![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, May 5, 2024, 12:16 AM IST
ಹುಣಸೂರು: ಶಾಸಕ ಎಚ್.ಡಿ.ರೇವಣ್ಣನ ಕಡೆಯವರು ಅಪಹರಿಸಿದ್ದಾರೆ ಎನ್ನಲಾಗಿದ್ದ ಮಹಿಳೆಯನ್ನು ಎಸ್ಐಟಿ ತಂಡ ಪತ್ತೆ ಮಾಡಿದೆ.
ಪ್ರಕರಣದ ಬೆನ್ನತ್ತಿದ ಎಸ್ಐಟಿ ತಂಡ ಆಕೆಗೆ ಎಚ್.ಡಿ.ರೇವಣ್ಣನವರ ಬಳಿ ಈ ಹಿಂದೆ ಆಪ್ತ ಕಾರ್ಯದರ್ಶಿಯಾಗಿದ್ದ ಹುಣಸೂರು ತಾಲೂಕಿನ ಕಾಳೇನ ಹಳ್ಳಿಯ ರಾಜಗೋಪಾಲರ ತೋಟದ ಮನೆಯಲ್ಲಿ ಆಶ್ರಯ ಕಲ್ಪಿಸಲಾಗಿದೆ ಎಂಬ ಸುಳಿವಿನಂತೆ, ಶುಕ್ರವಾರ ಮಧ್ಯರಾತ್ರಿ 20 ಮಂದಿಯ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲಿಸಿತು. ಆದರೆ ಆಕೆಯ ಸುಳಿವು ಸಿಕ್ಕಿರಲಿಲ್ಲ.
ಶನಿವಾರವೂ ತೋಟದಲ್ಲಿ ಬೆಳ್ಳಂ ಬೆಳಗ್ಗೆ ತೀವ್ರ ಶೋಧಿಸಿದರೂ ಮಹಿಳೆ ಸುಳಿವು ಸಿಕ್ಕಿರಲಿಲ್ಲ. ಕೊನೆಗೆ ಕಾರ್ಮಿಕರನ್ನು ವಿಚಾರಿಸಿದಾಗ, ಈಕೆಯನ್ನು ಪಕ್ಕದ ಕಾಫಿ ತೋಟದ ಮನೆಯಲ್ಲಿ ಬಚ್ಚಿಡಲಾಗಿದೆ ಎಂಬ ಮಾಹಿತಿ ಸಿಕ್ಕಿತು. ಆದರೆ ತೋಟವನ್ನೆಲ್ಲ ತಡಕಾಡಿದರೂ ಪ್ರಯೋಜನವಾಗಲಿಲ್ಲ.
ಎಸ್ಐಟಿ ಪೊಲೀಸರು ಬರುವ ಸುಳಿವರಿತು, ತೋಟದಿಂದ ಪಕ್ಕದ ಹೊಸ ವಾರಂಚಿ ಕಡೆಯಿಂದ ಖಾಸಗಿ ವಾಹನದಲ್ಲಿ ಹುಣಸೂರಿಗೆ ಬಂದು ಲಾಲ್ಬಂದ್ ಬೀದಿಯ ಮನೆಯೊಂದರಲ್ಲಿ ಆಶ್ರಯ ಪಡೆದಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಮನೆ ಮೇಲೆ ದಾಳಿ ನಡೆಸಿ ಪೊಲೀಸರು ಆಕೆಯನ್ನು ವಶಕ್ಕೆ ಪಡೆದು ವಿಚಾರಣೆಗಾಗಿ ಕರೆದೊಯ್ದಿದ್ದಾರೆ.
ಮಹಿಳೆ ಅಲ್ಲಿಂದ ತಪ್ಪಿಸಿಕೊಂಡು ಬಂದರೋ ಅಥವಾ ರೇವಣ್ಣ ಕಡೆಯವರೇ ಸ್ಥಳಾಂತರ ಮಾಡಿದರೋ ಎಂಬುದು ತಿಳಿದುಬಂದಿಲ್ಲ. ಈ ನಡುವೆ ತೋಟದ ಮಾಲಕ ರಾಜಗೋಪಾಲ್ ಹಾಗೂ ಕೆಲವರನ್ನು ವಿಚಾರಣೆಗಾಗಿ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.