Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ


Team Udayavani, May 3, 2024, 10:19 AM IST

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

ದಾವಣಗೆರೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಗಾಯಿತ್ರಿ ಸಿದ್ದೇಶ್ವರ ರಾಜಕೀಯ ಹಿನ್ನೆಲೆಯುಳ್ಳ ಪ್ರತಿಷ್ಠಿತ ಕುಟುಂಬದ ಸದಸ್ಯೆ. ಮಾಜಿ
ಸಂಸದ ದಿ| ಜಿ. ಮಲ್ಲಿಕಾರ್ಜುನಪ್ಪ ಅವರ ಸೊಸೆ ಹಾಗೂ ಹಾಲಿ ಸಂಸದ ಜಿ.ಎಂ. ಸಿದ್ದೇಶ್ವರ ಅವರ ಪತ್ನಿ. ಗಾಯತ್ರಿ ಅವರ ತವರೂರು ಶಿವಮೊಗ್ಗ. ಇದುವರೆಗೆ
ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಇವರು ಇದೇ ಮೊದಲ ಬಾರಿ ರಾಜಕೀಯ ಕ್ಷೇತ್ರ ಪ್ರವೇಶಿಸಿದ್ದಾರೆ. 69 ವರ್ಷ ವಯೋಮಾನದ ಗಾಯಿತ್ರಿ ಲೋಕ ಸಮರದ ಆಖಾಡಕ್ಕಿಳಿದಿದ್ದು, “ಉದಯವಾಣಿ’ಜತೆ ಮಾತನಾಡಿದ್ದಾರೆ.

– ಚುನಾವಣಾ ಪ್ರಚಾರ ಹೇಗಿದೆ?
ಪ್ರಚಾರ ತುಂಬಾ ಚೆನ್ನಾಗಿ ನಡೆದಿದ್ದು ಎಲ್ಲ ಕಡೆಯಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಕ್ಷೇತ್ರ ವ್ಯಾಪ್ತಿಯ ಎಲ್ಲ ವಿಧಾನಸಭೆ ಕ್ಷೇತ್ರಗಳ ಗ್ರಾಮಗಳಿಗೆ
ಭೇಟಿ ನೀಡಿ ಪ್ರಚಾರ ಮಾಡುತ್ತಿದ್ದೇವೆ. ನನಗೆ ಚುನಾವಣೆ, ಪ್ರಚಾರ ಹೊಸದಲ್ಲ 28 ವರ್ಷಗಳಿಂದ ಹತ್ತಿರದಿಂದ ನೋಡುತ್ತ, ಪಕ್ಷದ ಕೆಲಸ ಮಾಡಿಕೊಂಡು
ಬಂದಿದ್ದೇನೆ. ಜನರ ಸ್ಪಂದನೆ ಗೆಲ್ಲುವ ವಿಶ್ವಾಸ ಮೂಡಿದೆ.

– ಚುನಾವಣೆ ಗೆಲ್ಲಲು ನಿಮ್ಮ ತಂತ್ರಗಾರಿಕೆ ಏನು?
ಗೆಲ್ಲಲು ತಂತ್ರಗಾರಿಕೆ ಏನಿಲ್ಲ. ದೇಶದ ಭದ್ರತೆ, ರಕ್ಷಣೆ ದೃಷ್ಟಿಯಿಂದ ಮೋದಿಯವರು ಇನ್ನೊಮ್ಮೆ ಪ್ರಧಾನಿಯಾಗಬೇಕೆಂದು ಜನ ತೀರ್ಮಾನಿಸಿ ಬೆಂಬಲಿಸುತ್ತಿದ್ದಾರೆ. ಇನ್ನು ಕೇಂದ್ರ ಸರ್ಕಾರದ ಹತ್ತು ಹಲವು ಜನಪರ ಯೋಜನೆಗಳ ಜತೆ ಮಾವ ದಿ|ಜಿ. ಮಲ್ಲಿಕಾರ್ಜುನಪ್ಪ ಹಾಗೂ ಪತಿ ಸಂಸದ ಜಿ.ಎಂ.
ಸಿದ್ದೇಶ್ವರ ಅವರು ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕೆಲಸ, ಜನಸೇವೆ ಮತದಾರರ ಮನದಲ್ಲಿದೆ.

– ಪ್ರಚಾರದ ವೇಳೆ ಎದುರಿಸಿದ ಸವಾಲುಗಳೇನು?
ಪ್ರಚಾರದ ವೇಳೆ ಜನರು ಮಹಿಳೆಯರಿಗೆ ಹಾಗೂ ವಿದ್ಯಾವಂತ ನಿರುದ್ಯೋಗಿಗಳಿಗೆ ಸ್ವಂತ ಉದ್ಯೋಗಕ್ಕಾಗಿ ಸಣ್ಣ ಕೈಗಾರಿಕೆಗಳ ಕ್ಲಸ್ಟರ್‌ ಅನುಷ್ಠಾನ, ಅಂತರ್ಜಲ ವೃದ್ಧಿಗಾಗಿ ಯೋಜನೆಗಳು ಆಗಬೇಕು ಎಂಬ ಬೇಡಿಕೆಗಳನ್ನು ಇಟ್ಟಿದ್ದಾರೆ. ಅವುಗಳನ್ನು ಆದ್ಯತೆ ಮೇರೆಗೆ ಈಡೇರಿಸಲು ಕ್ರಮ ವಹಿಸಲಾಗುವುದು. ಸಂಸದರು ಪ್ರತಿಯೊಂದು ಹಳ್ಳಿಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದರಿಂದ ಗಂಭೀರ ಸವಾಲು ಎದುರಾಗಿಲ್ಲ.

– ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ನಿಮ್ಮ ಪರಿಕಲ್ಪನೆ ಹಾಗೂ ಭರವಸೆಗಳೇನು?
ದಾವಣಗೆರೆ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡುವ ಕನಸಿದೆ. ಗೆದ್ದ ಮೇಲೆ ಖಂಡಿತಾ ಮಹಿಳೆಯರ ಸಬಲೀಕರಣಕ್ಕಾಗಿ ವಿಶೇಷ
ಯೋಜನೆಗಳನ್ನು ಕ್ಷೇತ್ರಕ್ಕೆ ತರಬೇಕೆನ್ನುವ ತುಡಿತ ನನ್ನಲ್ಲಿದೆ. ಕೃಷಿಕರ, ನಿರುದ್ಯೋಗ ಸಮಸ್ಯೆ ಪರಿಹಾರಕ್ಕೆ ಮೊದಲ ಆದ್ಯತೆ ನೀಡುತ್ತೇನೆ.

– ಕ್ಷೇತ್ರದಲ್ಲಿ ನೀವು ಗುರುತಿಸಿದ ಐದು ಪ್ರಥಮ ಆದ್ಯತೆಯ ಕೆಲಸಗಳೇನು?
ದಾವಣಗೆರೆಯಲ್ಲಿ ವಿಮಾನ ನಿಲ್ದಾಣ ನಿರ್ಮಿಸಬೇಕು. ಈಗಾಗಲೇ ಇರುವ ಸಾಫ್ಟವೇರ್‌ ಟೆಕ್ನಾಲಜಿ ಪಾರ್ಕ್‌ನ್ನು ವಿಸ್ತರಿಸಬೇಕು. ಇಂಡಸ್ಟ್ರಿಯಲ್‌ ಕಾರಿಡಾರ್‌ ನಿರ್ಮಿಸಬೇಕು. ಮಹಿಳೆಯರಿಗೆ, ವಿದ್ಯಾವಂತ ನಿರುದ್ಯೋಗಿಗಳಿಗೆ ಸ್ವಂತ ಉದ್ಯೋಗಕ್ಕಾಗಿ ಸಣ್ಣ ಕೈಗಾರಿಕೆಗಳ ಕ್ಲಸ್ಟರ್‌ ಅನುಷ್ಠಾನಗೊಳಿಸಬೇಕು.
ಅಂತರ್ಜಲ ವೃದ್ಧಿಗೆ ಜಲ ಮರುಪೂರಣದಂಥ ಯೋಜನೆಗಳಿಗೆ ಒತ್ತು ನೀಡಬೇಕು.

– ಮೋದಿ ಅಲೆ ಅಥವಾ ಬೇರೆ ಯಾವ ಅಂಶಗಳು ನಿಮ್ಮ ಗೆಲುವಿಗೆ ಸಹಕಾರಿಯಾಗಲಿವೆ?
ಇಡೀ ಜಗತ್ತು ಇಂದು ಮೋದಿಜಿಯವರನ್ನು ಕೊಂಡಾಡುತ್ತಿದೆ. ಅವರು ಭಾರತದ ಆರ್ಥಿಕತೆಯನ್ನು ವಿಶ್ವದಲ್ಲಿ 5ನೇ ಸ್ಥಾನಕ್ಕೆ ತಂದು ನಿಲ್ಲಿಸಿದ್ದಾರೆ. ಕಳೆದ 28 ವರ್ಷಗಳಲ್ಲಿ ನಮ್ಮ ಕುಟುಂಬ ಇಡೀ ಲೋಕಸಭೆ ಕ್ಷೇತ್ರದ ಜನರೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದೆ. ನನ್ನ ಪತಿ ಜಿ.ಎಂ. ಸಿದ್ದೇಶ್ವರ ಕಳೆದ 20 ವರ್ಷಗಳಲ್ಲಿ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಿದ್ದಾರೆ. ಸಿದ್ದೇಶ್ವರ ಕ್ಷೇತ್ರದ 1260ಹಳ್ಳಿಗಳಿಗೆ ಕನಿಷ್ಠ ಐದಾರು ಬಾರಿ ಭೇಟಿ ನೀಡಿದ್ದಾರೆ. ಪ್ರತಿ ಹಳ್ಳಿಗಳಲ್ಲಿ 20-25 ಕಾರ್ಯಕರ್ತರನ್ನು ಹೆಸರಿಸಿ ಮಾತನಾಡುವಷ್ಟು ಕ್ಷೇತ್ರದಲ್ಲಿ ಬೇರು ಬಿಟ್ಟಿದ್ದಾರೆ. ಪ್ರತಿಯೊಂದು ಹಳ್ಳಿಗಳಿಗೆ ಒಂದಿಲ್ಲೊಂದು ಕಾಮಗಾರಿಗೆ ಅನುದಾನ ನೀಡಿ ಅಭಿವೃದ್ಧಿ ಮಾಡಿ, ನಿರಂತರ ಸಂಪರ್ಕದಲ್ಲಿದ್ದಾರೆ. ಇವೆಲ್ಲವೂ ಗೆಲುವಿಗೆ ಸಹಕಾರಿಯಾಗಲಿವೆ.

– ಜನ ನಿಮ್ಮನ್ನು ಏಕೆ ಬೆಂಬಲಿಸಬೇಕು?
ನಮ್ಮ ಕುಟುಂಬ ಕ್ಷೇತ್ರದ ಜನರೊಂದಿಗೆ ಹೊಂದಿರುವ ನಿರಂತರ ಸಂಪರ್ಕ, ಕಳೆದ 28 ವರ್ಷಗಳಲ್ಲಿ ಜನರಿಗೆ ನಾವು ಸ್ಪಂಧಿಸಿರುವ ರೀತಿ, ಕೇಂದ್ರದಲ್ಲಿ ಕಳೆದ 10 ವರ್ಷಗಳಲ್ಲಿ ಮೋದಿಜಿಯವರ ಯೋಜನೆಯಿಂದ ದೇಶದಲ್ಲಿ ಆಗಿರುವ ಸುಧಾರಣೆ ಜನರ ಮುಂದಿದೆ. ಇದಲ್ಲದೇ ನನ್ನ ಪತಿ, ಸಂಸದ ಜಿ.ಎಂ. ಸಿದ್ದೇಶ್ವರ ಅವರು ಅನೇಕ ಯೋಜನೆಗಳ ಮೂಲಕ ಕ್ಷೇತ್ರದ ಅಭಿವೃದ್ಧಿ ಚಿತ್ರಣವನ್ನೇ ಬದಲಿಸಿರುವುದು ಜನರ ಕಣ್ಮುಂದಿದೆ. ಈ ಎಲ್ಲ ಕಾರಣಗಳಿಂದ ಜನತೆ ಖಂಡಿತಾ ನನಗೆ ಬೆಂಬಲಿಸುತ್ತಾರೆ.

– ನಿಮ್ಮ ಎದುರಾಳಿ ಯಾರು, ಅವರ ಬಗ್ಗೆ ನಿಮ್ಮ ಅಭಿಪ್ರಾಯವೇನು?
ಚುನಾವಣೆ ಎಂದು ಬಂದಾಗ ಎದುರಾಳಿ ಕಾಂಗ್ರೆಸ್‌ ಪಕ್ಷ. ಕಾಂಗ್ರೆಸ್‌ ಅಭ್ಯರ್ಥಿ ಅವರ ಪಕ್ಷದ ಯೋಜನೆ, ಅವರ ಸೇವೆಗಳನ್ನು ಮತದಾರರ ಮುಂದೆ
ಪ್ರಸ್ತಾಪಿಸುತ್ತಿದ್ದಾರೆ. ನಾವು ನಮ್ಮ ಪಕ್ಷದ ಪ್ರಣಾಳಿಕೆ, ಯೋಜನೆಗಳ ಬಗ್ಗೆ ಹೇಳುತ್ತಿದ್ದೇವೆ. ಆದರೆ ಒಂದೇ ಕುಟುಂಬದಲ್ಲಿ ಮೂವರಿಗೆ ಅಧಿಕಾರ
ಕೇಂದ್ರೀಕರಣವಾಗುವುದನ್ನು ಮತದಾರರು ಒಪ್ಪುತ್ತಿಲ್ಲ.

ಟಾಪ್ ನ್ಯೂಸ್

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime

Bidar; ಪತ್ನಿ ಜತೆ ಅನೈತಿಕ ಸಂಬಂಧ‌:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

11

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

3

Uppala: ಸುಮಾರು 3.5 ಕೋಟಿ ರೂ. ಮೌಲ್ಯದ ಅಮಲು ಪದಾರ್ಥ ವಶಕ್ಕೆ : ಬಂಧನ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

crime

Bidar; ಪತ್ನಿ ಜತೆ ಅನೈತಿಕ ಸಂಬಂಧ‌:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.