ಭಾರತ್ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ
Team Udayavani, May 4, 2024, 12:27 AM IST
ಕುಮಟಾ: ಭಾರತ್ ಜೋಡೋ ಯಾತ್ರೆಯಿಂದ ದೇಶದ ಜನರ ಮನಸ್ಸು ಬೆಸೆದವರು ಕಾಂಗ್ರೆಸ್ ವರಿಷ್ಠ ನಾಯಕ ರಾಹುಲ್ ಗಾಂಧಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಕುಮಟಾದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರಜಾಧ್ವನಿ-2 ಸಮಾವೇಶದಲ್ಲಿ ಮಾತನಾಡಿದ ಅವರು, ಉತ್ತರ ಕನ್ನಡ ರಾಜಕಾರಣದಲ್ಲಿ ಬದಲಾವಣೆ ಕಾಣುತ್ತಿದೆ. ಕಾಂಗ್ರೆಸ್ನವರು ಒಟ್ಟಾಗಿದ್ದು, ಈ ಬಾರಿ ನಮ್ಮ ಅಭ್ಯರ್ಥಿ ಗೆಲ್ಲಿಸಿ. ಹಿಂದೆ ಡಬ್ಬಲ್ ಎಂಜಿನ್ ಸರಕಾರ ಇತ್ತು. ಅವರು ಮಾಡಿದ್ದೇನು? ಅವರ ಕೃತ್ಯಗಳಿಂದ ಜನ ನಮ್ಮನ್ನು ಆಯ್ಕೆ ಮಾಡಿದ್ದಾರೆ. ಬಿಜೆಪಿ ಮಾತು ಕೊಟ್ಟಂತೆ ನಡೆದಿಲ್ಲ, ರೈತರ ಆದಾಯ ಹೆಚ್ಚಾಗಿಲ್ಲ ಎಂಬುದನ್ನು ಬಿಜೆಪಿಯವರು ನಿಮ್ಮ ಬಳಿ ಬಂದಾಗ ಪ್ರಶ್ನಿಸಿ. ನಾವು ನುಡಿದಂತೆ ನಡೆದಿದ್ದೇವೆ. ಉತ್ತರ ಕನ್ನಡ ಜಿಲ್ಲೆಯವರು ಉತ್ತಮ ಸಂಸ್ಕೃತಿ ಜನ. ನೀವು ಯೋಚಿಸಿ, ಬಿಜೆಪಿಯಿಂದ ಒಂದು ಒಳ್ಳೆಯ ಕೆಲಸ ಆಗಿದ್ದರೆ ಹೇಳಿ ಎಂದು ಸಭಿಕರನ್ನು ಪ್ರಶ್ನಿಸಿದರು.
ಬಂಗಾರಪ್ಪ ಆಶ್ರಯ, ಆರಾಧನಾ, ವಿಶ್ವ ಯೋಜನೆ ತಂದರು. ದೇವರಾಜ ಅರಸು ಕಾಲದಲ್ಲಿ ಉಳುವವರಿಗೆ ಭೂಮಿ ಕೊಟ್ಟೆವು. ಗುಂಡೂರಾವ್, ಕೃಷ್ಣ, ಸಿದ್ದರಾಮಯ್ಯ ಒಳ್ಳೆಯ ಕಾರ್ಯಕ್ರಮ ಕೊಟ್ಟಿದ್ದಾರೆ. ಗ್ಯಾರಂಟಿ ಯೋಜನೆಗಳು ಜನರ ಬದುಕಿನಲ್ಲಿ ಹೊಸ ಬೆಳಕು ತಂದಿವೆ. ನೀವು ಇವುಗಳನ್ನು ನೆನಪಿಸಿಕೊಳ್ಳಿ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸಹಿ ಮಾಡಿದ ಕಾರ್ಡ್ ನಿಮಗೆ ತಲುಪಿದೆ. ಮಹಾಲಕ್ಷ್ಮಿ ವರ್ಷಕ್ಕೆ ಒಂದು ಲಕ್ಷ ತರುವವಳಿದ್ದಾಳೆ. ಈಗ ಗೃಹಲಕ್ಷ್ಮಿಈಗಾಗಲೇ ನಿಮ್ಮ ಮನೆ ಬೆಳಗಿದ್ದಾಳೆ ಎಂದರು.
ಕುಮಟಾದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಾಡುವುದು ಖಚಿತ. ಜನರಿಗೆ ಆರೋಗ್ಯ ವಿಮೆ, ಆಸ್ಪತ್ರೆ ಬಿಲ್ ಝೀರೋ ಬರುವಂತೆ ಮಾಡುತ್ತೇವೆ. ದಕ್ಷಿಣ ಕನ್ನಡದವರು ಕಟ್ಟಿದ ಬ್ಯಾಂಕ್ಗಳನ್ನು ಬಿಜೆಪಿಯವರು ಮುಚ್ಚಿದರು. ಕರ್ನಾಟಕಕ್ಕೆ ದ್ರೋಹ ಮಾಡಿದರು. ಹಾಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಕ್ಷೇತ್ರಗಳನ್ನು ಗೆಲ್ಲಿಸಿ ಕೊಡಿ ಎಂದು ಮನವಿ ಮಾಡಿದರು. ಅಂಜಲಿ ನಿಂಬಾಳ್ಕರ್ ಹೆಸರು ಹೇಳದೇ ಡಿ.ಕೆ. ಶಿವಕುಮಾರ್ ಮತಯಾಚನೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಬಸ್ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು
Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ
Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ
Sirsi: ದೇಶಾಪಂಡೆ, ಕಾಗೇರಿ ಅವರ ಭಾಷಣ ಶೈಲಿ ಬದಲಾಗಿದೆ ಅಂದಿದ್ದು ಯಾಕೆ?
Dandeli: ಬೀದಿನಾಯಿ ದಾಳಿ.. ಬಾಲಕನಿಗೆ ಗಾಯ: ಬೀದಿನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.