Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ
ಅಪಹರಣ ಪ್ರಕರಣ; ಲೈಂಗಿಕ ಕಿರುಕುಳ ಕೇಸ್ನಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿ ವಾಪಸ್
Team Udayavani, May 3, 2024, 11:19 PM IST
ಬೆಂಗಳೂರು: ಹಾಸನ ಪೆನ್ಡ್ರೈವ್ ಪ್ರಕರಣ ಸಂಚ ಲನ ಮೂಡಿಸಿರುವ ಬೆನ್ನಲ್ಲೇ ಮೈಸೂರಿನಲ್ಲಿ ದಾಖಲಾದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ನಿರೀಕ್ಷಣ ಜಾಮೀನಿಗಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾ ಲಯದ ಮೊರೆ ಹೋಗಿದ್ದಾರೆ.
ಎಸ್ಐಟಿ ಪರ ಅಭಿಯೋಜಕರಿಗೆ (ಎಸ್ಪಿಪಿ) ನೋಟಿಸ್ ಜಾರಿ ಮಾಡಿದ ನ್ಯಾಯಾಲಯವು ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿದೆ. ಮೈಸೂರಿನ ಕೆ.ಆರ್.ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ರೇವಣ್ಣ ಅವರಿಗೆ ಬಂಧನದ ಭೀತಿ ಎದುರಾಗಿದೆ.
ಹೀಗಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣ ಜಾಮೀನಿಗಾಗಿ ಶುಕ್ರವಾರ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಮುಂದಿನ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿ ಆದೇಶಿಸಿದ್ದಾರೆ.
ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್ಐಆರ್ ಅನ್ನು ರೇವಣ್ಣ ಪರ ವಕೀಲರು ಓದಿದರು. ಈ ಎಫ್ಐಆರ್ನಲ್ಲಿ ಜಾಮೀನು ರಹಿತ ಸೆಕ್ಷನ್ಗಳಿವೆ. 364 ಅ, ಅಪಹರಣ, 364 ಅಕ್ರಮ ಬಂಧನ ಜಾಮೀನು ರಹಿತ ವಾಗಿವೆ. ನಾಪತ್ತೆಯಾಗಿರುವ ಮಹಿಳೆಯ ಹೆಸರನ್ನು ದೂರಿನಲ್ಲಿ ಉಲ್ಲೇಖಿಸಿರುವುದು ಕಂಡು ಬಂದಿಲ್ಲ ಎಂದು ವಾದಿಸಿದರು. ಲೈಂಗಿಕ ಕಿರುಕುಳ ಆರೋಪದ ಪ್ರಕರಣದಲ್ಲಿ ಶನಿವಾರ ವಿಚಾರಣೆಗೆ ಹಾಜರಾಗಲು ತಮ್ಮ ಅರ್ಜಿ
ದಾರರು ತಯಾರಿದ್ದಾರೆ. ಹೀಗಾಗಿ ಮಧ್ಯಾಂತರ ನಿರೀಕ್ಷಣ ಜಾಮೀನು ಮಂಜೂರು ಮಾಡು ವಂತೆ ಮನವಿ ಮಾಡಿದರು.
ಮತ್ತೊಂದು ಕೇಸ್ ಅರ್ಜಿ ಹಿಂಪಡೆದ ರೇವಣ್ಣ
ಲೈಂಗಿಕ ಕಿರುಕುಳ ಆರೋಪ ಕುರಿತು ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಬಂಧಿಸಬಹುದು ಎಂಬ ಆತಂಕದಿಂದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದ ನಿರೀಕ್ಷಣ ಜಾಮೀನು ಅರ್ಜಿಯನ್ನು ರೇವಣ್ಣ ಹಿಂಪಡೆದಿದ್ದಾರೆ. ಗುರುವಾರ ಸಲ್ಲಿಸಿದ್ದ ಅರ್ಜಿಯನ್ನು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ ವಿಚಾರಣೆ ನಡೆಸಿತು. ವಿಚಾರಣೆಗೆ ಹಾಜರಾಗುವಂತೆ ರೇವಣ್ಣರಿಗೆ ನೋಟಿಸ್ ನೀಡಲಾಗಿದೆ. ಈ ನೋಟಿಸ್ನಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಲ್ಲ ಆರೋಪಗಳು ಜಾಮೀನು ರಹಿತವಲ್ಲ ದ್ದಾಗಿದೆ. ದೂರಿನಲ್ಲಿ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಸೇರ್ಪಡೆಯಾಗಿಲ್ಲ. ಹೀಗಾಗಿ ಅರ್ಜಿದಾರರನ್ನು ಬಂಧಿಸುವ ಅಗತ್ಯ ಇಲ್ಲ. ಆದ್ದರಿಂದ ನಿರೀಕ್ಷಣ ಜಾಮೀನು ಪಡೆದುಕೊಳ್ಳುವ ಅಗತ್ಯವಿಲ್ಲ ಎಂದು ವಿಚಾರಣೆ ವೇಳೆ ಎಸ್ಐಟಿ ಪರ ಅಭಿಯೋಜಕ ಬಿ.ಎನ್.ಜಗದೀಶ್ ಹೇಳಿದರು. ಈ ಬೆಳವಣಿಗೆ ಬೆನ್ನಲ್ಲೇ ರೇವಣ್ಣ ಪರ ವಕೀಲರು, ಅರ್ಜಿ ಹಿಂಪಡೆಯುವುದಾಗಿ ನ್ಯಾಯಾಲಯದ ಗಮನಕ್ಕೆ ತಂದರು.
ಭವಾನಿ ರೇವಣ್ಣಗೂ ಬುಲಾವ್
ಮೈಸೂರಿನಲ್ಲಿ ದಾಖಲಾದ ಅಪಹರಣ ಪ್ರಕರಣದಲ್ಲಿ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಬುಲಾವ್ ನೀಡಿದೆ. ಈ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರ ಹೆಸರು ಥಳುಕು ಹಾಕಿಕೊಂಡಿರುವ ಹಿನ್ನೆಲೆಯಲ್ಲಿ ಅವರಿಂದ ಪ್ರಕರಣದ ಮಾಹಿತಿ ಪಡೆಯಲು ಎಸ್ಐಟಿ ನೋಟಿಸ್ ನೀಡಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pen Drive Case 4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?
Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್
ಡಿಕೆಶಿ ಕಾಂಗ್ರೆಸ್ಗೆ ಕಾಲಿಡುವ ಮೊದಲೇ ನೋಟಿಸ್, ಉಚ್ಚಾಟನೆ ಎಲ್ಲಾ ನೋಡಿದ್ದೀನಿ…; ರಾಜಣ್ಣ
CM Siddaramaiah ರೈತರಿಗೆ ನಿತ್ಯ 5 ಕೋಟಿ ರೂ. ಪ್ರೋತ್ಸಾಹ ಧನ
KMF ಹಾಲಿನ ಹೊಳೆ: ನಿತ್ಯ 1 ಕೋಟಿ ಲೀಟರ್!-ಕೆಎಂಎಫ್ ಇತಿಹಾಸದಲ್ಲೇ ದಾಖಲೆ ಕ್ಷೀರ ಸರಬರಾಜು
MUST WATCH
ಹೊಸ ಸೇರ್ಪಡೆ
Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್
Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?
Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ
Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?
Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್ ದೋಷಮುಕ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.