Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

ಕಾಂಗ್ರೆಸ್ ಪಕ್ಷದ ಸ್ವಾಭಿಮಾನಿ ಮತದಾರರ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸ್ವಾಮೀಜಿ

Team Udayavani, May 4, 2024, 9:49 PM IST

Dingaleshwara (2)

ಧಾರವಾಡ : ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ವಿರುದ್ದ ರಣಕಹಳೆ ಮೊಳಗಿಸಿರುವ ಶಿರಹಟ್ಟಿಯ ಫಕ್ಕೀರ ದಿಂಗಾಲೇಶ್ವರ ವಿರುದ್ದವೇ ಎಫ್‌ಐಆರ್ ದಾಖಲಾಗಿದೆ.

ಮೇ 2 ರಂದು ನವಲಗುಂದ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಸ್ವಾಭಿಮಾನಿ ಮತದಾರರ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸ್ವಾಮೀಜಿ, ಪ್ರಹ್ಲಾದ ಜೋಶಿ ವಿರುದ್ದ ಭಾಷಣ ಮಾಡಿದ್ದರು. ಈ ಭಾಷಣದಲ್ಲಿನ ಹೇಳಿಕೆ ಆಧಾರಿಸಿ ಜಾತಿ, ಸಮುದಾಯ, ಧರ್ಮದ ಹೆಸರಿನಲ್ಲಿ ವಿಭಿನ್ನ ವರ್ಗಗಳ ನಾಗರಿಕರ ನಡುವೆ ವೈರತ್ವ ಮತ್ತು ದ್ವೇಷ ಭಾವನೆ ಉಂಟು ಮಾಡುವ ಹೇಳಿಕೆ ನೀಡಿದ ಅಪರಾಧದ ಆರೋಪದಡಿ ಶ್ರೀಗಳ ವಿರುದ್ದ ನವಲಗುಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಸಮಾವೇಶದಲ್ಲಿದ್ದ ಚುನಾವಣಾ ಅಽಕಾರಿ ಆರ್.ಕುಮಾರಸ್ವಾಮಿ ಅವರಿಂದ ಈ ದೂರು ಸಲ್ಲಿಸಲಾಗಿದೆ.

ದೂರಿನಲ್ಲೇನಿದೆ?
ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರು ತಮ್ಮ ಜಾತಿ ಅವರನ್ನು ಪ್ರೀತಿ ಮಾಡಿದಷ್ಟು ಬೇರೆ ಯಾವ ಜಾತಿ ಅವರನ್ನು ಮಾಡಿಲ್ಲ. ನಿಮ್ಮ ಲಿಂಗಾಯತ ಜಾತಿ ಒಳಗ ಯಾರೂ ಇಲ್ಲ ಏನರೀ ನಿಮ್ಮ ಅವರಿಗೆ ಪೋನ್ ಮಾಡಿ ಕೊಡ್ರಿ ನಮಗೆ ಪೋನ್ ಮಾಡಬ್ಯಾಡಿ ಅಂತ ಹೇಳುವ ಈ ಪಾಪಿಯನ್ನು ಹೊರಗ ಹಾಕುವರೆಗೂ ಸಮಾಧಾನ ಇಲ್ಲ, ಮೊದಲು ಎಲ್ಲ ಜಾತಿ ಅವರು ಭಸ್ಮ ಹಚ್ಚುಗೊಳ್ಳುತ್ತಿದ್ದರು. ಭಸ್ಮ ಹೋಗಿ ಕುಂಕುಮ ಬಂದರೂ ಸುಮ್ಮ ಇದೀವಿ, ಭಂಡಾರ ಹೋಗಿ ಕುಂಕುಮ ಬಂದರೂ ಸುಮ್ಮನೆ ಇದೀವಿ. ನಮಸ್ಕಾರ, ಶರಣು ಶರಣಾರ್ಥಿ ಹೋಗಿ ಹರಿ ಓಂ, ಜೈ ಶ್ರೀರಾಮ್ ಪೋನ್‌ನಲ್ಲಿ ಬಂದರೂ ಸುಮ್ಮನೆ ಇದೀವಿ. ಏನೇನೆಲ್ಲಾ ನೋಡಿ ಸುಮ್ಮನೆ ಇದ್ದರೂ ಕೂಡ ಯಾವ ಸ್ಥಾನಕ್ಕೆ ಬಂದಿದೆ ಅಂದರೆ ನಾವು ಬದುಕೇನೂ ಉಪಯೋಗವಿಲ್ಲ. ಈ ನಾಡಿನೊಳಗೆ ಈ ಸಮಾಜದೊಳಗೆ ಹುಟ್ಟಿ ಉಪಯೋಗವಿಲ್ಲದಂತಹ ಕೆಟ್ಟ ಪರಿಸ್ಥಿತಿ ಬಂದ ಮೇಲೆ ಇವತ್ತಿನ ದಿವಸ ಅನಿವಾರ್ಯವಾಗಿ ಹೊರಗೆ ಬಂದೀವಿ.. ಹೀಗೆ ಸ್ವಾಮೀಜಿ ನೀಡಿದ ವಿವಿಧ ಹೇಳಿಕೆಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈಗಾಗಲೇ ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ದೂರುಗಳಿದ್ದು, ಇದು ಸೇರಿ ನಾಲ್ಕು ದೂರು ದಾಖಲಾದಂತಾಗಿದೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.