![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, May 3, 2024, 7:04 PM IST
ಸಿಂಧನೂರು: ತನಿಖಾ ಸಂಸ್ಥೆಯನ್ನು ಸ್ಥಾಪನೆ ಮಾಡಿಕೊಂಡಿರುವ ಸರಕಾರ ಯಾವ ದಿಕ್ಕಿನಲ್ಲಿ ಹೊರಟಿದೆ. ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಟ್ಟು ವಿಚಾರಣೆ ನಡೆಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.
ಮಾಜಿ ಸಚಿವ ವೆಂಕಟರಾವ್ ನಾಡಗೌಡ ನಿವಾಸದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ 400 ಮಹಿಳೆಯರ ಮೇಲೆ ಅತ್ಯಾಚಾರ ಆಗಿದೆ ಎಂದು ರಾಹುಲ್ಗಾಂಧಿ ಹೇಳಿದ್ದಾರೆ. ಖರ್ಗೆ ಬದಲು ರಾಹುಲ್ ಗಾಂಧಿ ಮುಂದಿನ ಪ್ರಧಾನಿ ಎಂದು ಘೋಷಣೆ ಮಾಡಿರುವ ಸಿದ್ದರಾಮಯ್ಯ ಅವರೇ ಈ ಮಾಹಿತಿ ಕೊಟ್ಟಿರಬೇಕು. ಇಲ್ಲವೇ ಟೆಂಟ್ ಗಳಲ್ಲಿ ಅಶ್ಲೀಲ ಸಿನಿಮಾ ತೋರಿಸಿ ಮೇಲೆ ಬಂದ ಮಹಾನಾಯಕ ಇದನ್ನು ಹೇಳಿರಬೇಕು ಎಂದು ಪರೋಕ್ಷ ಟಾಂಗ್ ನೀಡಿ ಆಕ್ರೋಶ ಹೊರ ಹಾಕಿದರು.
ತನಿಖಾ ಸಂಸ್ಥೆಯನ್ನು ರಚನೆ ಮಾಡಿರುವ ಸರಕಾರ, ರಾಹುಲ್ ಗಾಂಧಿಗೆ ನೋಟಿಸ್ ಕೊಟ್ಟು ಅವರ ಬಳಿ ಇರಬಹುದಾದ 400 ಪ್ರಕರಣಗಳ ಮಾಹಿತಿ ಸಂಗ್ರಹಿಸಬೇಕು ಎಂದರು. ಮಾಜಿ ಸಚಿವ ನಾಡಗೌಡ, ಮಾಜಿ ಶಾಸಕ ವೆಂಕಟಪ್ಪ ನಾಯಕ ಇದ್ದರು.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.