Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ
Team Udayavani, May 3, 2024, 12:40 PM IST
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಅವರ ಪರವಾಗಿ ಮೈಸೂರಿನ ಬಿಜೆಪಿ ಅಭ್ಯರ್ಥಿ ಯದುವೀರ ಶ್ರೀಕಂಠ ದತ್ತ ಒಡೆಯರ್ ಶುಕ್ರವಾರ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು.
ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಬಿಕಾದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಭಗತ್ ಸಿಂಗ್ ನಗರದ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ರೋಡ್ ಶೋಗೆ ಚಾಲನೆ ನೀಡಿದರು. ಭಗತ್ ಸಿಂಗ್ ನಗರ ಆಟೋ ನಿಲ್ದಾಣ, ನಿಟುವಳ್ಳಿ ರಸ್ತೆ, ಕೆಟಿಜೆ ನಗರ 17ನೇ ಕ್ರಾಸ್, ಕೆಟಿಜೆ ನಗರ 2ನೇ ಮೇನ್, ಶಿವಪ್ಪಯ್ಯ ಸರ್ಕಲ್ ವರೆಗೆ ರೋಡ್ ಶೋ ನಡೆಸಿದರು.
ಶಿವಪ್ಪಯ್ಯ ವೃತ್ತದಲ್ಲಿ ಮಾತನಾಡಿದ ಅವರು, ಬೆಣ್ಣೆ ಮನಸ್ಸಿನಂತಹ ದಾವಣಗೆರೆ ನಗರದ ಜನತೆ ಮತ್ತು ಮೈಸೂರು ಸಂಸ್ಥಾನದ ಅರಸರಿಗೂ ಅವಿನಾಭಾವ ಸಂಬಂಧವಿದೆ ಎಂದು ಸ್ಮರಿಸಿದರು. ನರೇಂದರ ಮೋದಿ ಅವರ ನೇತೃತ್ವದ ಎನ್ ಡಿಎ ರಾಜ್ಯದಲ್ಲಿ 28 ಸ್ಥಾನಗಳನ್ನು ಗೆಲ್ಲಲಿದೆ ಎಂದು ಯದುವೀರ ಶ್ರೀಕಂಠ ದತ್ತ ಒಡೆಯರ್ ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ ಜನಪರ ಕಾರ್ಯಗಳು, ದೇಶದ ಸುಭದ್ರತೆಗೆ ಮೋದಿ ನೇತೃತ್ವದ ಪಕ್ಷಕ್ಕೆ ಮತ ನೀಡಿ. ರಾಜ್ಯದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ನೇತೃತ್ವದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಚುನಾವಣೆ ಮುಗಿದ 14 ಜಿಲ್ಲೆಗಳಲ್ಲೂ ಬಿಜೆಪಿ ಗೆಲ್ಲುವ ವಾತಾವರಣ ಇದೆ. ಇದೀಗ ಮೇ.7ರಂದು ನಡೆಯಲಿರುವ ಚುನಾವಣೆಯಲ್ಲಿ ಉಳಿದ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲೂ ಬಿಜೆಪಿ ಗೆಲ್ಲುವ ವಾತಾವರಣ ಇದೆ. ನಾನು ಒಬ್ಬ ಬಿಜೆಪಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ಗಾಯತ್ರಿ ಸಿದ್ದೇಶ್ವರ್ ಪರ ಮತಯಾಚನೆ ಮಾಡಲು ಬಂದಿರುವುದಾಗಿ ಹೇಳಿದರು.
ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ, ಬಿಜೆಪಿ ಜಿಲ್ಲಾಧ್ಯಕ್ಷ ಎನ್. ರಾಜಶೇಖರ್ ನಾಗಪ್ಪ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್, ಮಾಜಿ ಮೇಯರ್ ಎಂ.ಎಸ್. ವಿಠಲ್, ಉಪ ಮೇಯರ್ ಯಶೋಧಾ ಎಗ್ಗಪ್ಪ ಇತರರು ಇದ್ದರು.
ಬೆಣ್ಣೆ ದೋಸೆ ಸವಿದರು: ಯದುವೀರ ಶ್ರೀಕಂಠ ದತ್ತ ಒಡೆಯರ್ ಅವರು ಶುಕ್ರವಾರ ರೋಡ್ ಶೋಗೆ ತೆರಳುವ ಮುನ್ನ ಡೆಂಟಲ್ ಕಾಲೇಜು ರಸ್ತೆಯಲ್ಲಿರುವ ಕೊಟ್ಟೂರೇಶ್ವರ ಹೋಟೆಲ್ ನಲ್ಲಿ ಬೆಣ್ಣೆ ದೋಸೆ ಸವಿದರು. ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ, ಬಿಜೆಪಿ ಜಿಲ್ಲಾಧ್ಯಕ್ಷ ಎನ್. ರಾಜಶೇಖರ್ ನಾಗಪ್ಪ, ಜಿ.ಎಸ್. ಅನಿತ್ ಕುಮಾರ್ ಇತರರು ಸಾಥ್ ನೀಡಿದರು.
ಕೆಲ ದಿನಗಳ ಹಿಂದೆ ದಾವಣಗೆರೆ ತಾಲೂಕಿನ ಕೋಲ್ಕುಂಟೆ ಗ್ರಾಮದ ಸಮಾರಂಭಕ್ಕೆ ಆಗಮಿಸಿದ್ದ ಸಂದರ್ಭದಲ್ಲೂ ಯದುವೀರ ಶ್ರೀಕಂಠ ದತ್ತ ಒಡೆಯರ್ ಅವರು ಕೊಟ್ಟೂರೇಶ್ವರ ಹೋಟೆಲ್ ನಲ್ಲಿ ಬೆಣ್ಣೆ ದೋಸೆ ಸವಿದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
M. P. Renukacharya:ಪ್ಯಾಲೆಸ್ತೇನ್ ಪರ ಧ್ವಜ ಹಾರಿಸುವವರ ಮೇಲೆ ಗುಂಡು ಹೊಡೆಯಿರಿ
Davanagere; ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ: 8 ಜನರ ವಿರುದ್ಧ ದೂರು ದಾಖಲು
ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್ ಹಬ್- ಜಿ.ಬಿ. ವಿನಯ್ ಕುಮಾರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.