ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಸುಪ್ರೀಂ ಕೋರ್ಟ್‌ಗೆ ಮೀಸಲಾತಿ ಮುಂದುವರೆಸುವುದಾಗಿ ಅಫಿಡವಿಟ್‌ ಸಲ್ಲಿಸಿದೆ.

Team Udayavani, May 4, 2024, 6:00 PM IST

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

■ ಉದಯವಾಣಿ ಸಮಾಚಾರ
ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿ ಅವರು ಸೇರಿದಂತೆ ಬಿಜೆಪಿಯವರಿಗೆ ಕನಿಷ್ಠ ಜ್ಞಾನವಿಲ್ಲ. ಮುಸ್ಲಿಂರ ಮೀಸಲಾತಿ ವಿಚಾರದಲ್ಲಿ ಬಿಜೆಪಿಗರು ಹಸಿ ಸುಳ್ಳು ಹೇಳುತ್ತಿದ್ದು, ಆ ಪಕ್ಷ ಸುಳ್ಳು ಹೇಳುವ ಸಂಸ್ಥೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್‌ ಎಸ್‌. ತಂಗಡಗಿ ಅವರು ಗುಡುಗಿದರು.

ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕರೂರು ಮತ್ತು ಸಿರಿಗೇರಿಯಲ್ಲಿ ಶುಕ್ರವಾರ ಕಾಂಗ್ರೆಸ್‌ ಅಭ್ಯರ್ಥಿ ರಾಜಶೇಖರ್‌ ಹಿಟ್ನಾಳ್‌ ಅವರ ಪರ ಮತ ಪ್ರಚಾರ ನಡೆಸಿ ಸಚಿವರು ಮಾತನಾಡಿದರು.

ಚಿನ್ನಪ್ಪರೆಡ್ಡಿ ಅವರ ಆಯೋಗದ ಶಿಫಾರಸ್ಸಿನಂತೆ ಮುಸ್ಲಿಮರಿಗೆ 20 ವರ್ಷಗಳ ಹಿಂದೆ ಶೇ.4ರಷ್ಟು ಮೀಸಲಾತಿ ನೀಡಲಾಗಿದೆ. ಈ ಮೀಸಲಾತಿಯನ್ನು ತೆಗೆಯಲು ಬಸವರಾಜ ಬೊಮ್ಮಾಯಿ ಸರ್ಕಾರ ಪ್ರಯತ್ನಿಸಿತ್ತು. ಬಳಿಕ ಬಸವರಾಜ ಬೊಮ್ಮಾಯಿ ಅವರ ಸರ್ಕಾರವೇ ಸುಪ್ರೀಂ ಕೋರ್ಟ್‌ಗೆ ಮೀಸಲಾತಿ ಮುಂದುವರೆಸುವುದಾಗಿ ಅಫಿಡವಿಟ್‌ ಸಲ್ಲಿಸಿದೆ. ಈಗಲೂ ಹಿಂದಿನಂತೆ ಮೀಸಲಾತಿ ಮುಂದುವರೆದಿದೆ. ಈ ವಿಚಾರದಲ್ಲಿ ಬಿಜೆಪಿಗರು ಸುಳ್ಳು ಹೇಳುತ್ತಿದ್ದಾರೆ ಎಂದರು.

ಸುಳ್ಳು ಹೇಳುವುದರಲ್ಲಿ ಬಿಜೆಪಿಯಲ್ಲಿ ಸ್ಪರ್ಧೆ ಪ್ರಾರಂಭಗೊಂಡಿದೆ. ಜನತೆ ಮುಂದೆ ವಾಸ್ತವ ಸತ್ಯವನ್ನು ಹೇಳಿ ಮತ ಕೇಳಲಿ. ಅದನ್ನು ಬಿಟ್ಟು ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. ಹಿಂದುಳಿದ ವರ್ಗದ ಮೀಸಲಾತಿಯನ್ನು ಕಾಂಗ್ರೆಸ್‌ ಮುಸ್ಲಿಂ ಸಮುದಾಯಕ್ಕೆ ಕೊಟ್ಟಿದೆ ಎಂದು ಸುಳ್ಳು ಹೇಳುತ್ತಾರೆ.

ಈ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಅವರಾಗಲಿ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಾಗಲಿ ಅಥವಾ ಇಲಾಖಾ
ಮಂತ್ರಿಯಾಗಿ ನಾನು ಮೀಸಲಾತಿ ಬಗ್ಗೆ ಹೇಳಿದ್ದೀನಾ ? ಪ್ರಧಾನ ಮಂತ್ರಿಗಳಿಗೂ ಈ ಬಗ್ಗೆ ತಿಳಿವಳಿಕೆ ಇಲ್ಲವೇ ? ಈ ಬಗ್ಗೆ ಪತ್ರಿಕೆಗಳಲ್ಲಿ ಸುಳ್ಳಿನ ಜಾಹೀರಾತು ನೀಡುತ್ತಿದ್ದಾರೆ. ಈ ದೇಶ ಕಂಡಂತಹ ಮಹಾನ್‌ ಸುಳ್ಳಿನ ಪ್ರಧಾನಿ ನರೇಂದ್ರ ಮೋದಿ ಅವರು ಎಂದು ಕಿಡಿಕಾರಿದರು. ಅತೀ ಹೆಚ್ಚು ಸುಳ್ಳು ಹೇಳುವವರು ಬಳ್ಳಾರಿಯಲ್ಲಿದ್ದು, ಅದರಲ್ಲಿ ಓರ್ವ ಮಹಾಶಯ ನಮ್ಮ ಜಿಲ್ಲೆಗೆ ಬಂದು ಶಾಸಕರಾಗಿದ್ದಾರೆ. ನಿತ್ಯ ಜನಕ್ಕೆ ಸುಳ್ಳು ಹೇಳುವುದನ್ನೇ ಪರಿಪಾಠ ಮಾಡಿಕೊಂಡಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿ ಅವರ ವಿರುದ್ಧ ವಾಗ್ಧಾಳಿ ನಡೆಸಿದರು.

ದೇಶಕ್ಕೆ ಮೋದಿ ಕೊಡುಗೆ ಏನು?
ಬಿಜೆಪಿ ಕೇಂದ್ರದಲ್ಲಿ ಅ ಕಾರಕ್ಕೆ ಬರುವ ಮುನ್ನ ಪೆಟ್ರೋಲ್‌ 50 ರೂ.ಗೆ ಕೊಡುತ್ತೇವೆ ಎಂದಿದ್ದರು. ಹತ್ತು ವರ್ಷಗಳ ಹಿಂದೆ 45 ರೂ.ಇದ್ದ ಪೆಟ್ರೋಲ್‌ ದರ 100 ರೂ.ಗೆ, 450 ರೂ.ಇದ್ದ ಅಡುಗೆ ಅನಿಲ 1100 ರೂ.ಗೆ ತಂದು ನಿಲ್ಲಿಸಿದ್ದರು. ಬಿಜೆಪಿಯವರು ಅಂಬಾನಿ, ಅದಾನಿ ಅವರನ್ನು ಮಾತ್ರ ಇನ್ನಷ್ಟು ಶ್ರೀಮಂತರನ್ನಾಗಿಸಲು ಮುಂದಾಗಿದ್ದಾರೆ. ಕಾಂಗ್ರೆಸ್‌ ಇಡೀ ದೇಶದ ಜನರನ್ನು ಶ್ರೀಮಂತರನ್ನಾಗಿಸಲು ಮುಂದಾಗಿದೆ. ಗಡ್ಡ ಬಿಟ್ಟರೆ ವಿಶ್ವಗುರು ಆಗಲ್ಲ.

ದೇಶದ ರೈತರ, ಬಡವರು, ಮಧ್ಯಮ ವರ್ಗ ಹಾಗೂ ಕಾರ್ಮಿಕರಿಗೆ ಕೊಡುಗೆ ನೀಡಬೇಕು. ನಿಜಕ್ಕೂ ಈ ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಕೊಡುಗೆ ಏನು ಎಂದು ಸಚಿವರು ಖಾರವಾಗಿ ಪ್ರಶ್ನಿಸಿದರಲ್ಲದೇ, ಬಿಜೆಪಿ ಅಭ್ಯರ್ಥಿಗಳು ಮೋದಿ ನೋಡಿ ವೋಟ್‌ ಹಾಕಿ ಅಂತೀರಾಲ್ಲಪ್ಪ, ನಿಮ್ಮ ಹೆಸರಲ್ಲಿ ವೋಟ್‌ ಕೇಳಲು ಧಮ್ಮು ಇಲ್ವಾ ಎಂದು ಸವಾಲು ಹಾಕಿದರು. ಮಾಜಿ ಸಂಸದ ಕರಡಿ ಸಂಗಣ್ಣ, ಶಾಸಕರಾದ ಬಿ.ಎಂ.ನಾಗರಾಜ್‌, ಗಣೇಶ್‌ ಪ್ರಸಾದ್‌, ಕೊಪ್ಪಳ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ನಾಪುರ, ಕೊಪ್ಪಳ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಾಜಶೇಖರ್‌ ಹಿಟ್ನಾಳ್‌, ಸ್ಥಳೀಯ ಕಾಂಗ್ರೆಸ್‌ ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

2-gangavathi

Gangavathi: ಪ್ಲಾಸ್ಟಿಕ್ ತಿಂದ ಕರುವಿಗೆ ಉಸಿರಾಟ ತೊಂದರೆ; ನೆರವಿಗೆ ಬಂದ ಕ್ರಿಕೆಟ್ ಆಟಗಾರರು

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

5

Gangavathi: ಐತಿಹಾಸಿಕ ಪಂಪಾ ಸರೋವರಕ್ಕೆ ಬೇಕಿದೆ ಮೂಲಸೌಕರ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.