ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?


Team Udayavani, May 6, 2024, 6:35 AM IST

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಸುರತ್ಕಲ್‌: ಒಂದೆಡೆ ತೀವ್ರವಾದ ಜಲಕ್ಷಾಮವನ್ನು ಎದುರಿಸುತ್ತಿರುವ ರೈತರು ಇದೀಗ ಕೃಷಿಗೆ ಆಸರೆಯಾಗಿದ್ದ ಸೂರಿಂಜೆ ಮೂಡಬೆಟ್ಟು ಬಳಿಯ ಕಿಂಡಿ ಅಣೆಕಟ್ಟು ಕುಸಿತವಾಗಿ ರುವುದರಿಂದ ಮುಂದಿನ ಬಾರಿ ಮಳೆ ನೀರನ್ನು ಹಿಡಿದಿಡುವ ಬಗ್ಗೆ ಚಿಂತಾಕ್ರಾಂತರಾಗಿದ್ದಾರೆ.

ಈ ನಡುವೆ ಅಕ್ರಮ ಮರಳುಗಾರಿಕೆಯಿಂದಾಗಿ ಸೂರಿಂಜೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪುಚ್ಚಾಡಿ ಹಾಗೂ ಶಿಬರೂರು ಕಿಂಡಿ ಅಣೆಕಟ್ಟಿಗೂ ಕಂಟಕ ಎದುರಾಗಬಹುದೇ ಎಂಬ ಆತಂಕ ತಲೆದೋರಿದೆ. ರಾತ್ರಿಯಾಗುತ್ತಿದ್ದಂತೆ ಸಿಕ್ಕ ಸಿಕ್ಕಲ್ಲಿ ಜೆಸಿಬಿ, ಡ್ರೆಜ್ಜಿಂಗ್‌ ಯಂತ್ರ, ದೋಣಿ ಬಳಸಿ ಮರಳು ತೆಗೆದು ಸಾಗಿಸುವ ಕಾರ್ಯ ನಡೆ ಯುತ್ತಿದ್ದು, ಇದರಿಂದ ಕಿಂಡಿಅಣೆಕಟ್ಟುಗಳ ಮೇಲೆ ಬೀಳುವ ದುಷ್ಪರಿಣಾಮವನ್ನು ರೈತರು ಎದುರಿಸುವಂತಾಗಿದೆ.

ನಂದಿನಿ ನದಿಗೆ ಒಟ್ಟು 17 ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲಾಗಿದೆ. ಇದನ್ನು ಕಾಲಕಾಲಕ್ಕೆ ಪರಿಶೀಲಿಸಿ ಸೋರಿಕೆ, ಬಿರುಕು ಮತ್ತಿತರ ಅಪಾಯದ ಕುರಿತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಗ್ರಾಮ ಪಂಚಾಯತ್‌ ಸಹಯೋಗದಲ್ಲಿ ಮಾಹಿತಿ ಕಲೆ ಹಾಕಿ ನೀಡಬೇಕಿದೆ. ಮಾಹಿತಿ ನೀಡುವ ಕೆಲಸ ಆಗಿದ್ದರೂ ಸೂಕ್ತ ಸಂದರ್ಭದಲ್ಲಿ ಕ್ರಮ ಕೈಗೊಳ್ಳದಿರುವುದು ದುರಂತಕ್ಕೆ ಕಾರಣವಾಗಿದೆ. ಅಣೆಕಟ್ಟಿನ 500 ಮೀಟರ್‌ ಸುತ್ತಮುತ್ತ ಮರಳು ತೆಗೆಯಲು ನಿರ್ಬಂಧವಿದೆ. ಆದರೆ ಮರಳು ಹೆಚ್ಚಾಗಿ ಶೇಖರಣೆಯಾಗುವುದೇ ಇಂತಹ ಅಣೆಕಟ್ಟುಗಳ ಬಳಿ ಎಂಬುದು ಸಾಮಾನ್ಯ ವಿಚಾರ.

ಅಧಿಕಾರಿಗಳ ತಂಡ ಭೇಟಿ
ಅಣೆಕಟ್ಟು ಕುಸಿದ ಸ್ಥಳಕ್ಕೆ ಸಹಾಯಕ ಕಮಿಷನರ್‌ ಹರ್ಷವರ್ಧನ್‌, ತಹಶೀಲ್ದಾರ್‌ ಪ್ರಶಾಂತ್‌ ಪಾಟೀಲ್‌, ನೀರಾವರಿ ಇಲಾಖೆ ಅಧಿಕಾರಿಗಳು, ಎಂಜಿನಿಯರ್‌ಗಳು ಭೇಟಿ ನೀಡಿ ಪರಿಶೀಲಿಸಿದರು. ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಿ, ಕುಸಿತದ ಕುರಿತಂತೆ ಮಾಹಿತಿ ಕಲೆ ಹಾಕಿ ಹಿರಿಯ ಅಧಿಕಾರಿಗಳಿಗೆ ಸಲ್ಲಿಸಲು ನಿರ್ಧರಿಸಲಾಗಿದೆ.

ಅಸ್ಪಷ್ಟ ನೀತಿಯೇ ಅಕ್ರಮಕ್ಕೆ ಕಾರಣ
ಮರಳುಗಾರಿಕೆ ಕುರಿತಂತೆ ಸ್ಪಷ್ಟ ನೀತಿಯಿರದ ಕಾರಣ ಇಂತಹ ಸಮಸ್ಯೆ ಎದುರಾಗುತ್ತಿದೆ. ಮರಳಿನ ಅವಶ್ಯಕತೆಯನ್ನು ನೀಗಿಸುವ ಸಲುವಾಗಿ ನದಿ ಪಾತ್ರದಲ್ಲಿ ಮರಳು ಗಣಿಗಾರಿಕೆ ನಡೆಯುತ್ತದೆ. ಶಿಬರೂರು, ಪುಚ್ಚಾಡಿ, ದೇಲಂತಬೆಟ್ಟು, ಮಿತ್ತಬೈಲು, ಕೂಳೂರು ಮತ್ತಿತರೆಡೆ ಮರಳುಗಾರಿಕೆ ನಡೆಯುತ್ತಿದೆ ಎಂಬುದು ನಾಗರಿಕರ ಆರೋಪ.

ಮಳೆ ಇಲ್ಲದಿದ್ದರೂ ಕಿಂಡಿ ಅಣೆಕಟ್ಟು ಕುಸಿದಿದೆ. ಅಕ್ರಮ ಮರಳುಗಾರಿಕೆಯಿಂದ ಮಾತ್ರ ಇಂತಹ ಅನಾಹುತ ಸಾಧ್ಯ. ಕ್ರಮ ಕೈಗೊಳ್ಳದ ಅಧಿಕಾರಿಗಳ ನಿರ್ಲಕ್ಷéವನ್ನು ಅವಗಣಿಸಲಾಗದು. ಕಿಂಡಿ ಅಣೆಕಟ್ಟು ನಿರ್ಮಾಣ ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ರೈತರ ಹಿತಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಲಾಗುವುದು. ಸ್ಥಳಕ್ಕೆ ಭೇಟಿ ನೀಡಿ ವಾಸ್ತವ ಸ್ಥಿತಿ ಅರಿತುಕೊಂಡಿದ್ದೇನೆ.
– ಉಮಾನಾಥ ಕೋಟ್ಯಾನ್‌, ಶಾಸಕರು, ಮೂಲ್ಕಿ-ಮೂಡಬಿದಿರೆ

ಟಾಪ್ ನ್ಯೂಸ್

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Ashok-Rai

Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್‌ ಕುಮಾರ್‌ ರೈ

MDMA

Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!

Efforts to restore trust with China: Army chief Dwivedi

Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ

Dina Bhavishya

Daily Horoscope; ಹೆಚ್ಚಿನವರಿಗೆ ಮಿಶ್ರಫ‌ಲ ಕೊಡುವ ದಿನ

Bengaluru: ಕಂಬಳ ಪ್ರಶ್ನಿಸಿ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

Bengaluru: ಕಂಬಳ ಪ್ರಶ್ನಿಸಿ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Mangaluru: ಹಳೆಯ ಹೆಲ್ಮೆಟ್‌ ಇಟ್ಟು ಹೊಸ ಹೆಲ್ಮೆಟ್‌ ಕಳವು!

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ

CHowta

Mangaluru: ರೈಲು ಹಳಿ ಮೇಲೆ ಕಲ್ಲಿಟ್ಟ ಆರೋಪಿಗಳ ತಕ್ಷಣ ಬಂಧಿಸಿ: ಸಂಸದ ಕ್ಯಾ. ಚೌಟ ಆಗ್ರಹ

M.Bhandary

Costal: ಡ್ರಗ್ಸ್‌ ಮಟ್ಟ ಹಾಕಲು ಕಾನೂನು ಬದಲಾವಣೆ ಚರ್ಚೆ: ಎಂಎಲ್‌ಸಿ ಮಂಜುನಾಥ ಭಂಡಾರಿ

Mangaluru-VV

Mangaluru: ಸರಕಾರಿ ಕಾಲೇಜಿನ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗೆ ಸಂಕಷ್ಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Ashok-Rai

Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್‌ ಕುಮಾರ್‌ ರೈ

MDMA

Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!

Efforts to restore trust with China: Army chief Dwivedi

Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.