈಲ್ ಸ್ವಿಚ್ ಆಫ್ ಆಗಿತ್ತು ಇದರಿಂದ ಗಾಬರಿಗೊಂಡ ತಂದೆ ಸಿಸಿಟಿವಿ ಪರಿಶೀಲನೆ ನಡೆಸಿದಾಗ ಮಹಿಳೆಯೊಬ್ಬರು ಮಗನನ್ನು ಕರೆದುಕೊಂಡು ಹೋಗಿರುವುದು ಕಂಡು ಬಂದಿದೆ ಬಳಿಕ ಮನೆ, ಸಂಬಂದಿಕರ ಮನೆ ಹೀಗೆ ಆತನ ಸ್ನೇಹಿತರ ಮನೆಗೆಲ್ಲಾ ಕರೆ ಮಾಡಿದರೂ ಮಗನ ಪತ್ತೆಯಾಗಲಿಲ್ಲ ಇದರಿಂದ ಆತಂಕಗೊಂಡ ತಂದೆ ಪೊಲೀಸ್ ಠಾಣೆಗೆ ಬಂದು ತನ್ನ ಮಗನನ್ನು ಯಾರೋ ಅಪಹರಣ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ.
ದೂರು ಸ್ವೀಕರಿಸಿದ ಪೊಲೀಸರು ಬಾಲಕನ ಪತ್ತೆಗೆ ಮೂರು ತಂಡ ರಚಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು
📽️ On Camera, 15-Year-Old Boy Kidnapped By Woman In Greater Noida https://t.co/zpgaB5yNla pic.twitter.com/sXvao9UEPd
— NDTV (@ndtv) May 2, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.