Manipal ಖಾಸಗಿ ಬಸ್ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು
Team Udayavani, May 7, 2024, 12:27 AM IST
ಮಣಿಪಾಲ: ಖಾಸಗಿ ಬಸ್ ಮಾಲಕ ಸೈಫುದ್ದೀನ್ ಎಂಬವರು ತನ್ನದೇ ಸಂಸ್ಥೆಯ ನಿರ್ವಾಹಕರೊಬ್ಬರಿಗೆ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುವ ಬಗ್ಗೆ ದೂರು ದಾಖಲಾಗಿದೆ.
ಆರೋಪಿಯ ಬಸ್ನಲ್ಲಿ 4 ವರ್ಷಗಳಿಂದ ನಿರ್ವಾಹಕರಾಗಿರುವ ಮೊಹಮ್ಮದ್ಶಹನ್ ಅವರು ಮೇ 4ರಂದು ಮಣಿಪಾಲದಲ್ಲಿರುವ ಸಂಸ್ಥೆಯ ಕಾಂಪೌಂಡ್ ಒಳಗೆ ಕುಳಿತಿದ್ದಾಗ ಸೈಫುದ್ದೀನ್ ಬಂದು, “ನೀನು ಬೇರೊಂದು ಕಂಪೆನಿಯ ಬಸ್ಸಿನ ನಿರ್ವಾಹಕ ನವೀನ್ಗೆ ಯಾಕೆ ಬೈದದ್ದು’ ಎಂದು ಪ್ರಶ್ನಿಸಿ ಕಾಲಿನಿಂದ ಶಹನ್ ಅವರ ಹೊಟ್ಟೆಗೆ ತುಳಿದಿದ್ದಾರೆ. ಈ ವೇಳೆ ಕೆಳಗೆ ಬಿದ್ದ ಶಹನ್ನ ಅಂಗಿಯ ಕಾಲರ್ ಹಿಡಿದು ಕುತ್ತಿಗೆಯನ್ನು ಗೋಡೆಗೆ ದೂಡಿಟ್ಟು ಉಸಿರುಗಟ್ಟುವಂತೆ ಮಾಡಿದ್ದಾರೆ. ಅನಂತರ ಕಣ್ಣು ಹಾಗೂ ಮೂಗಿಗೆ ರಕ್ತ ಬರುವಂತೆ ಹೊಡೆದಿದ್ದಾರೆ. ಅಲ್ಲದೆ ಜೀವಬೆದರಿಕೆಯನ್ನೂ ಹಾಕಿದ್ದಾರೆ ಎಂದು ಮೊಹಮ್ಮದ್ ಶಹನ್ ಅವರು ಮಣಿಪಾಲ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು
Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು
Udupi: ‘ಕಲ್ಜಿಗ’ ಸಿನೆಮಾದಲ್ಲಿ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ
Udupi:ಕರಾವಳಿ ನಿರ್ಲಕ್ಷ್ಯ ಮುಂದುವರಿದರೆ ಸಿಎಂ ಮನೆ ಮುಂದೆ ಧರಣಿ: ಜನಪ್ರತಿನಿಧಿಗಳ ಎಚ್ಚರಿಕೆ
Udupi: ಬೆಡ್ ಶೀಟ್ ಮಾರುವ ನೆಪದಲ್ಲಿ ಅಂಬಲಪಾಡಿ ವೃದ್ಧೆಯ ಮನೆಗೆ ನುಗ್ಗಿದ ಅಪರಿಚಿತ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.