Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ


Team Udayavani, May 3, 2024, 3:57 PM IST

12

ಹುಣಸೂರು: ತಾಲೂಕಿನ ಕಿರಂಗೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹರಳಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯ ಅಸಮರ್ಪಕ ನಿರ್ವಹಣೆಯಿಂದ ಬೇಸತ್ತ ಗ್ರಾಮಸ್ಥರು‌, ಪಿಡಿಓ ಸಮ್ಮುಖದಲ್ಲಿ ಬೀಗ ಜಡಿದು ಆಕ್ರೋಶ ಹೊರಹಾಕಿದರು.

ಅಂಗನವಾಡಿ ಕೇಂದ್ರಕ್ಕೆ ಬೀಗ ಜಡಿದಿದ್ದ ಹಿನ್ನೆಲೆಯಲ್ಲಿ ಗುರುವಾರ ಎಸಿಡಿಪಿಓ ವೀಣಾ ಹಾಗೂ ಮೇಲ್ವಿಚಾರಕಿ ಸುಮಂಗಲಿ ಭೇಟಿ ಇತ್ತು ಗ್ರಾಮಸ್ಥರ ಸಭೆ ನಡೆಸಿದರು.

ಸಭೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಅಣ್ಣಯ್ಯ, ಸದಸ್ಯ ಹರೀಶ್‌ಗೌಡ ಸೇರಿದಂತೆ ಮುಖಂಡರಾದ ಮಹದೇವು, ಗೌರಮ್ಮ, ಈರೇಗೌಡ, ಮಹದೇವಿ ಮತ್ತಿತರರು  ಅಂಗನವಾಡಿ ಕಾರ್ಯಕರ್ತೆ ಸುಜಾತಾಬಾಯಿ ಕೇಂದ್ರವನ್ನು ಸೂಕ್ತ ನಿರ್ವಹಣೆ ಮಾಡುತ್ತಿಲ್ಲ. ಆದಿವಾಸಿ ಮಕ್ಕಳನ್ನು ಕೀಳಾಗಿ ಕಾಣುತ್ತಾರೆ. ದೂರ ಕೂರಿಸುತ್ತಾರೆ. ಸರಿಯಾಗಿ ಪಡಿತರ ವಿತರಿಸುವುದಿಲ್ಲ. ಹೀಗಾಗಿ ಗ್ರಾಮ ಪಂಚಾಯತ್‌ ಗೆ ಹಾಗೂ ಸಿಡಿಪಿಒಗೆ ದೂರು ನೀಡಿದ್ದೆವು. ಪಿಡಿಒ ಭವ್ಯ ಸಹ ಅನೇಕ ಬಾರಿ ತಿಳುವಳಿಕೆ ನೀಡಿದ್ದರು. ಗ್ರಾಮಸ್ಥರು ಎಷ್ಟೇ ಎಚ್ಚರಿಸಿದ್ದರೂ ಪ್ರಯೋಜನವಾಗದೆ ಗ್ರಾಮಸ್ಥರು ಸೇರಿ ಬೀಗ ಹಾಕಿದ್ದೇವೆಂದು ಹೇಳಿ, ಈ ಕೇಂದ್ರಕ್ಕೆ ಬದಲಿ ಶಿಕ್ಷಕಿ                                    ನೇಮಿಸಿರೆಂದು ಪಟ್ಟು ಹಿಡಿದರು.

ಅಂಗನವಾಡಿ ಶಿಕ್ಷಕಿ ಸುಜಾತಾಬಾಯಿ ಕೇಂದ್ರದ ಸಹಾಯಕಿ ಅನಾರೋಗ್ಯದಿಂದ ಬರುತ್ತಿಲ್ಲ. ಒಬ್ಬರಿಂದ ನಿರ್ವಹಣೆ ಸಾದ್ಯವಿಲ್ಲ. ನನ್ನಿಂದ ತಪ್ಪಾಗಿದ್ದು, ಮುಂದೆ ಸರಿಪಡಿಸಿಕೊಂಡು ಹೋಗುವೆನೆಂಬ ಭರವಸೆ ಮೇರೆಗೆ ಗ್ರಾಮಸ್ಥರು ಒಪ್ಪಿ ಇವರನ್ನೇ ಮುಂದುವರೆಸುವುದು. ಮುಂದೆ ಇದೇ ರೀತಿ ನಡೆದುಕೊಂಡಲ್ಲಿ ಇವರ ವಿರುದ್ದ ಕ್ರಮವಹಿಸಬೇಕೆಂಬ ಗ್ರಾಮಸ್ಥರ ಬೇಡಿಕೆ ಮೇರೆಗೆ ಅಂಗನವಾಡಿ ತೆರೆಯಲು ಅವಕಾಶ ಮಾಡಿಕೊಟ್ಟರು.

ಇಂದು ಸಿಡಿಪಿಒ ಭೇಟಿ:

ಅಂಗನವಾಡಿ ಕೇಂದ್ರಕ್ಕೆ ಬೀಗ ಹಾಕಿರುವ ಬಗ್ಗೆ ಪಿಡಿಓರಿಂದ ಮಾಹಿತಿ ಬಂದಿದೆ. ನಾನು ರಜೆಯಲ್ಲಿದ್ದೇನೆ. ಗ್ರಾಮಕ್ಕೆ ಎಸಿಡಿಪಿಓ ಹಾಗೂ ಮೇಲ್ವಿಚಾರಕಿ ಭೇಟಿ ನೀಡಿ ಪರಿಶೀಲಿಸಿ, ಗ್ರಾಮಸ್ಥರ ಸಭೆ ನಡೆಸಿದ್ದಾರೆ. ಶುಕ್ರವಾರ ಕೇಂದ್ರಕ್ಕೆ ಭೇಟಿ ನೀಡುವೆನೆಂದು ಸಿಡಿಪಿಒ ಹರೀಶ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.