Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…
Team Udayavani, May 3, 2024, 5:22 PM IST
ಗಂಗಾವತಿ: ತಾಲೂಕಿನ ಸೂರ್ಯನಾಯಕನ ತಾಂಡ ಕೆರೆಯಲ್ಲಿ ಗ್ರಾಮಸ್ಥರು ಕಪ್ಪೆಗಳ ಮದುವೆ ಮಾಡಿದರು. ಗ್ರಾಮಸ್ಥರು ಸಾಂಪ್ರದಾಯದಂತೆ ಕಪ್ಪೆಗಳನ್ನ ಕೆರೆಯಲ್ಲಿ ಹಿಡಿದು ಅವುಗಳಿಗೆ ಅಲಂಕರಿಸಿ ಮದುವೆ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಶರಣಮ್ಮ ಮಾತನಾಡಿ, ಪ್ರಕೃತಿಯ ಮುನಿಸಿನಿಂದ ಮಳೆ ಮಾಯವಾಗಿದೆ. ಹೆಚ್ಚಿನ ಬಿಸಿಲು ಜಳದಿಂದ ಜೀವಿ ಸಂಕುಲ ಬಳಲುತ್ತಿದ್ದು ನಂಬಿಕೆ ಸಂಪ್ರದಾಯದಂತೆ ಕಪ್ಪೆಗಳನ್ನ ಹಿಡಿದು ಮದುವೆ ಮಾಡಿದರೆ ಮಳೆಯಾಗುತ್ತದೆ ಎಂಬ ಅಭಿಪ್ರಾಯ ಕೇಳಿ ಬಂದಿದ್ದರಿಂದ ಗ್ರಾಮಸ್ಥರು ಸೇರಿ ಗ್ರಾಮದ ಎಲ್ಲಾ ದೇವಸ್ಥಾನದಲ್ಲಿ ಮೊದಲು ಪೂಜೆ ಮಾಡಲಾಯಿತು.
ಎಲ್ಲಾ ಮನೆಗಳಲ್ಲಿ ಸಿಹಿ ತಯಾರಿಸಿ ಎಲ್ಲಾ ಜನಾಂಗದವರು ಸೇರಿ ಗ್ರಾಮದ ಕೆರೆಯ ಕಪ್ಪೆಗಳನ್ನು ಹಿಡಿದು ಮದುವೆ ಮಾಡಲಾಗಿದೆ. ಇದರ ಅರ್ಥ ಪ್ರಕೃತಿಯನ್ನು ಹೊರತುಪಡಿಸಿ ಮನುಷ್ಯರು ಇಲ್ಲ, ಪ್ರಕೃತಿಯ ಜೊತೆಗೆ ಮನುಷ್ಯರು ಬದುಕಬೇಕು. ಆದ್ದರಿಂದ ಗಿಡಮರಗಳನ್ನು ಕಡಿಯದೆ, ಕಲ್ಲು ಬಂಡೆಗಳನ್ನು ಒಡೆಯದೆ ಜೀವಿ ಸಂಕುಲ ಸಂರಕ್ಷಣೆ ಮಾಡಿದರೆ ಪರಿಸರ ಸಮತೋಲನವಾಗಿರುತ್ತದೆ. ಇದರಿಂದ ಪ್ರಕೃತಿ ಒಲಿದು ಮಳೆಯಾಗುತ್ತದೆ ಆದ್ದರಿಂದ ಪ್ರತಿಯೊಬ್ಬರೂ ಸಸಿನೆಟ್ಟು ಬೆಳೆಸಿ ಪ್ರತಿ ಗ್ರಾಮಕ್ಕೆ ಒಂದು ವನ ಮಾದರಿಯಾಗಬೇಕೆಂದರು.
ಈ ಸಂದರ್ಭದಲ್ಲಿ ಬಸಾಪಟ್ಟಣ ಹಾಗೂ ಸೂರ್ಯನಾಯಕನ ತಾಂಡದ ನಿವಾಸಿಗಳು ಸೇರಿದಂತೆ ಶರಣಮ್ಮ, ಈರಮ್ಮ ಹಳ್ಳಿ, ಶಿವಮ್ಮ ಗಂಜಾಳ, ಹನುಮಮ್ಮ, ವಾಣಿ, ಅನುಶ್ರೀ, ಶ್ರೀದೇವಿ ಮತ್ತು ಶಿವಮ್ಮ ಇದ್ದರು.
ಇದನ್ನೂ ಓದಿ: Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.