ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?


Team Udayavani, May 3, 2024, 6:30 AM IST

vidhana-soudha

ಬೆಂಗಳೂರು: ಜೂನ್‌ 21ರಂದು ಅವಧಿ ಮುಕ್ತಾಯಗೊಳ್ಳಲಿರುವ ವಿಧಾನಪರಿಷತ್‌ನ 6 ಸ್ಥಾನಗಳಿಗೆ ದ್ವೆ„ವಾರ್ಷಿಕ ಚುನಾ ವಣೆ ಘೋಷಣೆಯಾಗಿದೆ. ಜೂ.3 ರಂದು ಮತದಾನ ನಡೆಯಲಿದ್ದು, 6ಕ್ಕೆ ಫ‌ಲಿತಾಂಶ ಪ್ರಕಟಗೊಳ್ಳಲಿದೆ ಎಂದು ಕೇಂದ್ರ ಚುನಾವಣ ಆಯೋಗ ತಿಳಿಸಿದೆ.

3 ಪದವೀಧರ, 3 ಶಿಕ್ಷಕ ಕ್ಷೇತ್ರ
2018ರ ಚುನಾವಣೆಯಲ್ಲಿ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಗೆದ್ದಿದ್ದ ಚಂದ್ರಶೇಖರ್‌ ಪಾಟೀಲ್‌, ನೈಋತ್ಯ ಪದವೀಧರ ಕ್ಷೇತ್ರವನ್ನು ಬಿಜೆಪಿಯಿಂದ ಪ್ರತಿನಿಧಿಸಿದ್ದ ಆಯನೂರು ಮಂಜುನಾಥ್‌, ಬೆಂಗಳೂರು ಪದವೀಧರ ಕ್ಷೇತ್ರದ ಬಿಜೆಪಿ ಸದಸ್ಯ ಅ. ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಸದಸ್ಯ ವೈ.ಎ.ನಾರಾಯಣ ಸ್ವಾಮಿ, ನೈಋತ್ಯ ಶಿಕ್ಷಕರ ಕ್ಷೇತ್ರದ ಜೆಡಿಎಸ್‌ ಸದಸ್ಯ ಭೋಜೇಗೌಡ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್‌ನಿಂದ ಪ್ರತಿನಿಧಿಸುತ್ತಿದ್ದ ಮರಿತಿಬ್ಬೇಗೌಡ ಅವರ ಅಧಿಕಾರಾವಧಿಯು ಜೂ.21ಕ್ಕೆ ಮುಕ್ತಾಯಗೊಳ್ಳಲಿದೆ.

ರಾಜೀನಾಮೆ ಸಲ್ಲಿಸಿದ್ದ ಇಬ್ಬರು

ಈ ನಡುವೆ ಆಯನೂರು ಮಂಜುನಾಥ್‌ 2023ರ ಎ.19 ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿ ದ್ದರು. ಮರಿತಿಬ್ಬೇಗೌಡರು 2024ರ ಮಾ.21ರಂದು ರಾಜೀನಾಮೆ ನೀಡಿ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿ ದ್ದರು. ಇದರಿಂದ 2 ಸ್ಥಾನಗಳು ಅವಧಿಗೂ ಮುನ್ನವೇ ತೆರವುಗೊಂಡಿದ್ದವು. ಅಧಿಕಾರಾವಧಿ ಪೂರ್ಣಗೊಳ್ಳುವ ಸಮಯವೂ ಹತ್ತಿರದಲ್ಲೇ ಇದ್ದರಿಂದ ಉಪಚುನಾವಣೆ ಘೋಷಿಸಿರಲಿಲ್ಲ. ಈಗ ಎಲ್ಲದಕ್ಕೂ ಸೇರಿ ಸಾರ್ವತ್ರಿಕ ಚುನಾವಣೆಯನ್ನೇ ಘೋಷಿಸಲಾಗಿದೆ.

ಮಾದರಿ ನೀತಿ ಸಂಹಿತೆ ಜಾರಿ
ಚುನಾವಣೆ ನಡೆಯಲಿರುವ ಕ್ಷೇತ್ರ ವ್ಯಾಪ್ತಿಯಲ್ಲಿ ಗುರುವಾರದಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಮೇ 9ರಂದು ಅಧಿಕೃತ ಅಧಿಸೂಚನೆ ಹೊರಬೀಳಲಿದೆ. ಅಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ, ಮೇ 16ರ ವರೆಗೆ ಉಮೇದುವಾರಿಕೆಗೆ, 17ರಂದು ನಾಮಪತ್ರಗಳ ಪರಿಶೀಲನೆ, ಹಿಂಪಡೆ ಯಲು ಮೇ 20ರ ವರೆಗೆ ಕಾಲಾವಕಾಶ ಇದೆ. ಜೂ.3ರ ಬೆಳಗ್ಗೆ 8ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದ್ದು, ಜೂ.6ರಂದು ಮತ ಎಣಿಕೆ ನಡೆದು ಫ‌ಲಿತಾಂಶ ಹೊರಬೀಳಲಿದೆ.

ಶೆಟ್ಟರ್‌, ತೇಜಸ್ವಿನಿ, ನಂಜುಂಡಿ ಸ್ಥಾನವೂ ತೆರವು
ಇವಿಷ್ಟೇ ಅಲ್ಲದೆ, ಇತ್ತೀಚೆಗೆ ಕಾಂಗ್ರೆಸ್‌ನಿಂದ ವಿಧಾನಪರಿಷತ್‌ ಸದಸ್ಯರಾಗಿ ಆಯ್ಕೆಯಾಗಿದ್ದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌, ಬಿಜೆಪಿಯ ತೇಜಸ್ವಿನಿ ಗೌಡ, ಕೆ.ಪಿ.ನಂಜುಂಡಿ ಕೂಡ ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಸ್ಥಾನಗಳೂ ತೆರವಾಗಿವೆ. ಹೀಗಾಗಿ ಮುಂದಿನ ದಿನಗಳಲ್ಲಿ ಈ ಹುದ್ದೆಗಳಿಗೂ ಚುನಾವಣೆ ನಡೆಯಬೇಕಾಗುತ್ತದೆ.

ಯಾವ ಕ್ಷೇತ್ರದಲ್ಲಿ ಯಾರಿದ್ದರು?
ಈಶಾನ್ಯ ಪದವೀಧರ: ಚಂದ್ರಶೇಖರ್‌ ಪಾಟೀಲ್‌ ( ಕಾಂಗ್ರೆಸ್‌)
ನೈಋತ್ಯ ಪದವೀಧರ: ಆಯನೂರು ಮಂಜುನಾಥ್‌ (ಹಿಂದೆ ಬಿಜೆಪಿ, ಈಗ ಕಾಂಗ್ರೆಸ್‌)
ಬೆಂಗಳೂರು ಪದವೀಧರ: ಅ.ದೇವೇಗೌಡ (ಬಿಜೆಪಿ)
ಆಗ್ನೇಯ ಶಿಕ್ಷಕರು: ವೈ.ಎ.ನಾರಾಯಣ ಸ್ವಾಮಿ (ಬಿಜೆಪಿ)
ನೈಋತ್ಯ ಶಿಕ್ಷಕರು: ಭೋಜೇಗೌಡ (ಜೆಡಿಎಸ್‌)
ದಕ್ಷಿಣ ಶಿಕ್ಷಕರು: ಮರಿತಿಬ್ಬೇಗೌಡ (ಹಿಂದೆ ಜೆಡಿಎಸ್‌, ಈಗ ಕಾಂಗ್ರೆಸ್‌)

ಪರಿಷತ್‌ನ ಸದ್ಯದ ಬಲಾಬಲ
ಬಿಜೆಪಿ 32
ಕಾಂಗ್ರೆಸ್‌ 29
ಜೆಡಿಎಸ್‌ 07
ಸ್ವತಂತ್ರ 01
ಖಾಲಿ 05
ಸಭಾಪತಿ 01
ಒಟ್ಟು 75

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.