DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
Team Udayavani, May 3, 2024, 6:30 AM IST
ಕಲಬುರಗಿ: ಪ್ರಧಾನಿ ಮೋದಿ ಇತ್ತೀಚೆಗೆ ಪ್ರಜ್ವಲ್ ರೇವಣ್ಣ ಕೈ ಹಿಡಿದು ಅವರ ಪರ ಮತಯಾಸಿದ್ದಕ್ಕೆ ನಾವು ಪೆನ್ಡ್ರೈವ್ ವಿಚಾರದಲ್ಲಿ ಪಿಎಂಗೆ ಪ್ರಶ್ನೆ ಮಾಡುತ್ತಿದ್ದೇವೆ. ಪೆನ್ಡ್ರೈವ್ ವಿಚಾರದಲ್ಲಿ ಪ್ರಧಾನಿಯನ್ನು ಏಕೆ ಎಳೆದು ತರುತ್ತೀರಿ ಎನ್ನುವ ಕುಮಾರಸ್ವಾಮಿ ಇದನ್ನು ಅರಿತುಕೊಳ್ಳಲಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್. ಅಶೋಕ್ ಸಂವಿಧಾನದ ಹುದ್ದೆಯಲ್ಲಿದ್ದವರು. ಬೇರೆ ವಿಚಾರಗಳಲ್ಲಿ ವಾಗ್ಧಾಳಿ ಮಾಡುತ್ತಿದ್ದವರು ಈ ಪ್ರಕರಣದಲ್ಲಿ ಏಕೆ ಮಾತನಾಡುತ್ತಿಲ್ಲ. ಏಕೆ ಬಂಧಿಸಲಿಲ್ಲವೆಂದರೆ ಹೇಗೆ? ಮೊದಲು ತಮ್ಮ ಪಕ್ಷದ ಅಧ್ಯಕ್ಷರಾದ ವಿಜಯೇಂದ್ರ, ಶೋಭಕ್ಕ, ಸಿ.ಟಿ.ರವಿ, ಸುನೀಲ್ ಕುಮಾರ್ ಸೇರಿದಂತೆ ಪ್ರಮುಖ ನಾಯಕರನ್ನು ಕರೆದುಕೊಂಡು ಹೋಗಿ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಲಿ. ಮಹಿಳೆಯರ ಬಗ್ಗೆ ಗೌರವ ಇದೆ ಎನ್ನುವ ಕುಮಾರಸ್ವಾಮಿ ಹಾಗೂ ದೇವೇಗೌಡರು ಕೂಡ ಸಂತ್ರಸ್ತರ ಮನೆಗೆ ಹೋಗಿ ಧೈರ್ಯ ತುಂಬಲಿ. ಆರ್.ಅಶೋಕ್, ಪ್ರಜ್ವಲ್ ನಮ್ಮ ಬೆಂಬಲದಲ್ಲಿ ಗೆದ್ದ ಸಂಸದ ಎಂದಿದ್ದಾರೆ. ಹೌದು, ಅವರು ನಮ್ಮ ಬೆಂಬಲದಲ್ಲಿ ಗೆದ್ದ ಸಂಸದ. ಹೀಗಾಗಿ ನಾವು ಪ್ರಶ್ನೆ ಮಾಡುತ್ತಿದ್ದೇವೆ. ಈಗ ನಿಮ್ಮ ಬೆಂಬಲದೊಂದಿಗೆ ಅಭ್ಯರ್ಥಿಯಾಗಿದ್ದಾರಲ್ಲ, ನೀವೇಕೆ ಮೌನವಾಗಿದ್ದೀರಿ ಎಂದರು.
ಕಾರ್ತಿಕ್ನನ್ನು ವಿದೇಶಕ್ಕೆ ಕಳುಹಿಸಲು ನನಗೇನು ತಲೆ ಕೆಟ್ಟಿದೆಯಾ?: ಡಿಕೆಶಿ
ಕಲಬುರಗಿ: ಕಾರ್ತಿಕ್ ಅವರನ್ನು ಮಲೇಷ್ಯಾದಲ್ಲಿ ಇಟ್ಟವರು ಯಾರು ಎಂಬುದನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸರ್ಕಾರಕ್ಕೆ ಕೇಳಿ ಮಾಹಿತಿ ಪಡೆಯಲಿ. ಅವರನ್ನು ವಿದೇಶಕ್ಕೆ ಕಳುಹಿಸಲು ನನಗೆ ತಲೆ ಕೆಟ್ಟಿದೆಯಾ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನೇರವಾಗಿ ಹೋರಾಟ ಮಾಡುತ್ತೇನೆ. ಯಾರನ್ನೋ ತೋಟದಲ್ಲಿ ಬಚ್ಚಿಟ್ಟು ರಾಜಕಾರಣ ಮಾಡುವ ಅಗತ್ಯ ನನಗಿಲ್ಲ. ಅವರಿಗೆ ಆ ಅವಶ್ಯಕತೆ ಇದೆ. ಬಿಜೆಪಿ ನಾಯಕರಿಗೆ ಪೆನ್ಡ್ರೈವ್ ನೀಡಿರುವುದಾಗಿ ಆ ಹುಡುಗ ಹೇಳಿದ್ದಾನೆ. ಪೆನ್ಡ್ರೈವ್ ಯಾರು ಬಿಟ್ಟಿದ್ದಾರೆ ಎಂಬುದನ್ನು ಮುಂದೆ ಚರ್ಚೆ ಮಾಡೋಣ. ಈಗ ವಿಚಾರ ವಿಷಯಾಂತರ ಮಾಡುವುದು ಬೇಡ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.