Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ


Team Udayavani, May 4, 2024, 1:33 AM IST

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

ಕಾಸರಗೋಡು: ಕೇರಳ ಮತ್ತು ದಕ್ಷಿಣ ತಮಿಳುನಾಡಿನ ಕರಾವಳಿ ಪ್ರದೇಶಗಳಲ್ಲಿ ಹಠಾತ್‌ ಸಮುದ್ರ ಉಕ್ಕೇರುವ ಸಾಧ್ಯತೆ ಇದೆ ಎಂದು ಹವಾಮಾನ ಸಂಸ್ಥೆ ರೆಡ್‌ ಅಲರ್ಟ್‌ ಘೋಷಿಸಿದೆ.

ಈ ಪ್ರಕ್ರಿಯೆ ಶನಿವಾರ ಮತ್ತು ರವಿವಾರ ನಡೆಯುವ ಸಂಭವ ವಿದೆ. ಕರ್ನಾಟಕ ಕರಾವಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರವು ಹಠಾತ್‌ ಉಬ್ಬರವಿಳಿತದ ವಿದ್ಯಮಾನಕ್ಕೆ ಸಂಬಂಧಿಸಿ ಮೊದಲ ಬಾರಿಗೆ ರೆಡ್‌ ಅಲರ್ಟ್‌ ಘೋಷಿಸಿದೆ.

ಕೇರಳ ಮತ್ತು ದಕ್ಷಿಣ ತಮಿಳುನಾಡಿನ ಕರಾವಳಿ ಪ್ರದೇಶಗಳಲ್ಲಿ ಶನಿವಾರ ಮುಂಜಾನೆ 2.30ರಿಂದ ರವಿವಾರ ರಾತ್ರಿ 11.30ರ ವರೆಗೆ ಅವಧಿಯಲ್ಲಿ ಸಮುದ್ರದಲ್ಲಿ ಹಠಾತ್‌ ಉಬ್ಬರ ಕಾಣಿಸುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಬೃಹತ್‌ ಅಲೆಗಳು ಎದ್ದು ಸಮುದ್ರದ ಪ್ರಕ್ಷುಬ್ಧಗೊಳ್ಳುವ ಸಾಧ್ಯತೆಯಿದೆ. ಆದಾಗ್ಯೂ ಇದು ಸುನಾಮಿ ತರಹದ ವಿದ್ಯಮಾನವಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಅವಧಿಯಲ್ಲಿ 0.5ರಿಂದ 1.7 ಮೀಟರ್‌ ಎತ್ತರದ ಅಲೆಗಳು ಏಳುವ ಸಾಧ್ಯತೆ ಇದೆ. ಮೀನುಗಾರಿಕೆ ಹಡಗು ಗಳನ್ನು ಬಂದರಿನಲ್ಲಿ ಸುರಕ್ಷಿತವಾಗಿ ಲಂಗರು ಹಾಕುವಂತೆ, ಜನರು ಅಪಾಯದ ವಲಯಗಳಿಂದ ದೂರ ವಿರುವಂತೆ ಸೂಚಿಸಲಾಗಿದೆ.

ಘರ್ಷಣೆಯ ಅಪಾಯವನ್ನು ತಪ್ಪಿಸಲು ಬೋಟ್‌ಗಳ ನಡುವೆ ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳುವುದು ಅಗತ್ಯ. ಮೀನುಗಾರಿಕೆ ಉಪಕರಣಗಳ ಸುರಕ್ಷೆ ಬಗ್ಗೆ ಎಚ್ಚರಿಕೆ ವಹಿಸಬೇಕು. ಬೀಚ್‌ ಪ್ರವಾಸ ಮತ್ತು ಸಮುದ್ರದಲ್ಲಿನ ಚಟುವಟಿಕೆಗಳಿಂದ ಸಂಪೂರ್ಣವಾಗಿ ದೂರವಿರಲು ಸಲಹೆ ನೀಡಲಾಗಿದೆ.

ಡಿಸಿ ಸೂಚನೆ: ಸಮುದ್ರದಲ್ಲಿ ಭಾರೀ ತೆರೆಗಳ ಸಾಧ್ಯತೆಯ ಹಿನ್ನೆಲೆ ಯಲ್ಲಿ ಕಾಸರಗೋಡು ಸಮುದ್ರ ಕಿನಾರೆಗೆ ಪ್ರವಾಸಿ ಗರು ತೆರಳದಂತೆ ಜಿಲ್ಲಾಧಿಕಾರಿ ಮುನ್ನೆಚ್ಚರಿಕೆ ನೀಡಿದ್ದಾರೆ. ಬಿಆರ್‌ಡಿಸಿಯ ಫ್ಲೋಟಿಂಗ್‌ ಬ್ರಿಜ್‌ಅನ್ನು ತಾತ್ಕಾಲಿಕವಾಗಿ ಮುಚ್ಚುಗಡೆ ಗೊಳಿಸಲಾಗಿದೆ. ಬೇಕಲ್‌, ಪಳ್ಳಿಕೆರೆ ಬೀಚ್‌, ಹೊಸದುರ್ಗ, ಕೈಟ್‌ ಬೀಚ್‌, ಚಂಬರಿಕ, ಅಳಿತ್ತಲ, ವಲಿಯಪರಂಬ, ಕಣ್ವತೀರ್ಥ ಬೀಚ್‌ಗಳಿಗೆ ಪ್ರವಾಸಿಗರು ತೆರಳದಂತೆ ಸೂಚಿಸಲಾಗಿದೆ.

ತುರ್ತು ಅಗತ್ಯಗಳಿಗೆ ಶಾಲೆಗಳನ್ನು ಸಜ್ಜಾಗಿಡಲು ಆಯಾಯ ತಹಶೀಲ್ದಾರ್‌ಗಳಿಗೆ ನಿರ್ದೇಶ ನೀಡಲಾಗಿದೆ.

ಕಳ್ಳ ಕಡಲ್‌
ಇಂತಹ ಕಡಲುಬ್ಬರದ ಪ್ರಕ್ರಿಯೆಯನ್ನು ಕಳ್ಳ ಕಡಲ್‌ ಎಂಬುದಾಗಿ ಸ್ಥಳೀಯ ವಾಗಿ ಕರೆಯಲಾಗುತ್ತದೆ. ಯಾವುದೇ ಸೂಚನೆ ಇರದೆ ಕಡಲಿನ ನೀರು ಏಕಾಏಕಿ ಮೇಲೇರುವುದಕ್ಕೆ ಈ ರೀತಿ ಹೇಳಲಾಗುತ್ತಿದೆ.

ಕರ್ನಾಟಕಕ್ಕೆ ಆರೆಂಜ್‌ ಅಲರ್ಟ್‌
ಕರ್ನಾಟಕ ಕರಾವಳಿಯ ಕಿನಾರೆಯ ಕೆಲವು ಕಡೆ ಸಮುದ್ರದಲ್ಲಿ ಹಠಾತ್‌ ಉಬ್ಬರ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಸಂಸ್ಥೆ ತಿಳಿಸಿದೆ. ಇಲ್ಲಿ 0.5ರಿಂದ 1.5 ಮೀ. ಎತ್ತರದ ಅಲೆಗಳು ಏಳುವ ಸಾಧ್ಯತೆ ಇದೆ. ಆದುದರಿಂದ ಮೀನುಗಾರರು, ಪ್ರವಾಸಿಗರು ಎಚ್ಚರಿಕೆಯಿಂದ ಇರಬೇಕೆಂದು ತಿಳಿಸಲಾಗಿದೆ.

ಟಾಪ್ ನ್ಯೂಸ್

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Democracy-day

Democracy Day: ಕೊಡಗು: 72.2 ಕಿ.ಮೀ. ಅಂತರದ ಮಾನವ ಸರಪಳಿ

Accident-Logo

Kasaragodu: ಸ್ಕೂಟರ್‌ – ಕಾರು ಢಿಕ್ಕಿ: ಯುವಕ ಸಾವು

Z-THARUN

Madikeri: ಶುಂಠಿ ತುಂಬಿದ ಎತ್ತಿನಗಾಡಿ ಬಿದ್ದು ಬಾಲಕ ಸಾವು

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.