ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ
Team Udayavani, May 6, 2024, 9:30 AM IST
ಜಾರ್ಖಂಡ್: ಕೇಂದ್ರ ತನಿಖಾ ಸಂಸ್ಥೆ ಕಳೆದ ಕೆಲ ದಿನಗಳಿಂದ ರಾಂಚಿಯ ಹಲವೆಡೆ ದಾಳಿ ನಡೆಸುತ್ತಿದೆ. ಇದೀಗ ತನಿಖಾ ಸಂಸ್ಥೆ ನಡೆಸಿದ ದಾಳಿಯಲ್ಲಿ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಅವರ ಮನೆಯ ಮೇಲೆ ದಾಳಿ ನಡೆಸಿ ಸುಮಾರು 20 ಕೋಟಿಗೂ ಅಧಿಕ ಹಣವನ್ನು ವಶಕ್ಕೆ ಪಡೆದುಕೊಂಡಿದೆ.
ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿನ ಕೆಲವು ಯೋಜನೆಗಳ ಅನುಷ್ಠಾನದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿಗಳು ನಡೆದಿವೆ. ಕಳೆದ ವರ್ಷ ಫೆಬ್ರವರಿಯಲ್ಲಿ ಈ ಪ್ರಕರಣದಲ್ಲಿ ಇಲಾಖೆಯ ಮುಖ್ಯ ಇಂಜಿನಿಯರ್ ವೀರೇಂದ್ರ ಕೆ ರಾಮ್ ಅವರನ್ನು ಬಂಧಿಸಲಾಗಿತ್ತು.
ವೀರೇಂದ್ರ ರಾಮ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಅವರ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭ ಮನೆಯ ಒಳಗೆ ಬ್ಯಾಗ್ ನಲ್ಲಿ ತುಂಬಿಸಿಟ್ಟಿದ್ದ ಕಂತೆ ಕಂತೆ ಹಣಗಳನ್ನು ಕಂಡು ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ.
ಮುಖ್ಯ ಇಂಜಿನಿಯರ್ ವೀರೇಂದ್ರ ರಾಮ್ ಅವರು 100 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಗಳಿಸಿದ ಆರೋಪ ಹೊತ್ತಿದ್ದಾರೆ. ಕಳೆದ ವರ್ಷ ಅವರನ್ನು ಬಂಧಿಸಲಾಯಿತು ಮತ್ತು ಜಾರ್ಖಂಡ್ನ ಕೆಲವು ರಾಜಕಾರಣಿಗಳೊಂದಿಗಿನ ವಹಿವಾಟಿನ ವಿವರಗಳನ್ನು ಒಳಗೊಂಡ ಪೆನ್ಡ್ರೈವ್ ಅನ್ನು ವಶಕ್ಕೆ ಪಡೆದುಕೊಂಡಿದ್ದರು.
ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ಸಂಜೀವ್ ಲಾಲ್ ಮನೆ ಸೇರಿ ಹಲವು ಕಡೆ ದಾಳಿ ನಡೆಸಿದ್ದು ೨೦ ರಿಂದ ೩೦ ಕೋಟಿ ಹಣ ವಶಕ್ಕೆ ಪಡೆದಿದ್ದು ಹಣದ ಮೌಲ್ಯ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ ಹಣ ಎಣಿಕೆಗೆ ಯಂತ್ರವನ್ನು ಬಳಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಕಾರ್ಯಾಚರಣೆ ಇನ್ನೂ ಮುಂದುವರೆಯುತ್ತಿದೆ ಎಂದು ಹೇಳಲಾಗಿದೆ.
This mini mountain of cash is recovered from the servant of the personal secretary to Alamgir Alam (rural development minister of Jharkhand)
Jharkhand is poor but INDI alliance gang is sleeping on golden beds… pic.twitter.com/TOdtlF9uIV
— Mr Sinha (Modi’s family) (@MrSinha_) May 6, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ
Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.